23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಲಾಯಿಲ: ಪಿ.ಎಮ್ ವಿಶ್ವಕರ್ಮ ಯೋಜನೆಯ ಮಾಹಿತಿ ಹಾಗೂ ಆನ್ಲೈನ್ ನೋಂದಾವಣೆ ಕಾರ್ಯಕ್ರಮ

ಲಾಯಿಲ: ವಿಶ್ವಕರ್ಮ ಸಮಾಜದ ಸಂಘಟನೆಗಳ ವತಿಯಿಂದ ಮತ್ತು ಸೂಕ್ಷ್ಮ ಸಣ್ಣ ಮತ್ತು ಮಧ್ಯಮ ಉದ್ಯಮದ ಅಭಿವೃದ್ಧಿ ಕಚೇರಿ ಮಂಗಳೂರು ಇವರ ಸಹಭಾಗಿತ್ವದಲ್ಲಿ ಪಿ.ಎಮ್ ವಿಶ್ವಕರ್ಮ ಯೋಜನೆಯ ಮಾಹಿತಿ ಹಾಗೂ ಆನ್ಲೈನ್ ನೋಂದಾವಣೆ ಕಾರ್ಯಕ್ರಮವು ನ.28 ರಂದು ವಿಶ್ವಕರ್ಮ ಸಭಾಭವನ ಲಾಯಿಲದಲ್ಲಿ ನಡೆಯಿತು.

ವಿಶ್ರಾಂತ ತಹಶೀಲ್ದಾರರು ರಾಘವೇಂದ್ರ ಆಚಾರ್ಯ ಬಾರ್ಯ ಅಧ್ಯಕ್ಷತೆ ವಹಿಸಿದರು.

ಮಂಗಳೂರು ಸೂಕ್ಷ್ಮ ಸಣ್ಣ ಮತ್ತು ಮಧ್ಯಮ ಉದ್ಯಮದ ಅಭಿವೃದ್ಧಿ ಜಂಟಿ ನಿರ್ದೇಶಕ ದೇವರಾಜ್ ಕೆ ಮಾಹಿತಿ ನೀಡಿದರು.

ಮುಖ್ಯ ಅಥಿತಿಗಳಾಗಿ ಭಾಗವಹಿಸಿದ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಮಾತನಾಡಿ ಕೌಶಲ್ಯಕ್ಕೂ ವಿಶ್ವಕರ್ಮ ದೇವರಿಗೂ ಹತ್ತಿರದ ಸಂಬಂಧವಿದೆ. ಜನರ ದಿನನಿತ್ಯದ ಬದುಕಿಗೆ ಎಲ್ಲಾ ರೀತಿಯಿಂದಲೂ ಪೂರಕವಾಗುವಂತಹ ವಿದ್ಯೆ,ಕೌಶಲ್ಯ ವಿಶ್ವಕರ್ಮ ದೇವರಿಂದಾಗಿ ಸಿಕ್ಕಿತು ಎಂದು ಹೇಳುವ ಹಿನ್ನೆಲೆಯಲ್ಲಿ ನಾವೆಲ್ಲ ಶ್ರದ್ದೆ ಭಕ್ತಿಯಿಂದ ವಿಶ್ವಕರ್ಮ ದೇವರನ್ನು ಆರಾಧನೆ ಮಾಡುತ್ತೇವೆ. ತರಬೇತಿಯ ಜೊತೆಗೆ ನೇರವಾಗಿ ದೇಶದ ಆದಾಯದ ಜೊತೆಗೆ ಪ್ರತಿನಿತ್ಯ ಬದುಕುವಂತಹ ದೃಷ್ಟಿಯಲ್ಲಿ ಬದುಕು ಕಟ್ಟಿಕೊಳ್ಳುವುದಕ್ಕೆ ಪೂರಕವಾದ ಸಂಗತಿಗಳು ಬೇಕು ಅದನ್ನು ದೊರಕಿಸುವ ದೃಷ್ಟಿಯಲ್ಲಿ ಈ ಯೋಜನೆಯನ್ನು ತಂದಿದ್ದಾರೆ ಇದರ ಉಪಯೋಗವನ್ನು ಎಲ್ಲರು ಪಡೆದುಕೊಳ್ಳಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ವಿಶ್ವಕರ್ಮಾಭ್ಯುದಯ ಸಭಾ ಅಧ್ಯಕ್ಷ ಗಣೇಶ್ ಆಚಾರ್ಯ ಬಲ್ಯಾಯಕೋಡಿ, ಬೆಳ್ತಂಗಡಿ ಆನೆಗುಂದಿ ಗುರು ಸೇವಾ ಪರಿಷತ್ ಅಧ್ಯಕ್ಷ ಪುರೋಹಿತರು ವಿ. ಪ್ರಕಾಶ್, ಮಂಗಳೂರು ವಿಶ್ವಕರ್ಮ ಯುವ ಮಿಲನ್ ಉಪಾಧ್ಯಕ್ಷ ಮಂಜುನಾಥ ಆಚಾರ್ಯ, ವಿಶ್ವಕರ್ಮ ಕಮ್ಮಾರರ ಗುಡಿ ಕೈಗಾರಿಕ ಸಂಘ ಅಧ್ಯಕ್ಷ ಎಮ್.ಆನಂದ ಆಚಾರ್ಯ ಮಾಪಲಾಡಿ ಉಪಸ್ಥಿತರಿದ್ದರು.

ವಿಶ್ವಕರ್ಮಾಭ್ಯುದಯ ಸಭಾ(ರಿ.) ಕಾರ್ಯದರ್ಶಿ ಗಳಾದ ಶ್ರೀ ರಾಮ್ ಪ್ರಸಾದ್ ಎನ್‌.ಎಸ್ ಗುಂಪಲಾಜೆ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಮಚ್ಚಿನದಲ್ಲಿ ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವರಿಗೆ ಸಹಸ್ರ ಸೀಯಾಳಾಭಿಷೇಕ

Suddi Udaya

ಬಿ.ಸಿ. ರೋಡ್ ನಲ್ಲಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಬೈಕ್: ಬೆಳ್ತಂಗಡಿಯ ಇಬ್ಬರು ವಿದ್ಯಾರ್ಥಿಗಳಿಗೆ ಗಾಯ

Suddi Udaya

ಅರಸಿನಮಕ್ಕಿ: ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲೆಯಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ರಾಜ ಕೇಸರಿ ಸಂಘಟನೆಯ 541ನೇ ಸೇವಾ ಯೋಜನೆ: ಉಜಿರೆ ದೊಂಪದ ಪಲ್ಕೆ ಕೋಟಪ್ಪ ಪೂಜಾರಿಯವರಿಗೆ ಸಿಟಿ ಸ್ಕ್ಯಾನಿಂಗ್ ಮಾಡಿಸಲು ಸಹಾಯ ಹಸ್ತ

Suddi Udaya

ತಣ್ಣೀರುಪಂಥ ವಲಯ ನೂತನ ಪದಾಧಿಕಾರಿಗಳ ತರಬೇತಿ ಕಾರ್ಯಕ್ರಮ

Suddi Udaya
error: Content is protected !!