ಧರ್ಮಸ್ಥಳ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಕಾಂಗ್ರೆಸ್ ಬೆಂಬಲಿತ ನಿರ್ದೇಶಕರ ಅವಿರೋಧ ಆಯ್ಕೆ

Suddi Udaya

Updated on:

ಧರ್ಮಸ್ಥಳ: ಧರ್ಮಸ್ಥಳ ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತ ಮಂಡಳಿಗೆ ಡಿ.3 ರಂದು ಚುನಾವಣೆ ನಿಗದಿಯಾಗಿದ್ದು ಅಂತಿಮವಾಗಿ ಎಲ್ಲಾ 13 ಕಾಂಗ್ರೆಸ್ ಬೆಂಬಲಿತ ನಿರ್ದೇಶಕರುಗಳು ಅವಿರೋಧವಾಗಿ ಆಯ್ಕೆಯಾದರು.

ಸಾಮಾನ್ಯ 7 ಸ್ಥಾನದಿಂದ ಕರಿಯಪ್ಪ, ಸಂತೋಷ್ ಕುಮಾರ್, ಟಿ.ವಿ.ದೇವಸ್ಯ, ವಿ.ಜಿ.ಬಾಬು, ಕೆ.ಯು. ಜೋಸೆಫ್, ಟಿ. ಟಿ. ಬೆನ್ನಿ, ಮೋನಪ್ಪ ಪೂಜಾರಿ, ಪರಿಶಿಷ್ಟ ಜಾತಿ ಮೀಸಲು ಸ್ಥಾನದಿಂದ ಗೋಪಿ, ಪರಿಶಿಷ್ಟ ಪಂಗಡ ಮೀಸಲು ಸ್ಥಾನದಿಂದ ವೀರಪ್ಪ ಮಲೆಕುಡಿಯ, ಹಿಂದುಳಿದ ವರ್ಗ ಎ ಸ್ಥಾನಕ್ಕೆ ಸುನೀಲ್, ಹಿಂದುಳಿದ ವರ್ಗ ಬಿ ಸ್ಥಾನಕ್ಕೆ ರವೀಂದ್ರ ಗೌಡ ಹಾಗೂ ಮಹಿಳಾ ಮೀಸಲು ಸ್ಥಾನಕ್ಕೆ ಲಲಿತಾ ಮತ್ತು ಬೇಬಿ ಕೆ. ಅವಿರೋಧವಾಗಿ ಆಯ್ಕೆಯಾದರು.

ಸಹಕಾರ ಸಂಘಗಳ ಉಪ ನಿಬಂಧಕರ ಕಚೇರಿಯ ವಿಲಾಸ್ ಚುನಾವಣಾ ಅಧಿಕಾರಿಯಾಗಿದ್ದರು.

Leave a Comment

error: Content is protected !!