23.5 C
ಪುತ್ತೂರು, ಬೆಳ್ತಂಗಡಿ
June 8, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಆದಿದ್ರಾವಿಡ ಸಮಾಜ ಸೇವಾ ಸಂಘ ತಾಲೂಕು ಘಟಕದ ಸಮಿತಿ ರಚನೆ

ಪಡಂಗಡಿ: ಆದಿದ್ರಾವಿಡ ಸಮಾಜ ಸೇವಾ ಸಂಘ (ರಿ) ತಾಲೂಕು ಘಟಕ ಬೆಳ್ತಂಗಡಿ ಇದರ ಆಶ್ರಯದಲ್ಲಿ, ಪಡಂಗಡಿ ಗ್ರಾಮ ಘಟಕದ ಸಭೆಯು ನ.26ರಂದು ಪೊಯ್ಯಗುಡ್ಡೆಯ ಶ್ರೀ ಸತ್ಯಸಾರಮಾನಿ ದೈವಸ್ಥಾನದ ಆವರಣದಲ್ಲಿ ತಾಲೂಕು ಘಟಕದ ಅಧ್ಯಕ್ಷ ದಿನೇಶ್ ಕೆ ಕೊಕ್ಕಡ ರವರ ಅಧ್ಯಕ್ಷತೆಯಲ್ಲಿ ನಡೆಯಿತು.

ಸಭೆಯಲ್ಲಿ ತಾಲೂಕು ಘಟಕದ ಉಪಾಧ್ಯಕ್ಷ ರಾಮು ಪಡಂಗಡಿ, ಗೌರವ ಸಲಹೆಗಾರ ಗೋಪಾಲಕೃಷ್ಣ ಕುಕ್ಕಳ, ತಾಲೂಕಿನ ನಿಕಟಪೂರ್ವ ಕಾರ್ಯದರ್ಶಿ ಶರತ್ ಕೊಕ್ಕಡ, ಹಿರಿಯರಾದ ಶಂಕರ್, ತನಿಯಪ್ಪ, ಕೃಷ್ಣಪ್ಪ ಮುಂತಾದವರು ಉಪಸ್ಥಿತರಿದ್ದರು.

ಗೋಪಾಲಕೃಷ್ಣ ಕುಕ್ಕಳ ಪ್ರಸ್ತಾವಿಕವಾಗಿ ಮಾತಾಡುತ್ತಾ ಆದಿದ್ರಾವಿಡ ಸಮಾಜ ಸೇವಾ ಸಂಘದ ಹಿನ್ನೆಲೆ, ಜಾತಿ ಪ್ರಮಾಣಪತ್ರ ಪಡೆಯುವಲ್ಲಿ ಸಮುದಾಯ ಎದುರಿಸುತ್ತಿರುವ ಸಮಸ್ಯೆಗಳು, ಮತ್ತು ಈ ಸಮಸ್ಯೆಗಳನ್ನು ಎದುರಿಸಲು ಆದಿದ್ರಾವಿಡ ಸಮುದಾಯ ಸಂಘಟಿತರಾಗಬೇಕಾದ ಅನಿವಾರ್ಯತೆಯನ್ನು ಸಭೆಗೆ ವಿವರಿಸಿದರು.

ತಾಲೂಕು ಅಧ್ಯಕ್ಷ ದಿನೇಶ್ ಕೆ ಕೊಕ್ಕಡ ಮಾತನಾಡುತ್ತಾ ಆದಿದ್ರಾವಿಡ ಸಮುದಾಯದ ರಾಜ್ಯ ಸಮಾವೇಶದಲ್ಲಿ ಸರಕಾರಕ್ಕೆ ಸಲ್ಲಿಸಲಿರುವ ಹಕ್ಕೊತ್ತಾಯದ ಅಂಶಗಳನ್ನು ಸಭೆಗೆ ವಿವರಿಸಿ, ಸಮಾವೇಶದ ಯಶಸ್ಸಿಗೆ ಎಲ್ಲರೂ ಸಂಘಟಿತರಾಗಿ ಸಹಕರಿಸಲು ಕರೆನೀಡಿದರು.

ಆದಿದ್ರಾವಿಡ ಸಮಾಜ ಸೇವಾ ಸಂಘ (ರಿ) ಬೆಳ್ತಂಗಡಿ, ಗ್ರಾಮ ಘಟಕ ಪಡಂಗಡಿಗೆ ನೂತನ ಅಧ್ಯಕ್ಷರಾಗಿ ಬಾಬು ಕೆ ಪಡ್ತಿರೆ, ಉಪಾಧ್ಯಕ್ಷರಾಗಿ ಚಂದ್ರಶೇಖರ್, ಪ್ರಧಾನ ಕಾರ್ಯದರ್ಶಿಯಾಗಿ ಪ್ರಸಾದ್ ಕೆ. ಉಪಕಾರ್ಯದರ್ಶಿಯಾಗಿ ಶ್ರೀಮತಿ ಸುಶೀಲಾ, ಕೋಶಾಧಿಕಾರಿಯಾಗಿ ಬಾಬು ಪಿ, ಗೌರವಾಧ್ಯಕ್ಷರಾಗಿ ಶಂಕರ್, ಗೌರವ ಸಲಹೆಗಾರರಾಗಿ ಕೃಷ್ಣಪ್ಪ ಹಾಗೂ ತನಿಯಪ್ಪ ಇವರುಗಳು ಆಯ್ಕೆಯಾದರು.

ತಾಲೂಕು ಘಟಕದ ಉಪಾಧ್ಯಕ್ಷ ರಾಮು ಪಡಂಗಡಿ ಸ್ವಾಗತಿಸಿದರು. ನೂತನ ಅಧ್ಯಕ್ಷ ಬಾಬು ಪಡ್ತಿರೆ ವಂದಿಸಿದರು.

Related posts

ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಯ ನಿವೃತ್ತ ವೈದ್ಯಾಧಿಕಾರಿ ಡಾ| ಆದಂ ಉಸ್ಮಾನ್ ನಿಧನ

Suddi Udaya

ಅರಸಿನಮಕ್ಕಿ: ಶ್ರೀ ಕ್ಷೇತ್ರ ಧರ್ಮಸ್ಥಳದ  ವಾತ್ಸಲ್ಯ ಮನೆ ಹಸ್ತಾಂತರ

Suddi Udaya

ಮಾಜಿ ಕೇಂದ್ರ ಸಚಿವ ಅನುರಾಗ್ ಸಿಂಗ್ ಠಾಕೂರ್ ರವರನ್ನು ಭೇಟಿಯಾದ ಶಾಸಕ ಹರೀಶ್ ಪೂಂಜ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಭೇಟಿ

Suddi Udaya

ಜೂ.30ರಿಂದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಅಭಿಯಾನ ಆರಂಭ

Suddi Udaya

ಗುರುವಾಯನಕೆರೆ: ಸುಪ್ರಿಂ ಎಲೆಕ್ಟ್ರಾನಿಕ್ ನಲ್ಲಿ ದೀಪಾವಳಿ ಪ್ರಯುಕ್ತ ಭರ್ಜರಿ ಡಿಸ್ಕೌಂಟ್ ಸೇಲ್

Suddi Udaya
error: Content is protected !!