September 6, 2026
ಗ್ರಾಮಾಂತರ ಸುದ್ದಿಚುನಾವಣೆತಾಲೂಕು ಸುದ್ದಿ

ನಾರಾವಿ ಮಾಂಡೋವಿ ಮೋಟಾರ್ಸ್ ನಲ್ಲಿ 100 ನೇ ಕಾರಿನ ಕೀ ಹಸ್ತಾಂತರ ಕಾರ್ಯಕ್ರಮ

ನಾರಾವಿ: ದ.ಕ ಜಿಲ್ಲೆಯ ಪ್ರತಿಷ್ಠಿತ ಮಾರುತಿ ಸುಝುಕಿ ಕಾರುಗಳ ಅಧಿಕೃತ ಮಾರಾಟಗಾರರಾದ ಮಾಂಡೋವಿ ಮೋಟಾರ್ಸ್ ಪ್ರೈ. ಲಿ. ಮಂಗಳೂರು ಇವರ ನೂತನ ಶಾಖೆ ನಾರಾವಿಯಲ್ಲಿ ನೂರನೇ ಕಾರಿನ ಕೀಲಿ ಹಸ್ತಾಂತರ ಕಾರ್ಯಕ್ರಮ ನ.24 ರಂದು ನಡೆಯಿತು.

ಈ ಸಂದರ್ಭದಲ್ಲಿ ನೂತನ ಕಾರಿನ ಕೀಲಿಯನ್ನು ಗ್ರಾಹಕರಾದ ಕರುಣಾಕರ ಜೈನ್ ನಾರಾವಿ,ಪದ್ಮಪ್ರಸಾದ್ ಜೈನ್ ನಾರಾವಿ, ಸುಬ್ರಹ್ಮಣ್ಯ ಭಟ್ ಪಣಕಾಜೆ, ಹಬೀಬ್ ಮುತ್ರಿಮಜಲು ರವರಿಗೆ ಹಸ್ತಾಂತರಿಸಲಾಯಿತು.

ಕಾರ್ಯಕ್ರಮದಲ್ಲಿ ನಾರಾವಿ ಗ್ರಾಮ ಪಂಚಾಯತ್ ಅಧ್ಯಕ್ಷ ರಾಜವರ್ಮ ಜೈನ್, ಉದ್ಯಮಿಗಳಾದ ರೋಶನ್ ಹೆಗ್ಡೆ, ಸುರೇಂದ್ರ ಕುಮಾರ್ ಹಾಗೂ ರವಿಕುಮಾರ್ ಅರಸಿಕಟ್ಟೆಉಪಸ್ಥಿತರಿದ್ದರು.

ಮಾಂಡೋವಿ ಮೋಟಾರ್ಸ್ ