30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರೈತರು ಆದಷ್ಟು ಬೇಗ ಫ್ರುಟ್ಸ್ ಐಡಿ ನೋಂದಣಿ ಮಾಡಬೇಕು ಹಾಗೂ: 18 ವರ್ಷವಾದವರು ಮತದಾರರ ಪಟ್ಟಿಗೆ ತಮ್ಮ ಹೆಸರನ್ನು ನೋಂದಾವಣಿ ಮಾಡಿಕೊಳ್ಳಬೇಕು: ಪೃಥ್ವಿ ಸಾನಿಕಂ ಪತ್ರಿಕಾಗೋಷ್ಠಿ

ಬೆಳ್ತಂಗಡಿ: ರಾಜ್ಯ ಸರಕಾರದ ರೈತರು ತಮ್ಮ ಜಮೀನನ್ನು ಆಧಾರ್ ಲಿಂಕ್ ಮಾಡಿ ಆದಷ್ಟು ಬೇಗ ಫ್ರುಟ್ಸ್ ಐಡಿ ನೋಂದಣಿ ಮಾಡಬೇಕು ಹಾಗೂ ಈ ಯೋಜನೆಯ ಸದುಪಯೋಗಪಡೆದುಕೊಳ್ಳಬೇಕೆಂದು ಎಂದು ತಹಶೀಲ್ದಾರ್ ಪೃಥ್ವಿ ಸಾನಿಕಂ ಹೇಳಿದರು.

ಅವರು ನ.29ರಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಎಲ್ಲಾ ರೈತರು ಫ್ರುಟ್ಸ್ ಐಡಿ ಮಾಡಿಸುವುದರಿಂದ ಪ್ರಾಕೃತಿಕ ವಿಕೋಪದಿಂದ ಬೆಳೆನಾಶವದಲ್ಲಿ ಸರಕಾರದಿಂದ ಈ ಯೋಜನೆಯ ಮೂಲಕ ನಿಮ್ಮ ಖಾತೆಗೆ ಹಣ ಜಮಾವಾಗುತ್ತದೆ. ನಿರ್ದಿಷ್ಟ ಎಕರೆಗೆ ಈ ಯೋಜನೆ ಸೀಮಿತವಾಗುದಿಲ್ಲ. ತಮ್ಮ ಐಡಿಯನ್ನು ದಾಖಲಿಸಲು ಗ್ರಾಮ ಲೆಕ್ಕಾಧಿಕಾರಿ, ಕೃಷಿ ಇಲಾಖೆ,. ತೋಟಾಗಾರಿಕೆ ಇಲಾಖೆಯಲ್ಲಿ ಸಂಪರ್ಕಿಸಬಹುದು. ಐಡಿ ಮಾಡಲು ಆಧಾರ್‌ಕಾರ್ಡ್ ಮತ್ತು ಬ್ಯಾಂಕ್‌ಪಾಸ್‌ ಪುಸ್ತಕದ ಅವ್ಯಶಕತೆಯಿದೆ ಎಂದರು.

ಲೋಕಸಭೆ ಚುನವಾಣೆ ಬರುತ್ತಿದೆ 18 ವರ್ಷವಾದವರು ಮತದಾರರ ಪಟ್ಟಿಗೆ ತಮ್ಮ ಹೆಸರನ್ನು ನೋಂದಾವಣಿ ಮಾಡಿಕೊಳ್ಳಬೇಕು. ನೋಂದವಾಣಿ ಮಾಡಲು 1/4/2024 ಕೊನೆಯ ದಿನಾಂಕವಾಗಿದ್ದು ತಮ್ಮ ಹೆಸರನ್ನು ಹತ್ತಿರ ಬಿಎಲ್‌ಓ, ಕಾಲೇಜಿನಲ್ಲಿ, ತಾಲೂಕು ಕಚೇರಿಯ ಚುನಾವಾಣಾ ಕೇಂದ್ರದಲ್ಲಿ ದಾಖಲೆಯನ್ನು ಸಲ್ಲಿಸಬಹುದು. ಕಡತ ವಿಲೇವಾರಿಗಳು ತಡೆಯಾಗುವುದನ್ನು ತಪ್ಪಿಸಲು ಇ ಆಫೀಸ್ ತೆರದಿದೆ. ಅಧಿಕಾರಿಗಳು ಕಂಪ್ಯೂಟರ್‌ನಲ್ಲಿ ಇದನ್ನು ಅಳವಡಿಸಿದ್ದು ಯಾವ ಅಧಿಕಾರಿಗಳ ಬಳಿ ಎಷ್ಟು ಕಡತಗಳು ಬಾಕಿವೆ ಎಂದು ತಿಳಿಯುತ್ತದೆ. ತಿಂಗಳಿಗೆ ಒಮ್ಮೆ ಎಷ್ಟು ಕಡತಗಳು ಬಾಕಿವೆ ಎಂದು ನೋಡಲಾಗುತ್ತದೆ. ಕಡತವನ್ನು ಸಲ್ಲಿಸುವರು ಅಧಿಕಾರಿಗಳಿಂದ ಇ ಆಫೀಸ್ ನಂಬ್ರವನ್ನು ಪಡೆದುಕೊಂಡು ಹೋಗಬೇಕು ಎಂದು ತಿಳಿಸಿದ್ದಾರೆ.

Related posts

ಉಜಿರೆ ಶ್ರೀ ಧ.ಮಂ. ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ಘಟಕದ ಪ್ರಮುಖ 2025: ಜಿಲ್ಲಾಮಟ್ಟದ ವಸ್ತುಪ್ರದರ್ಶನ ಹಾಗೂ ಅಂತರ ಕಾಲೇಜು ಉತ್ಸವ

Suddi Udaya

ಬೆಳ್ತಂಗಡಿ: ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ವೇಣೂರು: ಗಂಭೀರ ಸ್ಥಿತಿಯಲ್ಲಿದ್ದ ವ್ಯಕ್ತಿಯೋರ್ವರನ್ನು ಅಂಬ್ಯುಲೆನ್ಸ್‌ನಲ್ಲಿ ವೇಣೂರಿನಿಂದ ಕೇವಲ 45 ನಿಮಿಷಗಳಲ್ಲಿ ಕೆಎಂಸಿ ಆಸ್ಪತ್ರೆಗೆ ತಲುಪಿಸಿದ ಚಾಲಕ ಪ್ರಸಾದ್

Suddi Udaya

ನೇತ್ರಾವತಿ ಕಾರ್ಯಾಚರಣೆ ಸ್ಥಳಕ್ಕೆ ಎಸ್.ಐ.ಟಿ ಮುಖ್ಯಸ್ಥ ಡಾ.ಪ್ರಣವ್ ಮೊಹಾಂತಿ ಭೇಟಿ

Suddi Udaya

ಗುರುವಾಯನಕೆರೆ ನಿವಾಸಿ ಜಿ. ಅಬ್ದುಲ್ ಹಮೀದ್ ನಿಧನ

Suddi Udaya

ನಿಡ್ಲೆ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya
error: Content is protected !!