ಕಕ್ಕಿಂಜೆ: ಶ್ರೀ ಕೃಷ್ಣ ಆಸ್ಪತ್ರೆ ದಂತ ವೈದ್ಯಾಧಿಕಾರಿ ಡಾ| ಪ್ರಕೃತಿ ಶೆಟ್ಟಿ ರವರಿಗೆ ಬೀಳ್ಕೊಡುಗೆ ಕಾರ್ಯಕ್ರಮ

Suddi Udaya

ಕಕ್ಕಿಂಜೆ: ಯೇನೆಪೋಯ ದಂತ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ದೇರಳಕಟ್ಟೆ ಮಂಗಳೂರು ಇವರ ಸಹಕಾರದೊಂದಿಗೆ ಕಾರ್ಯನಿರ್ವಹಿಸುತ್ತಿರುವ ಶ್ರೀ ಕೃಷ್ಣ ದಂತ ಚಿಕಿತ್ಸಾ ವಿಭಾಗದಲ್ಲಿ ಸುಮಾರು ಮೂರು ವರ್ಷಗಳ ಕಾಲ ದಂತ ವೈದ್ಯರಾಗಿ ಸೇವೆ ಸಲ್ಲಿಸಿ ಅಪಾರ ಜನರ ಮೆಚ್ಚುಗೆಗೆ ಪಾತ್ರರಾಗಿದ್ದ ಡಾ.ಪ್ರಕೃತಿ ಶೆಟ್ಟಿ ಅವರಿಗೆ ಬೀಳ್ಕೊಡುಗೆ ಸಮಾರಂಭ ನ.29ರಂದು ಆಸ್ಪತ್ರೆಯಲ್ಲಿ ನಡೆಯಿತು ಹಾಗೂ ಹೊಸದಾಗಿ ದಂತ ವೈದ್ಯರಾಗಿ ಬಂದಿರುವ ಡಾ. ಸಾವನ್ ರೈ ಅವರನ್ನು ಸ್ವಾಗತಿಸಿಲಾಯಿತು.

ಕಾರ್ಯಕ್ರಮದಲ್ಲಿ ಶ್ರೀ ಕೃಷ್ಣ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ| ಮುರಳಿಕೃಷ್ಣ ಇರ್ವತ್ರಾಯ, ವೈದ್ಯಕೀಯ ಅಧೀಕ್ಷಕಿ ಡಾ| ವಂದನಾ ಎಂ ಇರ್ವತ್ರಾಯ,ಮುಖ್ಯ ವೈದ್ಯಾಧಿಕಾರಿಗಳಾದ ಡಾ| ಅಲ್ಬಿನ್ ಜೋಸೆಫ್, ಡಾ| ಮೌಲ್ಯ, ದಂತ ಚಿಕಿತ್ಸಾ ವಿಭಾಗದ ವೈದ್ಯಾಧಿಕಾರಿ ಡಾ| ಸಾವನ್ ರೈ , ಆಡಳಿತಾಧಿಕಾರಿ ಶ್ರೀಮತಿ ಜ್ಯೋತಿ ವಿ ಸ್ವರೂಪ್, ಆಡಳಿತ ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Leave a Comment

error: Content is protected !!