April 2, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಆದಿದ್ರಾವಿಡ ಸಮಾಜ ಸೇವಾ ಸಂಘ ತಾಲೂಕು ಘಟಕದ ಸಮಿತಿ ರಚನೆ

ಪಡಂಗಡಿ: ಆದಿದ್ರಾವಿಡ ಸಮಾಜ ಸೇವಾ ಸಂಘ (ರಿ) ತಾಲೂಕು ಘಟಕ ಬೆಳ್ತಂಗಡಿ ಇದರ ಆಶ್ರಯದಲ್ಲಿ, ಪಡಂಗಡಿ ಗ್ರಾಮ ಘಟಕದ ಸಭೆಯು ನ.26ರಂದು ಪೊಯ್ಯಗುಡ್ಡೆಯ ಶ್ರೀ ಸತ್ಯಸಾರಮಾನಿ ದೈವಸ್ಥಾನದ ಆವರಣದಲ್ಲಿ ತಾಲೂಕು ಘಟಕದ ಅಧ್ಯಕ್ಷ ದಿನೇಶ್ ಕೆ ಕೊಕ್ಕಡ ರವರ ಅಧ್ಯಕ್ಷತೆಯಲ್ಲಿ ನಡೆಯಿತು.

ಸಭೆಯಲ್ಲಿ ತಾಲೂಕು ಘಟಕದ ಉಪಾಧ್ಯಕ್ಷ ರಾಮು ಪಡಂಗಡಿ, ಗೌರವ ಸಲಹೆಗಾರ ಗೋಪಾಲಕೃಷ್ಣ ಕುಕ್ಕಳ, ತಾಲೂಕಿನ ನಿಕಟಪೂರ್ವ ಕಾರ್ಯದರ್ಶಿ ಶರತ್ ಕೊಕ್ಕಡ, ಹಿರಿಯರಾದ ಶಂಕರ್, ತನಿಯಪ್ಪ, ಕೃಷ್ಣಪ್ಪ ಮುಂತಾದವರು ಉಪಸ್ಥಿತರಿದ್ದರು.

ಗೋಪಾಲಕೃಷ್ಣ ಕುಕ್ಕಳ ಪ್ರಸ್ತಾವಿಕವಾಗಿ ಮಾತಾಡುತ್ತಾ ಆದಿದ್ರಾವಿಡ ಸಮಾಜ ಸೇವಾ ಸಂಘದ ಹಿನ್ನೆಲೆ, ಜಾತಿ ಪ್ರಮಾಣಪತ್ರ ಪಡೆಯುವಲ್ಲಿ ಸಮುದಾಯ ಎದುರಿಸುತ್ತಿರುವ ಸಮಸ್ಯೆಗಳು, ಮತ್ತು ಈ ಸಮಸ್ಯೆಗಳನ್ನು ಎದುರಿಸಲು ಆದಿದ್ರಾವಿಡ ಸಮುದಾಯ ಸಂಘಟಿತರಾಗಬೇಕಾದ ಅನಿವಾರ್ಯತೆಯನ್ನು ಸಭೆಗೆ ವಿವರಿಸಿದರು.

ತಾಲೂಕು ಅಧ್ಯಕ್ಷ ದಿನೇಶ್ ಕೆ ಕೊಕ್ಕಡ ಮಾತನಾಡುತ್ತಾ ಆದಿದ್ರಾವಿಡ ಸಮುದಾಯದ ರಾಜ್ಯ ಸಮಾವೇಶದಲ್ಲಿ ಸರಕಾರಕ್ಕೆ ಸಲ್ಲಿಸಲಿರುವ ಹಕ್ಕೊತ್ತಾಯದ ಅಂಶಗಳನ್ನು ಸಭೆಗೆ ವಿವರಿಸಿ, ಸಮಾವೇಶದ ಯಶಸ್ಸಿಗೆ ಎಲ್ಲರೂ ಸಂಘಟಿತರಾಗಿ ಸಹಕರಿಸಲು ಕರೆನೀಡಿದರು.

ಆದಿದ್ರಾವಿಡ ಸಮಾಜ ಸೇವಾ ಸಂಘ (ರಿ) ಬೆಳ್ತಂಗಡಿ, ಗ್ರಾಮ ಘಟಕ ಪಡಂಗಡಿಗೆ ನೂತನ ಅಧ್ಯಕ್ಷರಾಗಿ ಬಾಬು ಕೆ ಪಡ್ತಿರೆ, ಉಪಾಧ್ಯಕ್ಷರಾಗಿ ಚಂದ್ರಶೇಖರ್, ಪ್ರಧಾನ ಕಾರ್ಯದರ್ಶಿಯಾಗಿ ಪ್ರಸಾದ್ ಕೆ. ಉಪಕಾರ್ಯದರ್ಶಿಯಾಗಿ ಶ್ರೀಮತಿ ಸುಶೀಲಾ, ಕೋಶಾಧಿಕಾರಿಯಾಗಿ ಬಾಬು ಪಿ, ಗೌರವಾಧ್ಯಕ್ಷರಾಗಿ ಶಂಕರ್, ಗೌರವ ಸಲಹೆಗಾರರಾಗಿ ಕೃಷ್ಣಪ್ಪ ಹಾಗೂ ತನಿಯಪ್ಪ ಇವರುಗಳು ಆಯ್ಕೆಯಾದರು.

ತಾಲೂಕು ಘಟಕದ ಉಪಾಧ್ಯಕ್ಷ ರಾಮು ಪಡಂಗಡಿ ಸ್ವಾಗತಿಸಿದರು. ನೂತನ ಅಧ್ಯಕ್ಷ ಬಾಬು ಪಡ್ತಿರೆ ವಂದಿಸಿದರು.

Related posts

ಅರಸಿನಮಕ್ಕಿ: ಕಾಪು-ಉಪರಡ್ಕ ಬಳಿ ರಸ್ತೆಗೆ ಬೃಹತ್ ಗಾತ್ರದ ಮರ ಬಿದ್ದು 2 ವಿದ್ಯುತ್ ಕಂಬಗಳಿಗೆ ಹಾನಿ

Suddi Udaya

ಲಾಯಿಲ ಮತಗಟ್ಟೆಗೆ ವಿಧಾನ ಪರಿಷತ್ ಶಾಸಕ ಹರೀಶ್ ಕುಮಾರ್ ಭೇಟಿ

Suddi Udaya

ನ.9: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕಂಚಿ ಕಾಮಕೋಟಿ ಪೀಠಾಧಿಪತಿ ಪೂಜ್ಯ ಶಂಕರವಿಜಯೇಂದ್ರ ಸರಸ್ವತಿ ಶಂಕರಾಚಾರ್ಯ ಸ್ವಾಮೀಜಿ ಪುರಪ್ರವೇಶ

Suddi Udaya

ಉಜಿರೆ : ಎಸ್.ಡಿ.ಎಂ. ಬಿ. ವೋಕ್ ವಿಭಾಗದ ವತಿಯಿಂದ ರಾಜ್ಯ ಮಟ್ಟದ ಅಂತರ್ ಕಾಲೇಜು ಫೆಸ್ಟ್ ‘ಬಿ. ವೋಕ್ ಉತ್ಸವ

Suddi Udaya

ಮಡಂತ್ಯಾರು ಗ್ರಾ. ಪಂ. ನಲ್ಲಿ ಸ್ವಚ್ಛ ಸಂಕೀರ್ಣದ ಉದ್ಘಾಟಣೆ

Suddi Udaya

ಶ್ರೀ ರಾಮ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

Suddi Udaya
error: Content is protected !!