ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಯಕ್ಷಾಶ್ರಯ ಯೋಜನೆ ಅಡಿಯಲ್ಲಿ ಗುರುವಾಯನಕೆರೆ ದೇವಿಪ್ರಸಾದ್ ಆಚಾರ್ಯರಿಗೆ ಮನೆ ಹಸ್ತಾಂತರ

Suddi Udaya

ಗುರುವಾಯನಕೆರೆ: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಯಕ್ಷಾಶ್ರಯ ಯೋಜನೆ ಅಡಿಯಲ್ಲಿ ನಿರ್ಮಿಸಿದ ಮನೆಯನ್ನು ಯಕ್ಷಗಾನ ಕಲಾವಿದ ಸುಂಕದಕಟ್ಟೆ ಮೇಳದ ದೇವಿಪ್ರಸಾದ್ ಆಚಾರ್ಯರಿಗೆ ನ.24ರಂದು ತುಳಸೀ ಪೂಜೆಯ ಶುಭದಿನದಂದು ಗುರುವಾಯನಕೆರೆಯಲ್ಲಿ ಗೃಹಪ್ರವೇಶ ಮಾಡಿಸಿ ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಮನೆಯ ಕೊಡುಗೈ ದಾನಿ ಅಶೋಕ್ ತೌರೋ ಜೆಪ್ಪು ಮಜಿಲ, ಯಕ್ಷಧ್ರುವ ಪಟ್ಲ ಫೌಂಡೇಶನ್ ಸ್ಥಾಪಕಾಧ್ಯಕ್ಷ ಸತೀಶ್ ಶೆಟ್ಟಿ ಪಟ್ಲ, ಪುರುಷೋತ್ತಮ ಭಂಡಾರಿ ಅಡ್ಯಾರ್, ಕೋಶಾಧಿಕಾರಿ ಸುದೇಶ್ ರೈ, ಗೌರವ ಸಲಹೆಗಾರ ಭುಜಬಲಿ ಧರ್ಮಸ್ಥಳ, ಪುಂಜಾಲಕಟ್ಟೆ ಘಟಕದ ಅಧ್ಯಕ್ಷ ಯಶೋಧರ ಶೆಟ್ಟಿ ದಂಡೆ, ಪುಂಜಾಲಕಟ್ಟೆ ಘಟಕದ ಸಂಚಾಲಕ ರಮೇಶ್ ಶೆಟ್ಟಿ ಮಜಲೋಡಿ, ಕುವೆಟ್ಟು ಗ್ರಾ.ಪಂ. ಮಾಜಿ ಉಪಾಧ್ಯಕ್ಷ ಪ್ರದೀಪ್ ಶೆಟ್ಟಿ, ಬೆಳ್ತಂಗಡಿ ಘಟಕದ ಅಧ್ಯಕ್ಷ ಸುರೇಶ್ ಶೆಟ್ಟಿ, ಬೆಳ್ತಂಗಡಿ ವಿಶ್ವಕರ್ಮ ಸಂಘದ ಅಧ್ಯಕ್ಷ ಗಣೇಶ್ ಆಚಾರ್ಯ ಬಲ್ಯಯಕೋಡಿ ಉಪಸ್ಥಿತರಿದ್ದರು.

ದಿನೇಶ್ ಶೆಟ್ಟಿ ಕಾವಲಕಟ್ಟೆ ಕಾರ್ಯಕ್ರಮ ನಿರೂಪಿಸಿದರು. ಚಂದ್ರಶೇಖರ್ ಭಟ್ ಕೊಂಕಣಾಜೆ ವಂದಿಸಿದರು.

Leave a Comment

error: Content is protected !!