23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಉಜಿರೆ: ಮಂಗಳೂರು ವಿ.ವಿ. ಅಂತರ ಕಾಲೇಜು ಪುರುಷರ ವಾಲಿಬಾಲ್ ಟೂರ್ನಿ

ಉಜಿರೆ: ಕ್ರೀಡಾಪಟುಗಳು ತಮಗೆ ಸಿಗುವ ಸಮಯ ಮತ್ತು ಎಲ್ಲಾ ಸೌಲಭ್ಯಗಳ ಸದುಪಯೋಗ ಪಡೆದು ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ಎಸ್.ಡಿ.ಎಂ. ಕಾಲೇಜಿನ ಹಿರಿಯ ವಿದ್ಯಾರ್ಥಿ ಹಾಗೂ ಖ್ಯ್ಯಾತ ಕ್ರೀಡಾಪಟು ಯೇಸುದಾಸ್ ಪಿ.ಟಿ. ಹೇಳಿದರು.

ಅವರು ನ.29ರಂದು ಉಜಿರೆ ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ನಡೆದ ಮಂಗಳೂರು ವಿ.ವಿ. ಅಂತರ ಕಾಲೇಜು ಪುರುಷರ ವಾಲಿಬಾಲ್ ಟೂರ್ನಿ ಉದ್ಘಾಟಿಸಿ ಮಾತನಾಡಿದರು.

ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯವರು ಪ್ರತಿಭಾವಂತರಾಗಿದ್ದು ಸತತ ಅಭ್ಯಾಸ ಮತ್ತು ನಿರಂತರ ಪ್ರಯತ್ನದಿಂದ ಉನ್ನತ ಸಾಧನೆ ಮಾಡುತ್ತಿರುವುದು ಶ್ಲಾಘನೀಯವಾಗಿದೆ. ತಾನು ವಿದ್ಯಾರ್ಥಿಯಾಗಿದ್ದಾಗ ಕ್ರೀಡಾ ಪ್ರತಿಭೆಯನ್ನು ಗುರುತಿಸಿ ಕಾಲೇಜು ಹಾಗೂ ಆಡಳಿತ ಮಂಡಳಿಯಿಂದ ನೀಡಿದ ಸಕಾಲಿಕ ಮಾರ್ಗದರ್ಶನ, ತರಬೇತಿ ಮತ್ತು ಪ್ರೋತ್ಸಾಹವನ್ನು ಧನ್ಯತೆಯಿಂದ ಸ್ಮರಿಸಿದರು.

ಮಂಗಳೂರು ವಿ.ವಿ. ದೈಹಿಕ ಶಿಕ್ಷಣ ವಿಭಾಗದ ವೀಕ್ಷಕ ರಮೇಶ್ ಮಾತನಾಡಿ, ದೇಶದಲ್ಲಿರುವ 28 ವಿ.ವಿ. ಗಳಲ್ಲಿ ಮಂಗಳೂರು ವಿ.ವಿ. ಕ್ರೀಡಾ ಕ್ಷೇತ್ರದ ಸಾಧನೆಯಲ್ಲಿ 9ನೇ ಸ್ಥಾನದಲ್ಲಿದೆ. ಇದಕ್ಕೆ ಎಸ್.ಡಿ.ಎಂ. ಕಾಲೇಜಿನ ಕ್ರೀಡಾಪಟುಗಳ ಕೊಡುಗೆ ಅಪಾರವಾಗಿದೆ ಎಂದರು.

ಅಧ್ಯಕ್ಷತೆ ವಹಿಸಿದ ಎಸ್.ಡಿ.ಎಂ. ಕಾಲೇಜಿನ ಪ್ರಾಂಶುಪಾಲ ಕುಮಾರ ಹೆಗ್ಡೆ ಮಾತನಾಡಿ ಸಾವಿರಾರು ಕ್ರೀಡಾಪಟುಗಳಿಗೆ ಆಡಳಿತ ಮಂಡಳಿವತಿಯಿAದ ಉಚಿತ ಊಟ, ವಸತಿಯೊಂದಿಗೆ ಎಲ್ಲಾ ರೀತಿಯ ಪ್ರೋತ್ಸಾಹ ನೀಡಲಾಗುತ್ತದೆ ಎಂದರು.

ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸತೀಶ್ಚಂದ್ರ ಎಸ್., ದೈಹಿಕ ಶಿಕ್ಷಣ ನಿರ್ದೇಶಕರುಗಳಾದ ರಮೇಶ್ ಎಚ್. ಮತ್ತು ಶಾರದಾ ಉಪಸ್ಥಿತರಿದ್ದರು.
ಪ್ರೊ. ಸುವೇರ್ ಕುಮಾರ್ ಕಾರ್ಯಕ್ರಮ ನಿರ್ವಹಿಸಿ, ಧನ್ಯವಾದವಿತ್ತರು.

Related posts

ನಿಟ್ಟಡೆ: ಗೋಳಿಯಂಗಡಿಯಲ್ಲಿ ಬೈಕ್ ಗೆ ಡಿಕ್ಕಿಯೊಡೆದ ಆಟೋ ರಿಕ್ಷಾ

Suddi Udaya

ಸುದ್ದಿ ಉದಯ ಪತ್ರಿಕೆ ಪ್ರಯೋಜಿಸಿರುವ ದೀಪಾವಳಿ ವಿಶೇಷಾಂಕ ಚಿತ್ರಕಲೆ ಸ್ಪರ್ಧೆ: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಶ್ರಾವ್ಯ ದ್ವಿತೀಯ ಸ್ಥಾನ

Suddi Udaya

ಚಾರ್ಮಾಡಿ ಗ್ರಾಮದ ಕಂಚಲಗದ್ದೆ ನಿವಾಸಿ, ಕೃಷಿಕ ಬಾಬು ನಾಯ್ಕ ನಿಧನ

Suddi Udaya

ಬೆಳಾಲು: ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದ ವಿವಿಧ ಸಮಿತಿಗಳ ವತಿಯಿಂದ ಸ್ವಚ್ಛತಾ ಕಾರ್ಯ

Suddi Udaya

ಅಂಡಿಂಜೆ ಗ್ರಾ.ಪಂ. ನೂತನ ಅಧ್ಯಕ್ಷರಾಗಿ ನಿತಿನ್, ಉಪಾಧ್ಯಕ್ಷರಾಗಿ ಶ್ವೇತಾ ಅವಿರೋಧವಾಗಿ ಆಯ್ಕೆ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ಪ್ರಾಂತೀಯ ಪಾಲನಾ ಸಮಿತಿಯ ವಾರ್ಷಿಕ ಮಹಾಸಭೆ

Suddi Udaya
error: Content is protected !!