24.7 C
ಪುತ್ತೂರು, ಬೆಳ್ತಂಗಡಿ
May 17, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಆದಿದ್ರಾವಿಡ ಸಮಾಜ ಸೇವಾ ಸಂಘ ತಾಲೂಕು ಘಟಕದ ಸಮಿತಿ ರಚನೆ

ಪಡಂಗಡಿ: ಆದಿದ್ರಾವಿಡ ಸಮಾಜ ಸೇವಾ ಸಂಘ (ರಿ) ತಾಲೂಕು ಘಟಕ ಬೆಳ್ತಂಗಡಿ ಇದರ ಆಶ್ರಯದಲ್ಲಿ, ಪಡಂಗಡಿ ಗ್ರಾಮ ಘಟಕದ ಸಭೆಯು ನ.26ರಂದು ಪೊಯ್ಯಗುಡ್ಡೆಯ ಶ್ರೀ ಸತ್ಯಸಾರಮಾನಿ ದೈವಸ್ಥಾನದ ಆವರಣದಲ್ಲಿ ತಾಲೂಕು ಘಟಕದ ಅಧ್ಯಕ್ಷ ದಿನೇಶ್ ಕೆ ಕೊಕ್ಕಡ ರವರ ಅಧ್ಯಕ್ಷತೆಯಲ್ಲಿ ನಡೆಯಿತು.

ಸಭೆಯಲ್ಲಿ ತಾಲೂಕು ಘಟಕದ ಉಪಾಧ್ಯಕ್ಷ ರಾಮು ಪಡಂಗಡಿ, ಗೌರವ ಸಲಹೆಗಾರ ಗೋಪಾಲಕೃಷ್ಣ ಕುಕ್ಕಳ, ತಾಲೂಕಿನ ನಿಕಟಪೂರ್ವ ಕಾರ್ಯದರ್ಶಿ ಶರತ್ ಕೊಕ್ಕಡ, ಹಿರಿಯರಾದ ಶಂಕರ್, ತನಿಯಪ್ಪ, ಕೃಷ್ಣಪ್ಪ ಮುಂತಾದವರು ಉಪಸ್ಥಿತರಿದ್ದರು.

ಗೋಪಾಲಕೃಷ್ಣ ಕುಕ್ಕಳ ಪ್ರಸ್ತಾವಿಕವಾಗಿ ಮಾತಾಡುತ್ತಾ ಆದಿದ್ರಾವಿಡ ಸಮಾಜ ಸೇವಾ ಸಂಘದ ಹಿನ್ನೆಲೆ, ಜಾತಿ ಪ್ರಮಾಣಪತ್ರ ಪಡೆಯುವಲ್ಲಿ ಸಮುದಾಯ ಎದುರಿಸುತ್ತಿರುವ ಸಮಸ್ಯೆಗಳು, ಮತ್ತು ಈ ಸಮಸ್ಯೆಗಳನ್ನು ಎದುರಿಸಲು ಆದಿದ್ರಾವಿಡ ಸಮುದಾಯ ಸಂಘಟಿತರಾಗಬೇಕಾದ ಅನಿವಾರ್ಯತೆಯನ್ನು ಸಭೆಗೆ ವಿವರಿಸಿದರು.

ತಾಲೂಕು ಅಧ್ಯಕ್ಷ ದಿನೇಶ್ ಕೆ ಕೊಕ್ಕಡ ಮಾತನಾಡುತ್ತಾ ಆದಿದ್ರಾವಿಡ ಸಮುದಾಯದ ರಾಜ್ಯ ಸಮಾವೇಶದಲ್ಲಿ ಸರಕಾರಕ್ಕೆ ಸಲ್ಲಿಸಲಿರುವ ಹಕ್ಕೊತ್ತಾಯದ ಅಂಶಗಳನ್ನು ಸಭೆಗೆ ವಿವರಿಸಿ, ಸಮಾವೇಶದ ಯಶಸ್ಸಿಗೆ ಎಲ್ಲರೂ ಸಂಘಟಿತರಾಗಿ ಸಹಕರಿಸಲು ಕರೆನೀಡಿದರು.

