22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚುನಾವಣೆತಾಲೂಕು ಸುದ್ದಿ

ನಾರಾವಿ ಮಾಂಡೋವಿ ಮೋಟಾರ್ಸ್ ನಲ್ಲಿ 100 ನೇ ಕಾರಿನ ಕೀ ಹಸ್ತಾಂತರ ಕಾರ್ಯಕ್ರಮ

ನಾರಾವಿ: ದ.ಕ ಜಿಲ್ಲೆಯ ಪ್ರತಿಷ್ಠಿತ ಮಾರುತಿ ಸುಝುಕಿ ಕಾರುಗಳ ಅಧಿಕೃತ ಮಾರಾಟಗಾರರಾದ ಮಾಂಡೋವಿ ಮೋಟಾರ್ಸ್ ಪ್ರೈ. ಲಿ. ಮಂಗಳೂರು ಇವರ ನೂತನ ಶಾಖೆ ನಾರಾವಿಯಲ್ಲಿ ನೂರನೇ ಕಾರಿನ ಕೀಲಿ ಹಸ್ತಾಂತರ ಕಾರ್ಯಕ್ರಮ ನ.24 ರಂದು ನಡೆಯಿತು.

ಈ ಸಂದರ್ಭದಲ್ಲಿ ನೂತನ ಕಾರಿನ ಕೀಲಿಯನ್ನು ಗ್ರಾಹಕರಾದ ಕರುಣಾಕರ ಜೈನ್ ನಾರಾವಿ,ಪದ್ಮಪ್ರಸಾದ್ ಜೈನ್ ನಾರಾವಿ, ಸುಬ್ರಹ್ಮಣ್ಯ ಭಟ್ ಪಣಕಾಜೆ, ಹಬೀಬ್ ಮುತ್ರಿಮಜಲು ರವರಿಗೆ ಹಸ್ತಾಂತರಿಸಲಾಯಿತು.

ಕಾರ್ಯಕ್ರಮದಲ್ಲಿ ನಾರಾವಿ ಗ್ರಾಮ ಪಂಚಾಯತ್ ಅಧ್ಯಕ್ಷ ರಾಜವರ್ಮ ಜೈನ್, ಉದ್ಯಮಿಗಳಾದ ರೋಶನ್ ಹೆಗ್ಡೆ, ಸುರೇಂದ್ರ ಕುಮಾರ್ ಹಾಗೂ ರವಿಕುಮಾರ್ ಅರಸಿಕಟ್ಟೆಉಪಸ್ಥಿತರಿದ್ದರು.

ಮಾಂಡೋವಿ ಮೋಟಾರ್ಸ್ ಮಂಗಳೂರು ರೂರಲ್ ಸೇಲ್ಸ್ ಮ್ಯಾನೇಜರ್ ಸುಜಿತ್ ಕಾರ್ಯಕ್ರಮ ನಿರೂಪಿಸಿ, ಎಜಿಎಂ Nexa ಸೇಲ್ಸ್ ಅಕ್ಷಯ್ ಕುಮಾರ್ ವಂದಿಸಿದರು.

ಈ ಸಂದರ್ಭದಲ್ಲಿ ಗಣೇಶ್ ಕುಲಾಲ್ (Works Manager)ನಾರಾವಿ, ಮಾಂಡೋವಿ ಮೋಟಾರ್ಸ್ ಕ್ಯಾಲಿಟಿ ಕೇರ್ ಮ್ಯಾನೇಜರ್ ಗಿರೀಶ್ ಎಲ್.ಪಿ, ಸೇಲ್ಸ್ ಆಫೀಸರ್ ಗಳಾದ ಕಿಶೋರ್ ಕುಮಾರ್, ಸುಹಾಸ್ ಜೈನ್, ಸುಮಂತ್ ರಾಜ್, ಲೋಕೇಶ್ ಉಪಸ್ಥಿತರಿದ್ದರು.

ಅತೀ ಕಡಿಮೆ ಸಮಯದಲ್ಲಿ ನಾರಾವಿ ಗ್ರಾಮೀಣ ಪ್ರದೇಶದಲ್ಲಿ ನೂರು ಕಾರುಗಳ ಮಾರಾಟಕ್ಕೆ ಸಹಕರಿಸಿದ ಎಲ್ಲಾ ನಾರಾವಿ ಪರಿಸರದ ಗ್ರಾಹಕರಿಗೆ ಮಾಂಡೋವಿ ಮೋಟಾರ್ಸ್ ಆಡಳಿತ ಮಂಡಳಿ ಕೃತಜ್ಞತೆ ಸಲ್ಲಿಸಿದೆ.

ಟೀಮ್ ಸೇಲ್ಸ್ ಮ್ಯಾನೇಜರ್ ಚರಣ್ ಕುಮಾರ್ ಆಗಮಿಸಿದ ಅತಿಥಿ ಗಣ್ಯರನ್ನು ಸ್ವಾಗತಿಸಿ , ಮಾಂಡೋವಿ ಮೋಟಾರ್ಸ್ಸ್ ಬಗ್ಗೆ ತಿಳಿಸಿದರು.

Related posts

ನಡ ಸರಕಾರಿ ಪ.ಪೂ. ಕಾಲೇಜಿಗೆ ಶೇ.85.2 ಫಲಿತಾಂಶ

Suddi Udaya

ಕರಾಟೆ ಸ್ಪರ್ಧೆ: ಗುರುವಾಯನಕೆರೆ ಸ.ಪ್ರೌ. ಶಾಲೆಯ ಮಹಮ್ಮದ್ ಶಹರಾನ್ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಬೆಹರೆನ್ ದೇಶದ ಬಿಲ್ಲವ ವೈಭವ ಕಾರ್ಯಕ್ರಮದಲ್ಲಿ ರಕ್ಷಿತ್ ಶಿವರಾಮ್ ರವರಿಗೆ ಸನ್ಮಾನ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ಕರಾಟೆ ಸ್ಪರ್ಧೆ: ಹೋಲಿ ರಿಡೀಮರ್ ವಿದ್ಯಾರ್ಥಿಗಳ ಸಾಧನೆ

Suddi Udaya

ಸೌಜನ್ಯ ಸಾವು ಪ್ರಕರಣ: ಸರಕಾರ ಹಾಗೂ ತನಿಖಾ ಸಂಸ್ಥೆ ಸೂಕ್ತ ನ್ಯಾಯ ಒದಗಿಸಲಿ: ಡಾ. ಹೆಗ್ಗಡೆ

Suddi Udaya

ಅಳದಂಗಡಿ ಬೆಟ್ಟದ ಬಸದಿ ಅಭಿವೃದ್ಧಿಯ ಕಾರ್ಯಕ್ಕೆ ಸರಕಾರದಿಂದ ರೂ. 50ಲಕ್ಷ ಮಂಜೂರು ಸಹಕರಿಸಿದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂರವರಿಗೆ ಆಡಳಿತ ಮಂಡಳಿಯಿಂದ ಗೌರವ

Suddi Udaya
error: Content is protected !!