September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಲಾಯಿಲ: ಪಿ.ಎಮ್ ವಿಶ್ವಕರ್ಮ ಯೋಜನೆಯ ಮಾಹಿತಿ ಹಾಗೂ ಆನ್ಲೈನ್ ನೋಂದಾವಣೆ ಕಾರ್ಯಕ್ರಮ

ಲಾಯಿಲ: ವಿಶ್ವಕರ್ಮ ಸಮಾಜದ ಸಂಘಟನೆಗಳ ವತಿಯಿಂದ ಮತ್ತು ಸೂಕ್ಷ್ಮ ಸಣ್ಣ ಮತ್ತು ಮಧ್ಯಮ ಉದ್ಯಮದ ಅಭಿವೃದ್ಧಿ ಕಚೇರಿ ಮಂಗಳೂರು ಇವರ ಸಹಭಾಗಿತ್ವದಲ್ಲಿ ಪಿ.ಎಮ್ ವಿಶ್ವಕರ್ಮ ಯೋಜನೆಯ ಮಾಹಿತಿ ಹಾಗೂ ಆನ್ಲೈನ್ ನೋಂದಾವಣೆ ಕಾರ್ಯಕ್ರಮವು ನ.28 ರಂದು ವಿಶ್ವಕರ್ಮ ಸಭಾಭವನ ಲಾಯಿಲದಲ್ಲಿ ನಡೆಯಿತು.

ವಿಶ್ರಾಂತ ತಹಶೀಲ್ದಾರರು ರಾಘವೇಂದ್ರ ಆಚಾರ್ಯ ಬಾರ್ಯ ಅಧ್ಯಕ್ಷತೆ ವಹಿಸಿದರು.

ಮಂಗಳೂರು ಸೂಕ್ಷ್ಮ ಸಣ್ಣ ಮತ್ತು ಮಧ್ಯಮ ಉದ್ಯಮದ ಅಭಿವೃದ್ಧಿ ಜಂಟಿ ನಿರ್ದೇಶಕ ದೇವರಾಜ್ ಕೆ ಮಾಹಿತಿ ನೀಡಿದರು.

ಮುಖ್ಯ ಅಥಿತಿಗಳಾಗಿ ಭಾಗವಹಿಸಿದ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಮಾತನಾಡಿ ಕೌಶಲ್ಯಕ್ಕೂ ವಿಶ್ವಕರ್ಮ ದೇವರಿಗೂ ಹತ್ತಿರದ ಸಂಬಂಧವಿದೆ. ಜನರ ದಿನನಿತ್ಯದ ಬದುಕಿಗೆ ಎಲ್ಲಾ ರೀತಿಯಿಂದಲೂ ಪೂರಕವಾಗುವಂತಹ ವಿದ್ಯೆ,ಕೌಶಲ್ಯ ವಿಶ್ವಕರ್ಮ ದೇವರಿಂದಾಗಿ ಸಿಕ್ಕಿತು ಎಂದು ಹೇಳುವ ಹಿನ್ನೆಲೆಯಲ್ಲಿ ನಾವೆಲ್ಲ ಶ್ರದ್ದೆ ಭಕ್ತಿಯಿಂದ ವಿಶ್ವಕರ್ಮ ದೇವರನ್ನು ಆರಾಧನೆ ಮಾಡುತ್ತೇವೆ. ತರಬೇತಿಯ ಜೊತೆಗೆ ನೇರವಾಗಿ ದೇಶದ ಆದಾಯದ ಜೊತೆಗೆ ಪ್ರತಿನಿತ್ಯ ಬದುಕುವಂತಹ ದೃಷ್ಟಿಯಲ್ಲಿ ಬದುಕು ಕಟ್ಟಿಕೊಳ್ಳುವುದಕ್ಕೆ ಪೂರಕವಾದ ಸಂಗತಿಗಳು ಬೇಕು ಅದನ್ನು ದೊರಕಿಸುವ ದೃಷ್ಟಿಯಲ್ಲಿ ಈ ಯೋಜನೆಯನ್ನು ತಂದಿದ್ದಾರೆ ಇದರ ಉಪಯೋಗವನ್ನು ಎಲ್ಲರು ಪಡೆದುಕೊಳ್ಳಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ವಿಶ್ವಕರ್ಮಾಭ್ಯುದಯ ಸಭಾ ಅಧ್ಯಕ್ಷ ಗಣೇಶ್ ಆಚಾರ್ಯ ಬಲ್ಯಾಯಕೋಡಿ, ಬೆಳ್ತಂಗಡಿ ಆನೆಗುಂದಿ ಗುರು ಸೇವಾ ಪರಿಷತ್ ಅಧ್ಯಕ್ಷ ಪುರೋಹಿತರು ವಿ. ಪ್ರಕಾಶ್, ಮಂಗಳೂರು ವಿಶ್ವಕರ್ಮ ಯುವ ಮಿಲನ್ ಉಪಾಧ್ಯಕ್ಷ ಮಂಜುನಾಥ ಆಚಾರ್ಯ, ವಿಶ್ವಕರ್ಮ ಕಮ್ಮಾರರ ಗುಡಿ ಕೈಗಾರಿಕ ಸಂಘ ಅಧ್ಯಕ್ಷ ಎಮ್.ಆನಂದ ಆಚಾರ್ಯ ಮಾಪಲಾಡಿ ಉಪಸ್ಥಿತರಿದ್ದರು.

