25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಮಸ್ಯೆ

ಅಭಿವೃದ್ಧಿ ಕಾಮಗಾರಿಗೆ ತಡೆ ಆರೋಪ: ಇಳಂತಿಲದಲ್ಲಿ ಬೃಹತ್ ಪ್ರತಿಭಟನೆ

ಇಳಂತಿಲ: ಅಭಿವೃದ್ಧಿ ಕಾಮಗಾರಿ ಆರಂಭಿಸಿದ ಹಂತದಲ್ಲಿಯೇ ರಾಜ್ಯ ಸರಕಾರ ಕಾಮಗಾರಿಗೆ ತಡೆ ನೀಡಿದೆ ಎಂದು ಆರೋಪಿಸಿ ಇಳಂತಿಲ ಗ್ರಾಮದ ಕಂಗಿನಾರುಬೆಟ್ಟಿನಲ್ಲಿ ನ.27ರಂದು ಪ್ರತಿಭಟನೆ ನಡೆಯಿತು.

ಈ ಹಿಂದಿನ ಬಿಜೆಪಿ ಸರಕಾರ ಅವಧಿಯಲ್ಲಿ ಬನ್ನೆಂಗಳದಿಂದ ಕಂಗಿನಾರುಬೆಟ್ಟು ರಸ್ತೆ ಅಭಿವೃದ್ಧಿಗೆ ಅನುದಾನ ಬಿಡುಗಡೆಗೊಂಡಿತ್ತು. ಆದರೆ ಚುನಾವಣೆ ಬಳಿಕ ಕಾಂಗ್ರೆಸ್ ಸರಕಾರ ಅಸ್ತಿತ್ವಕ್ಕೆ ಬಂದ ಬೆನ್ನಲ್ಲೆ ಈ ಕಾಮಗಾರಿಯನ್ನು ತಡೆಹಿಡಿದಿರುವುದು ಅಲ್ಲಿನ ನಾಗರಿಕರ ಆಕ್ರೋಶಕ್ಕೆ ಕಾರಣವಾಗಿತ್ತು.

ಬಿಜೆಪಿ ಪ್ರಮುಖರಾದ ನ್ಯಾಯವಾದಿ ಅಗರ್ತ ಸುಬ್ರಹ್ಮಣ್ಯ ಕುಮಾರ್‌ ಮಾತನಾಡಿ, ಗ್ರಾಮಸ್ಥರ ಹಲವು ವರ್ಷಗಳ ಬೇಡಿಕೆಗೆ ಬಿಜೆಪಿ ಸರಕಾರ ಕೊನೆಗಳಿಗೆಯಲ್ಲಿ ಅನುದಾನ ಬಿಡುಗಡೆಗೊಳಿಸಿತ್ತು. ಚುನಾವಣೆ ನೀತಿ ಸಂಹಿತೆಯ ಕಾರಣದಿಂದ ಕಾಮಗಾರಿ ಸ್ಥಗಿತಗೊಳಿಸಿದ್ದು, ಕಾಂಗ್ರೆಸ್ ಸರಕಾರ ರಾಜಕೀಯ ಮಾಡಿರುವುದು ಸರಿಯಲ್ಲ, ಅಭಿವೃದ್ಧಿಯಲ್ಲಿ ಸ್ಪಂದಿಸಲಿ. ಅಲ್ಲದೆ ಈ ಭಾಗದ ಜನರು ರಸ್ತೆಯಲ್ಲಿ ನಡೆಯಲಾಗದ ಆ ಸ್ಥಿತಿ ನಿರ್ಮಾಣವಾಗಿದ್ದು ಮುಂದಿನ 15 ದಿನಗಳ ಒಳಗೆ ಮತ್ತೆ ಕಾಮಗಾರಿ ನಡೆಸಲು ಅನುವು ಮಾಡಬೇಕು ಎಂದರು.

