22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಹಿರಿಯ ಅಡಿಕೆ ವ್ಯಾಪಾರಿಯಾಗಿದ್ದ ಟಿ. ಉಮರಬ್ಬ ನಿಡಿಗಲ್ ನಿಧನ

ಬೆಳ್ತಂಗಡಿ: ಮೂಲತಃ ಮುಡಿಪ್ಪು ತಲೆಕ್ಕಿ‌‌ನಿವಾಸಿ, ಪ್ರಸ್ತುತ ಕಲ್ಮಂಜ ಗ್ರಾಮದ ನಿಡಿಗಲ್ ಬದ್ರಿಯಾ ಜುಮ್ಮಾ ಮಸ್ಜಿದ್ ಸನಿಹದಲ್ಲಿ‌ ನೆಲೆಸಿದ್ದ,‌ ಹಿರಿಯ ಅಡಿಕೆ ವ್ಯಾಪಾರಿ ಟಿ ಉಮರಬ್ಬ (70ವ) ಅವರು ಅಲ್ಪ ಕಾಲದ ಅಸೌಖ್ಯದಿಂದ ಮಂಗಳೂರಿನ‌ ಖಾಸಗಿ ಆಸ್ಪತ್ರೆಯಲ್ಲಿ ನ.30 ರಂದು ನಿಧನರಾದರು.

ಇವರು ಬದ್ರಿಯಾ ಜುಮ್ಮಾ ಮಸ್ಜಿದ್ ಸೋಮಂತಡ್ಕ ಇಲ್ಲಿನ ಆಡಳಿತ ಸಮಿತಿ ಮತ್ತು ಕುತುಬಿಯತ್ ಸಮಿತಿಯಲ್ಲಿ ದೀರ್ಘ ಕಾಲ ಪದಾಧಿಕಾರಿಯಾಗಿದ್ದು, ನಿಡಿಗಲ್ ಮಸ್ಜಿದ್ ನಿರ್ಮಾಣವಾದ ಬಳಿಕ ಅಲ್ಲಿನ ಆಡಳಿತ ಮಂಡಳಿಯಲ್ಲಿ ಅಧ್ಯಕ್ಷರಾಗಿ, ಸದಸ್ಯರಾಗಿ ಸೇವೆ ಸೇವೆ ಸಲ್ಲಿಸಿದ್ದರು. ಅಡಿಕೆ ವ್ಯಾಪಾರಿಯಾಗಿ ತಾಲೂಕಿನಾಧ್ಯಂತ ಹೆಸರುವಾಸಿಯಾಗಿದ್ದರು. ಜೊತೆಗೆ ಅಡುಗೆ ಪಾಕ ತಜ್ಞರಾಗಿಯೂ ಪ್ರಸಿದ್ಧರಾಗಿದ್ದರು.

ಮೃತರು ಪತ್ನಿ ಐಸಮ್ಮ, ಮಕ್ಕಳಾದ ಮೊಯಿದಿನ್‌ಕುಂಞಿ(ಹಮೀದ್), ಮುಹಮ್ಮದ್ ಶರೀಫ್, ಝಕರಿಯಾ,‌ ಫಾತಿಮಾ ಮತ್ತು ರುಕಿಯಾ ಹಾಗೂ ಬಂಧುವರ್ಗದವರನ್ನು ಅಗಲಿದ್ದಾರೆ..

Related posts

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಫೋನಿಕ್ ಸೌಂಡ್ ಗಳ ಉಚ್ಚಾರಣೆ ಮತ್ತು ಬಳಕೆ ಬಗ್ಗೆ ಕಾರ್ಯಾಗಾರ

Suddi Udaya

ಕೋವಿಡ್ ನಲ್ಲಿ ಹೆತ್ತವರನ್ನು ಕಳೆದುಕೊಂಡವರ ಮಕ್ಕಳಿಗೆ ಶಿಕ್ಷಣಕ್ಕಾಗಿ ಶುಲ್ಕ ವಿತರಣೆ

Suddi Udaya

ಮತದಾರರ ಜಾಗೃತಿ ಆಂದೋಲನ: ಕಾಲ್ನಡಿಗೆ ಜಾಥಾ ಚುನಾವಣೆ – ನಮ್ಮ ಹೊಣೆ ಬೀದಿ ನಾಟಕ ಪ್ರದರ್ಶನ

Suddi Udaya

ವೇಣೂರು: ಹಂದೇವ್ ನಲ್ಲಿ ಸಂಜೀವ ದೇವಾಡಿಗರವರಿಗೆ ನಿರ್ಮಿಸಿ ಕೊಡಲಾದ ವಾತ್ಸಲ್ಯ ಮನೆಯನ್ನು ಎಸ್ ಡಿ‌ ಎಮ್ ಕ್ಷೇಮವನ ಬೆಂಗಳೂರು ಇದರ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶ್ರೀಮತಿ ಶ್ರದ್ಧಾ ಅಮಿತ್ ರವರಿಂದ ಹಸ್ತಾಂತರ

Suddi Udaya

ನ.1: ಕೊಕ್ಕಡ ಉಪ್ಪಾರಪಳಿಕೆಯಲ್ಲಿ ದೀಪಾವಳಿ ಪ್ರಯುಕ್ತ ಗೋ ಪೂಜೆ ಹಾಗೂ ದೋಸೆ ಹಬ್ಬ

Suddi Udaya

ಧಾರಾಕಾರ ಮಳೆಗೆ ಕುಸಿದು ಬಿದ್ದ ಸರಳೀಕಟ್ಟೆ ಹಿ.ಪ್ರಾ. ಶಾಲೆಯ ಹಂಚು

Suddi Udaya
error: Content is protected !!