September 6, 2026
Uncategorized

ಉಜಿರೆ: ಮಂಗಳೂರು ವಿ.ವಿ. ಅಂತರ ಕಾಲೇಜು ಪುರುಷರ ವಾಲಿಬಾಲ್ ಟೂರ್ನಿ

ಉಜಿರೆ: ಕ್ರೀಡಾಪಟುಗಳು ತಮಗೆ ಸಿಗುವ ಸಮಯ ಮತ್ತು ಎಲ್ಲಾ ಸೌಲಭ್ಯಗಳ ಸದುಪಯೋಗ ಪಡೆದು ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ಎಸ್.ಡಿ.ಎಂ. ಕಾಲೇಜಿನ ಹಿರಿಯ ವಿದ್ಯಾರ್ಥಿ ಹಾಗೂ ಖ್ಯ್ಯಾತ ಕ್ರೀಡಾಪಟು ಯೇಸುದಾಸ್ ಪಿ.ಟಿ. ಹೇಳಿದರು.

ಅವರು ನ.29ರಂದು ಉಜಿರೆ ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ನಡೆದ ಮಂಗಳೂರು ವಿ.ವಿ. ಅಂತರ ಕಾಲೇಜು ಪುರುಷರ ವಾಲಿಬಾಲ್ ಟೂರ್ನಿ ಉದ್ಘಾಟಿಸಿ ಮಾತನಾಡಿದರು.

ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯವರು ಪ್ರತಿಭಾವಂತರಾಗಿದ್ದು ಸತತ ಅಭ್ಯಾಸ ಮತ್ತು ನಿರಂತರ ಪ್ರಯತ್ನದಿಂದ ಉನ್ನತ ಸಾಧನೆ ಮಾಡುತ್ತಿರುವುದು ಶ್ಲಾಘನೀಯವಾಗಿದೆ. ತಾನು ವಿದ್ಯಾರ್ಥಿಯಾಗಿದ್ದಾಗ ಕ್ರೀಡಾ ಪ್ರತಿಭೆಯನ್ನು ಗುರುತಿಸಿ ಕಾಲೇಜು ಹಾಗೂ ಆಡಳಿತ ಮಂಡಳಿಯಿಂದ ನೀಡಿದ ಸಕಾಲಿಕ ಮಾರ್ಗದರ್ಶನ, ತರಬೇತಿ ಮತ್ತು ಪ್ರೋತ್ಸಾಹವನ್ನು ಧನ್ಯತೆಯಿಂದ ಸ್ಮರಿಸಿದರು.

ಮಂಗಳೂರು ವಿ.ವಿ. ದೈಹಿಕ ಶಿಕ್ಷಣ ವಿಭಾಗದ ವೀಕ್ಷಕ ರಮೇಶ್ ಮಾತನಾಡಿ, ದೇಶದಲ್ಲಿರುವ 28 ವಿ.ವಿ. ಗಳಲ್ಲಿ ಮಂಗಳೂರು ವಿ.ವಿ. ಕ್ರೀಡಾ ಕ್ಷೇತ್ರದ ಸಾಧನೆಯಲ್ಲಿ 9ನೇ ಸ್ಥಾನದಲ್ಲಿದೆ. ಇದಕ್ಕೆ ಎಸ್.ಡಿ.ಎಂ. ಕಾಲೇಜಿನ ಕ್ರೀಡಾಪಟುಗಳ ಕೊಡುಗೆ ಅಪಾರವಾಗಿದೆ ಎಂದರು.

ಅಧ್ಯಕ್ಷತೆ ವಹಿಸಿದ ಎಸ್.ಡಿ.ಎಂ. ಕಾಲೇಜಿನ ಪ್ರಾಂಶುಪಾಲ ಕುಮಾರ ಹೆಗ್ಡೆ ಮಾತನಾಡಿ ಸಾವಿರಾರು ಕ್ರೀಡಾಪಟುಗಳಿಗೆ ಆಡಳಿತ ಮಂಡಳಿವತಿಯಿAದ ಉಚಿತ ಊಟ, ವಸತಿಯೊಂದಿಗೆ ಎಲ್ಲಾ ರೀತಿಯ ಪ್ರೋತ್ಸಾಹ ನೀಡಲಾಗುತ್ತದೆ ಎಂದರು.

ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸತೀಶ್ಚಂದ್ರ ಎಸ್., ದೈಹಿಕ ಶಿಕ್ಷಣ ನಿರ್ದೇಶಕರುಗಳಾದ ರಮೇಶ್ ಎಚ್. ಮತ್ತು ಶಾರದಾ ಉಪಸ್ಥಿತರಿದ್ದರು.
ಪ್ರೊ. ಸುವೇರ್ ಕುಮಾರ್ ಕಾರ್ಯಕ್ರಮ ನಿರ್ವಹಿಸಿ, ಧನ್ಯವಾದವಿತ್ತರು.

Related posts

ಬೆಳ್ತಂಗಡಿ: ಅಪ್ಸರಾ ಫ್ಯಾಶನ್ ಸೆಂಟರ್ ಹಾಗೂ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರಿನಲ್ಲಿ ಕ್ರಿಸ್ ಮಸ್ ಮತ್ತು ಹೊಸ ವರುಷದ ಪ್ರಯುಕ್ತ ಸ್ಪೆಷಲ್ ಆಫರ್: ಪ್ರತಿ ಖರೀದಿಯ ಮೇಲೆ ಶೇ.20 ಡಿಸ್ಕೌಂಟ್

Suddi Udaya

ಸುಲ್ಕೇರಿ ಬಂಟರ ಯಾನೆ ನಾಡವರ ಸಂಘ ಗ್ರಾಮ ಸಮಿತಿಯಿಂದ ಆಟಿಡೊಂಜಿ ದಿನ

Suddi Udaya

ಧರ್ಮಸ್ಥಳ ಶಾಂತಿವನದಲ್ಲಿ 76ನೇ ಗಣರಾಜ್ಯೋತ್ಸವ ಆಚರಣೆ: ಕರ್ತವ್ಯ ನಿಷ್ಠೆಯೇ ದೇಶ ಸೇವೆ: ಕರ್ನಲ್ ಎಂ.ಜಿ ಜಯರಾಮ್

Suddi Udaya

ಉಜಿರೆ ಶ್ರೀ ಧ.ಮಂ. ಮಹಿಳಾ ಐಟಿಐ ಕಾಲೇಜಿನಲ್ಲಿ ರಾಷ್ಟ್ರೀಯ ವೃತ್ತಿ ಪ್ರಮಾಣಪತ್ರ ವಿತರಣೆ

Suddi Udaya

ಸುಲ್ಕೇರಿ ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಶ್ರೀರಾಮ ಪ್ರೌಢಶಾಲಾ ಪ್ರಾರಂಭೋತ್ಸವ

Suddi Udaya

ಗುರುವಾಯನಕೆರೆಯಲ್ಲಿ ಶಾಸಕ ಹರೀಶ್ ಪೂಂಜಾ ರವರ ಬ್ರಹತ್ ಬ್ಯಾನರ್

Suddi Udaya
error: Content is protected !!