ವಿಶ್ವಕರ್ಮಾಭ್ಯುದಯ ಸಭಾ(ರಿ.) ಕಾರ್ಯದರ್ಶಿ ಗಳಾದ ಶ್ರೀ ರಾಮ್ ಪ್ರಸಾದ್ ಎನ್‌.ಎಸ್ ಗುಂಪಲಾಜೆ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಬೆಳ್ತಂಗಡಿ: ಆ.7ರಿಂದ ಯಕ್ಷಸಾಂಗತ್ಯ ಸಪ್ತಕ ತಾಳಮದ್ದಳೆ

Suddi Udaya

ಬೆಳ್ತಂಗಡಿ ಸ.ಪ.ಪೂ. ಕಾಲೇಜಿನಲ್ಲಿ ‘ರಸ್ತೆ ಸುರಕ್ಷತೆ ಮತ್ತು ವೃತ್ತಿ ಮಾರ್ಗದರ್ಶನ’ ಬಗ್ಗೆ ಉಪನ್ಯಾಸ

Suddi Udaya

ನಡ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ

Suddi Udaya

ಶ್ರೀ ರಾಮ ಕ್ಷೇತ್ರಕ್ಕೆ ಮಾಜಿ ಸಚಿವರುಗಳಾದ ರಮಾನಾಥ ರೈ, ವಿನಯ ಕುಮಾರ್ ಸೊರಕೆ ಭೇಟಿ

Suddi Udaya

ಬೆಳ್ತಂಗಡಿ ಕ್ಷೇತ್ರದ ಮಾಜಿ ಶಾಸಕ, ಬೆಳ್ತಂಗಡಿ ಗುರುದೇವ ಶಿಕ್ಷಣ ಸಂಸ್ಥೆಯ ಅಧ್ಯಕ್ಷ, ಸರಕಾರದ ಮುಖ್ಯ ಸಚೇತಕರಾಗಿ ಸೇವೆ ಸಲ್ಲಿಸಿದ್ದ ಕೆ. ವಸಂತ ಬಂಗೇರ ವಿಧಿವಶ

Suddi Udaya

ಬೆಳ್ತಂಗಡಿ: ತಾಲೂಕು ಭಂಡಾರಿ ಸಮಾಜ ಸಂಘದ ವಾರ್ಷಿಕ ಮಹಾಸಭೆ

Suddi Udaya
error: Content is protected !!