23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳೆಂಜ : ಜನನಿ ಸಂಜೀವಿನಿ ಮಹಿಳಾ ಒಕ್ಕೂಟದ ಮಹಾಸಭೆ

ಕಳೆಂಜ : ಜನನಿ ಸಂಜೀವಿನಿ ಮಹಿಳಾ ಒಕ್ಕೂಟ ಕಳೆಂಜ (ರಿ ) ಇದರ ಒಕ್ಕೂಟದ ಮಹಾಸಭೆಯು ಸೈಂಟ್ ಸೆಬಾಸ್ಟಿಯನ್ ಚರ್ಚ್ ಕಾಯಾರ್ತಡ್ಕ ಇಲ್ಲಿಯ ಸಭಾಭವನದಲ್ಲಿ ಒಕ್ಕೂಟದ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ನ.28 ರಂದು ನಡೆಯಿತು.

ಮಹಾಸಭೆಯಲ್ಲಿ ಒಕ್ಕೂಟದ ಅಧ್ಯಕ್ಷರು, ಉಪಾಧ್ಯಕ್ಷರು, ಕಾರ್ಯದರ್ಶಿ, ತಾಲೂಕು ವ್ಯವಸ್ಥಾಪಕರು, ವಲಯ ಮೇಲ್ವಿಚಾರಕರು, ಪಂಚಾಯತ್ ಉಪಾಧ್ಯಕ್ಷರು, ಗ್ರಾಮ ಪಂಚಾಯತ್ ಸದಸ್ಯರು, ಒಕ್ಕೂಟದ ಪದಾಧಿಕಾರಿಗಳು, ಪಂಚಾಯತ್ ಅಭಿವೃದ್ದಿ ಅಧಿಕಾರಿ ಇವರ ಉಪಸ್ಥಿತಿಯಲ್ಲಿ ದೀಪ ಬೆಳಗಿಸುವುದರ ಮೂಲಕ ಮಹಾಸಭೆಯನ್ನು ಪ್ರಾರಂಭಿಸಲಾಯಿತು.

ತಾಲೂಕು ವ್ಯವಸ್ಥಾಪಕ ನಿತೇಶ್ ಒಕ್ಕೂಟದ ನಿಯಮ ನಿಬಂಧನೆಗಳು, ಕೃಷಿಯೇತರ ಚಟುವಟಿಕೆಗಳ ಬಗ್ಗೆ ಸಮಗ್ರವಾದ ಮಾಹಿತಿಯನ್ನು ನೀಡಿದರು ಹಾಗೂ ಒಕ್ಕೂಟದ ನೂತನ ಪದಾಧಿಕಾರಿಗಳಿಗೆ ಪದಗ್ರಹಣ ಕಾರ್ಯಕ್ರಮ ಹಾಗೂ ಒಕ್ಕೂಟದ ನಿಯಮ ಹಾಗೂ ಕಾರ್ಯವೈಖರಿ ಬಗ್ಗೆ ತಿಳಿಸಿದರು.

KSRLPS ಬೆಳ್ತಂಗಡಿಯ NRLM ನ MIS ಯಲ್ಲಿ ಉತ್ತಮ ಸಾಧನೆ ಮಾಡಿ ರಾಜ್ಯಮಟ್ಟದಲ್ಲಿ ಪ್ರಶಸ್ತಿಯನ್ನು ಪಡೆದಿರುವ ನಿತೇಶ್ ಇವರನ್ನು ಸನ್ಮಾನಿಸಲಾಯಿತು. ವಲಯ ಮೇಲ್ವಿಚಾರಕರಾದ ವೀಣಾ ಹಾಜರಿದ್ದರು. ಒಕ್ಕೂಟದ ಹೊಸ ಅಧ್ಯಕ್ಷ , ಕಾರ್ಯದರ್ಶಿ , ಕೋಶಾಧಿಕಾರಿ ಆಯ್ಕೆ ಮಾಡಲಾಯಿತು.

ಸಂಘದ ಸದಸ್ಯೆ ಶ್ರೀಮತಿ ಸರಸ್ವತಿರವರು ಕಾರ್ಯಕ್ರಮ ನಿರೂಪಣೆ ಮಾಡಿ, ಒಕ್ಕೂಟದ ಪದಾಧಿಕಾರಿ ಶ್ರೀಮತಿ ಗೀತಾರವರು ಸ್ವಾಗತಿಸಿದರು. ಕಾರ್ಯದರ್ಶಿ ಶ್ರೀಮತಿ ಜಯಶ್ರೀಯವರು ವರದಿ ಮತ್ತು ವಿಮಲ ಎನ್ ಜಮಾ ಖರ್ಚು ಮಂಡನೆ ಮಾಡಿದರು. ಈ ಸಭೆಯಲ್ಲಿ ಸಂಜೀವಿನಿ ಸಂಘದ ಸದಸ್ಯರು, ಸ್ತ್ರೀ ಶಕ್ತಿ ಸದಸ್ಯರು, ಎಮ್.ಬಿ.ಕೆ, ಎಲ್.ಸಿಆರ್ ಪಿ, ಕೃಷಿಸಖಿ, ಪಶು ಸಖಿಯರು ಹಾಜರಿದ್ದರು. ಒಕ್ಕೂಟದ ಪದಾಧಿಕಾರಿ ಉಷಾ ಧನ್ಯವಾದವಿತ್ತರು.

Related posts

ಬೆಳಾಲು ಶ್ರೀರಾಮ ಶಾಖೆ ವತಿಯಿಂದ ಕೊಲ್ಪಾಡಿ ಸುಬ್ರಮಣ್ಯೇಶ್ವರ ಮಕ್ಕಳ ಭಜನಾ ತಂಡಕ್ಕೆ ಧನಸಹಾಯ

Suddi Udaya

ಮುಳಿಯ – ಹೊಸ ಲೋಗೋ- ಅನಾವರಣ : ಮುಳಿಯ ಜುವೆಲ್ಸ್ – ಇನ್ನು ಮುಂದೆ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್

Suddi Udaya

ಅಖಿಲ ಭಾರತ ಬ್ಯಾರಿ ಪರಿಷತ್ ಮಹಿಳಾ ಘಟಕದ ವತಿಯಿಂದ ಮರ್ಹೂಮ್ ಮುಹಮ್ಮದ್ ಕುಂಜತ್ತಬೈಲು ರವರಿಗೆ ನುಡಿನಮನ.

Suddi Udaya

ಬೆಳ್ತಂಗಡಿ: ಅಂಬ್ಯೂಲೆನ್ಸ್ ಚಾಲಕನ ಮೇಲೆ ಹಲ್ಲೆ

Suddi Udaya

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳಿಂದ ಡಾ.ಹೆಗ್ಗಡೆ ಹಾಗೂ ಕನ್ಯಾಡಿ ಶ್ರೀ ಭೇಟಿ

Suddi Udaya

ಲಾಯಿಲ: “ಶರಣು ಶರಣು ಶ್ರೀ ಗುರುರಾಘವೇಂದ್ರ” ಭಕ್ತಿಗೀತೆ ಬಿಡುಗಡೆ

Suddi Udaya
error: Content is protected !!