23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು: ಕೋಟಿ ಚೆನ್ನಯ ಸೇವಾ ಸಂಘ ಕುಕ್ಕೇಡಿ-ನಿಟ್ಟಡೆ ವತಿಯಿಂದ ಗುರು ನಮನ ಕಾರ್ಯಕ್ರಮ

ವೇಣೂರು: ಕೋಟಿ ಚೆನ್ನಯ್ಯ ಸೇವಾ ಸಂಘದಿಂದ ಕುಕ್ಕೇಡಿ-ನಿಟ್ಟೆಡೆ ವತಿಯಿಂದ ಗುರು ನಮನ ಕಾರ್ಯಕ್ರಮ ಮಂಜುಶ್ರೀ ಭಜನಾ ಮಂದಿರದಲ್ಲಿ ನಡೆಯಿತು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಆಪ್ತ ಸಮಾಲೋಚಕ ಸ್ಮಿತೇಶ್ ಎಸ್ ಬಾರ್ಯ ಮಾತನಾಡಿ ಮೌನಕ್ರಾಂತಿಯ ಮೂಲಕ ಸಮಾಜ ಪರಿವರ್ತನೆಯನ್ನು ಮಾಡಿದ ಪರಿವರ್ತನಾ ಶಿಲ್ಪಿ ಬ್ರಹ್ಮಶ್ರೀ ನಾರಾಯಣ ಗುರು ಭಾರತೀಯ ಪುನರುಜ್ಜೀವನದ ಪಿತಾಮಹ. ಇವರ ತತ್ವ ಸಿದ್ದತಾಂತಗಳನ್ನು ಅಕ್ಷರಶಃ ಪರಿಪಾಲನೆ ಮಾಡಿಕೊಂಡು ಬಂದಿದುರುವ ಕೋಟಿ ಚೆನ್ನಯ ಸೇವಾ ಸಂಘ ಸಮಾಜಕ್ಕೆ ಮಾದರಿ ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಕುಕ್ಕೇಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಅನಿತಾ ಇವರು ಕಾರ್ಯಕ್ರಮಕ್ಕೆ ಶುಭಕೋರಿದರು.

ಸಭಾ ಅಧ್ಯತೆಯನ್ನು ಸಂಘದ ಅಧ್ಯಕ್ಷ ರತ್ನಾಕರ ಸಾಲ್ಯಾನ್ ಅಂಕಾರ್ಜಾಲು ವಹಿಸಿ ಮಾತನಾಡಿ ಸಂಘದ ಸಕ್ರಿಯ ಯೋಜನೆಗಳನ್ನು ತಿಳಿಸಿ ಸಮಾಜಕ್ಕೆ ಮಾದರಿಯಾಗುತ್ತಿರುವ ನಮ್ಮ ಸಂಘಟನೆಯನ್ನು ಇನ್ನಷ್ಟು ಬಲಿಷ್ಠ ಗೊಳಿಸಲು ನಿಮ್ಮೆಲ್ಲರ ಸಹಕಾರ ಸದಾ ಇರಲಿ ಎಂದು ತಿಳಿಸಿದರು.

ಕು.ಅನನ್ಯ ಹಾಗೂ ಕು. ಪ್ರತಿಕ್ಷಾ, ಕು.ಪ್ರಜ್ಞಾ, ಕು. ದಾಕ್ಷಾ, ಇವರು ಭಕ್ತಿ ಗೀತೆಯೊಂದಿಗೆ ಪ್ರಾರಂಭವಾದ ಕಾರ್ಯಕ್ರಮವು ಸಂಘದ ಗೌರವ ಅಧ್ಯಕ್ಷ ಅಮ್ಮಾಜಿ ಪೂಜಾರಿ ಇವರ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಸಂಘದ ಕಾರ್ಯದರ್ಶಿ ರವಿ ಉಲ್ತುರ್ ಸಂಘದ ವರದಿ ಮಂಡಿಸಿದರು.

