September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳೆಂಜ : ಜನನಿ ಸಂಜೀವಿನಿ ಮಹಿಳಾ ಒಕ್ಕೂಟದ ಮಹಾಸಭೆ

ಕಳೆಂಜ : ಜನನಿ ಸಂಜೀವಿನಿ ಮಹಿಳಾ ಒಕ್ಕೂಟ ಕಳೆಂಜ (ರಿ ) ಇದರ ಒಕ್ಕೂಟದ ಮಹಾಸಭೆಯು ಸೈಂಟ್ ಸೆಬಾಸ್ಟಿಯನ್ ಚರ್ಚ್ ಕಾಯಾರ್ತಡ್ಕ ಇಲ್ಲಿಯ ಸಭಾಭವನದಲ್ಲಿ ಒಕ್ಕೂಟದ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ನ.28 ರಂದು ನಡೆಯಿತು.

ಮಹಾಸಭೆಯಲ್ಲಿ ಒಕ್ಕೂಟದ ಅಧ್ಯಕ್ಷರು, ಉಪಾಧ್ಯಕ್ಷರು, ಕಾರ್ಯದರ್ಶಿ, ತಾಲೂಕು ವ್ಯವಸ್ಥಾಪಕರು, ವಲಯ ಮೇಲ್ವಿಚಾರಕರು, ಪಂಚಾಯತ್ ಉಪಾಧ್ಯಕ್ಷರು, ಗ್ರಾಮ ಪಂಚಾಯತ್ ಸದಸ್ಯರು, ಒಕ್ಕೂಟದ ಪದಾಧಿಕಾರಿಗಳು, ಪಂಚಾಯತ್ ಅಭಿವೃದ್ದಿ ಅಧಿಕಾರಿ ಇವರ ಉಪಸ್ಥಿತಿಯಲ್ಲಿ ದೀಪ ಬೆಳಗಿಸುವುದರ ಮೂಲಕ ಮಹಾಸಭೆಯನ್ನು ಪ್ರಾರಂಭಿಸಲಾಯಿತು.

ತಾಲೂಕು ವ್ಯವಸ್ಥಾಪಕ ನಿತೇಶ್ ಒಕ್ಕೂಟದ ನಿಯಮ ನಿಬಂಧನೆಗಳು, ಕೃಷಿಯೇತರ ಚಟುವಟಿಕೆಗಳ ಬಗ್ಗೆ ಸಮಗ್ರವಾದ ಮಾಹಿತಿಯನ್ನು ನೀಡಿದರು ಹಾಗೂ ಒಕ್ಕೂಟದ ನೂತನ ಪದಾಧಿಕಾರಿಗಳಿಗೆ ಪದಗ್ರಹಣ ಕಾರ್ಯಕ್ರಮ ಹಾಗೂ ಒಕ್ಕೂಟದ ನಿಯಮ ಹಾಗೂ ಕಾರ್ಯವೈಖರಿ ಬಗ್ಗೆ ತಿಳಿಸಿದರು.

KSRLPS ಬೆಳ್ತಂಗಡಿಯ NRLM ನ MIS ಯಲ್ಲಿ ಉತ್ತಮ ಸಾಧನೆ ಮಾಡಿ ರಾಜ್ಯಮಟ್ಟದಲ್ಲಿ ಪ್ರಶಸ್ತಿಯನ್ನು ಪಡೆದಿರುವ ನಿತೇಶ್ ಇವರನ್ನು ಸನ್ಮಾನಿಸಲಾಯಿತು. ವಲಯ ಮೇಲ್ವಿಚಾರಕರಾದ ವೀಣಾ ಹಾಜರಿದ್ದರು. ಒಕ್ಕೂಟದ ಹೊಸ ಅಧ್ಯಕ್ಷ , ಕಾರ್ಯದರ್ಶಿ , ಕೋಶಾಧಿಕಾರಿ ಆಯ್ಕೆ ಮಾಡಲಾಯಿತು.

ಸಂಘದ ಸದಸ್ಯೆ ಶ್ರೀಮತಿ ಸರಸ್ವತಿರವರು ಕಾರ್ಯಕ್ರಮ ನಿರೂಪಣೆ ಮಾಡಿ, ಒಕ್ಕೂಟದ ಪದಾಧಿಕಾರಿ ಶ್ರೀಮತಿ ಗೀತಾರವರು ಸ್ವಾಗತಿಸಿದರು. ಕಾರ್ಯದರ್ಶಿ ಶ್ರೀಮತಿ ಜಯಶ್ರೀಯವರು ವರದಿ ಮತ್ತು ವಿಮಲ ಎನ್ ಜಮಾ ಖರ್ಚು ಮಂಡನೆ ಮಾಡಿದರು. ಈ ಸಭೆಯಲ್ಲಿ ಸಂಜೀವಿನಿ ಸಂಘದ ಸದಸ್ಯರು, ಸ್ತ್ರೀ ಶಕ್ತಿ ಸದಸ್ಯರು, ಎಮ್.ಬಿ.ಕೆ, ಎಲ್.ಸಿಆರ್ ಪಿ, ಕೃಷಿಸಖಿ, ಪಶು ಸಖಿಯರು ಹಾಜರಿದ್ದರು. ಒಕ್ಕೂಟದ ಪದಾಧಿಕಾರಿ ಉಷಾ ಧನ್ಯವಾದವಿತ್ತರು.

Related posts

ಕೊಕ್ಕಡ: ಸ್ವಚ್ಛತೆಯೇ ಸೇವೆ, ಶ್ರಮದಾನ, ಸಾಧಕರಿಗೆ ಸನ್ಮಾನ

Suddi Udaya

ಪ್ರೌ.ಶಾಲೆ ಗೇರುಕಟ್ಟೆಯಲ್ಲಿ 2024-25ನೇ ಸಾಲಿನ SSLC ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳನ್ನು ಸನ್ಮಾನ. ಅಲ್ಲದೆ ಮಾದಕವಸ್ತು ದುರುಪಯೋಗ ತಡೆಗಟ್ಟುವಿಕೆ ಮಾಹಿತಿ ಕಾರ್ಯಗಾರ

Suddi Udaya

ಉಳ್ತೂರಿನಲ್ಲಿ ಸಂಭ್ರಮದ ಈದ್ ಆಚರಣೆ

Suddi Udaya

ಗುಂಡೂರಿ ಅಂಗನವಾಡಿ ಕೇಂದ್ರದಲ್ಲಿ ಪೌಷ್ಠಿಕ ಆಹಾರ ಶಿಬಿರ

Suddi Udaya

ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ತೀರ್ಥಸ್ನಾನ 

Suddi Udaya

ಸಚಿವ ಹೆಚ್.ಡಿ ಕುಮಾರಸ್ವಾಮಿಯನ್ನು ಭೇಟಿ ಮಾಡಿದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ: ಅಭಿವೃದ್ಧಿಗೆ ಇರುವ ಸಾಧ್ಯತೆ ಮತ್ತು ಅವಕಾಶಗಳ ಕುರಿತು ಮಾತುಕತೆ

Suddi Udaya
error: Content is protected !!