ಎ.ಪಿ.ಎಂ.ಸಿ. ಮಾಜಿ ಸದಸ್ಯ ಜಯನಂದ ಕಲ್ಲಾಪು ಮಾತನಾಡಿ, ತೀರಾ ಕೆಟ್ಟು ಹೋದ ರಸ್ತೆಯಲ್ಲಿ ಶಾಲಾ ಮಕ್ಕಳ ಸಹಿತ ವೃದ್ದರು ನಡೆದಾಡಲು ಅಸಾಧ್ಯವಾಗಿದೆ. ಅನುದಾನ ಬಿಡುಗಡೆಗೊಳಿಸಿ ಗುತ್ತಿಗೆದಾರರು ರಸ್ತೆಗೆ ಜಲ್ಲಿಕಲ್ಲು ಹಾಸಿದ ಬೆನ್ನಲ್ಲೆ ಕಾಮಗಾರಿ ತಡೆ ಹಿಡಿದಿರುವುದು ವಿಷಾದನೀಯ. ಈ ಕುರಿತು ಶಾಸಕರನ್ನು ಸಂಪರ್ಕಿಸಿ ಮನವರಿಕೆ ಮಾಡುವ ಭರವಸೆ ನೀಡಿದರು.

ಗ್ರಾ.ಪಂ.ದ ಅಧ್ಯಕ್ಷ ತಿಮ್ಮಪ್ಪಗೌಡ ಮಾತನಾಡಿದರು. ತಮ್ಮ 5 ಮನವಿಯನ್ನು ತತ್ ಕ್ಷಣವೇ ಸಂಬಂಧಪಟ್ಟ ಅಧಿಕಾರಿಗಳಿಗೆ ಕಳುಹಿಸುವ ಪ್ರಯತ್ನ ನಡೆಸುವುದಾಗಿ ತಿಳಿಸಿದ ಬಳಿಕ ಪ್ರತಿಭಟನೆ ಕೈ ಬಿಡಲಾಯಿತು.

ಈ ಸಂದರ್ಭದಲ್ಲಿ ಪ್ರಮುಖರಾದ ವಸಂತ, ರಾಜೇಶ, ಮಂಜುನಾಥ, ಜಯಂತ, ರಾಘವೇಂದ್ರ, ನಾಗರಾಜ, ಪುರುಷೋತ್ತಮ, ರವಿಚಂದ್ರ, ಧನಂಜಯ, ಯತೀಶ, ಆನಂದ, ಬೇಬಿ, ಉಗ್ಗಪ್ಪ ಉಪಸ್ಥಿತರಿದ್ದರು.

ಉಪ್ಪಿನಂಗಡಿ ಪೊಲೀಸರು ಬಂದೋಬಸ್ತ್ ನಡೆಸಿದ್ದರು.

Related posts

ಮರೋಡಿ ಗ್ರಾಮ ಪಂಚಾಯತ್ ನ ದ್ವಿತೀಯ ಸುತ್ತಿನ ಗ್ರಾಮ ಸಭೆ

Suddi Udaya

ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ, ನವಜೀವನ ಆರೈಕೆ ಮತ್ತು ಬೆಂಬಲ ಕೇಂದ್ರದ ನೇತೃತ್ವದಲ್ಲಿ ಕ್ರಿಸ್ಮಸ್ ಆಚರಣೆ

Suddi Udaya

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ

Suddi Udaya

ಮತ್ಸ್ಯ ತೀರ್ಥ ಶಿಶಿಲ ದೇವಸ್ಥಾನಕ್ಕೆ ಹೆಗ್ಗಡೆ ದಂಪತಿ ಭೇಟಿ

Suddi Udaya

ನಾವೂರು ಸರಕಾರಿ ಪ್ರೌಢಶಾಲಾ ಪ್ರಾರಂಭೋತ್ಸವ

Suddi Udaya

ಭಾರತೀಯ ಸೇನೆಗೆ ಆಯ್ಕೆಯಾದ ಬಳಂಜದ ಯುವಕ ಮನೋಹರ್ ಪೂಜಾರಿಯವರಿಗೆ ಬಳಂಜ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ವತಿಯಿಂದ ಗೌರವಾರ್ಪಣೆ

Suddi Udaya
error: Content is protected !!