ಯಶಾಲಾತಿ ಅಮ್ಮಾಜಿ ಕೋಟ್ಯಾನ್ಇವರು ಮಕ್ಕಳಿಗೆ ಆಟೋಟ ಸ್ಫರ್ಧೆ ಹಾಗೂ ಮನೋರಂಜನೆ ಕಾರ್ಯಕ್ರಮ ನಡೆಸಿಕೊಟ್ಟರು. ವಿದ್ಯಾ ಕ್ಷೇತ್ರದಲ್ಲಿ ಸಾಧನೆಗೈದ ಕು.ಪ್ರಜ್ಞಾ ಪಿ.ಯು. ಸಿ,ನಾಟಿ ವೈದೇ ಮುತ್ತು ಪೂಜಾರ್ತಿ,ಸಂಘದ ಚಟುವಟಿಕೆಗೆ ಸಹಕಾರ ನೀಡುತ್ತಿರುವ ಲೋಕಯ್ಯ ಪೂಜಾರಿ ಕಂಗಿತ್ತುಲ್ ಗೌರವಿಸಲಾಯಿತು.

ಪದ್ಮನಾಭ ಬಿಯಾದಡಿ ಸತೀಶ್ ಕೆರಿಯರ್ ಪ್ರದೀಪ್ ಕೂಟೇಲ್ ಜಗದೀಶ್ ಬುಲೆಕ್ಕರ ನಿತಿನ್ ಪಾರೋಟ್ಟು ಸತೀಶ್ ಮಂಜೊಲೋಕ್ ರಾಜೇಂದ್ರ ಕೋಟ್ಯಾನ್ ಚಂದ್ರ ಬರಮೇಲು ಸಹಕರಿಸಿದರು.

ಲೋಕಯ್ಯ ಪೂಜಾರಿ ಕಾರ್ಯಕ್ರಮ ನಿರೂಪಿಸಿದರು. ನವೀನ್ ಬುಲೆಕ್ಕರ ಧನ್ಯವಾದವಿತ್ತರು.

Related posts

ನೇತ್ರಾವತಿ ನದಿಯ ಸ್ನಾನಘಟ್ಟದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ; ಕಾರ್ಯಾಚರಣೆ ನಡೆಸಿ ಪೊಲೀಸರಿಗೊಪ್ಪಿಸಿದ ಶೌರ್ಯ ಸ್ವಯಂಸೇವಕರು

Suddi Udaya

ಡಿ.28: ಕೊಯ್ಯೂರಿನಲ್ಲಿ 19ನೇ ಬೆಳ್ತಂಗಡಿ ತಾಲೂಕು ಸಾಹಿತ್ಯ ಸಮ್ಮೇಳನ

Suddi Udaya

ದಾಂಪತ್ಯ ಜೀವನಕ್ಕೆ ಕಾಲಿರಿಸಿದ ನವೀನ್ ಮತ್ತು ಹರಿಣಾಕ್ಷಿ ನವ ದಂಪತಿಗಳಿಂದ ನಂದಗೋಕುಲ ಗೋಶಾಲೆಗೆ ರೂ 1.47 ಲಕ್ಷ ಗೋ ನಿಧಿ ಹಸ್ತಾಂತರ

Suddi Udaya

ಜೆಸಿಐ ಭಾರತದ ರಾಷ್ಟ್ರೀಯ ಅಧ್ಯಕ್ಷ ಸಿ.ಆರ್ ರಿಕೇಶ್ ಶರ್ಮಾ ಬಳಂಜ ಶಾಲೆಗೆ ಭೇಟಿ, ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ವತಿಯಿಂದ ಬಳಂಜ ಶಾಲೆಗೆ ರೂ.1ಲಕ್ಷ ಮೊತ್ತದ ಯೋಜನೆಗಳ ಹಸ್ತಾಂತರ

Suddi Udaya

ಎಸ್ಸೆಸ್ಸೆಲ್ಸಿ ಪರೀಕ್ಷೆ ಮರುಮೌಲ್ಯಮಾಪನ: ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯ ವಿದ್ಯಾರ್ಥಿನಿ ದೀಪ್ತಿ ರಾಜ್ಯಕ್ಕೆ ಹತ್ತನೇ ಸ್ಥಾನ

Suddi Udaya

ಹೋಟೆಲ್ ಸಮತಾ ಮಾಲಕರಾಗಿದ್ದ ವಿಠಲ್ ಭಟ್ ನಿಧನ

Suddi Udaya
error: Content is protected !!