ಆದಿದ್ರಾವಿಡ ಸಮಾಜ ಸೇವಾ ಸಂಘ (ರಿ) ಬೆಳ್ತಂಗಡಿ, ಗ್ರಾಮ ಘಟಕ ಪಡಂಗಡಿಗೆ ನೂತನ ಅಧ್ಯಕ್ಷರಾಗಿ ಬಾಬು ಕೆ ಪಡ್ತಿರೆ, ಉಪಾಧ್ಯಕ್ಷರಾಗಿ ಚಂದ್ರಶೇಖರ್, ಪ್ರಧಾನ ಕಾರ್ಯದರ್ಶಿಯಾಗಿ ಪ್ರಸಾದ್ ಕೆ. ಉಪಕಾರ್ಯದರ್ಶಿಯಾಗಿ ಶ್ರೀಮತಿ ಸುಶೀಲಾ, ಕೋಶಾಧಿಕಾರಿಯಾಗಿ ಬಾಬು ಪಿ, ಗೌರವಾಧ್ಯಕ್ಷರಾಗಿ ಶಂಕರ್, ಗೌರವ ಸಲಹೆಗಾರರಾಗಿ ಕೃಷ್ಣಪ್ಪ ಹಾಗೂ ತನಿಯಪ್ಪ ಇವರುಗಳು ಆಯ್ಕೆಯಾದರು.

ತಾಲೂಕು ಘಟಕದ ಉಪಾಧ್ಯಕ್ಷ ರಾಮು ಪಡಂಗಡಿ ಸ್ವಾಗತಿಸಿದರು. ನೂತನ ಅಧ್ಯಕ್ಷ ಬಾಬು ಪಡ್ತಿರೆ ವಂದಿಸಿದರು.

Related posts

‘ಮಕ್ಕಳಿಗೆ ಓದುವುದು ಎಷ್ಟು ಮಹತ್ವ’ ವಿಷಯದ ಕುರಿತು ಪದ್ಮಲತಾ ಮೋಹನ್ ನಿಡ್ಲೆಯವರಿಂದ ಉಪನ್ಯಾಸ

Suddi Udaya

ಬೆಳ್ತಂಗಡಿ ಶಾಂತಿಶ್ರೀ ಮಹಿಳಾ ಸಮಾಜ ವತಿಯಿಂದ ಯಕ್ಷಗಾನ ಶೈಲಿಯ ಕಾವ್ಯವಾಚನ- ಪ್ರವಚನ ವೈಭವದ ಶ್ರೀಜಿನ ಶಾಂತಿನಾಥ ಚರಿತೆ

Suddi Udaya

ಅಳದಂಗಡಿ ಪ್ರಾ.ಕೃ.ಪ.ಸ.ಸಂಘದ ಚುನಾವಣೆಯ ಕಾಂಗ್ರೆಸ್ ಬೆಂಬಲಿತ ವಿಜೇತ ಹಾಗೂ ಸ್ಪರ್ದಿಸಿದ ಅಭ್ಯರ್ಥಿಗಳಿಂದ ಕಾರ್ಯಕರ್ತರಿಗೆ ಅಭಿನಂದನಾ ಸಮಾರಂಭ

Suddi Udaya

ಬೆಳ್ತಂಗಡಿ ಪಿ.ಎಲ್.ಡಿ ಬ್ಯಾಂಕಿನ ನಿವೃತ್ತ ಸಿಬ್ಬಂದಿ ನವೀನ್ ಕುಮಾರ್ ಕೆ.ಎನ್. ನಿಧನ

Suddi Udaya

ರಾಜ್ಯಮಟ್ಟದ ಕರಾಟೆ ಸ್ಪರ್ಧೆ: ಅಳದಂಗಡಿ ಸೈಂಟ್ ಪೀಟರ್ ಕ್ಲೇವರ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಪ್ರೇಕ್ಷಿತ್ ತೃತೀಯ ಸ್ಥಾನ

Suddi Udaya

ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ನಾಗ ಬನದಲ್ಲಿ ದೇವರಿಗೆ ನಾಗತಂಬಿಲ ಹಾಗೂ ವಿಶೇಷ ಪೂಜೆ

Suddi Udaya
error: Content is protected !!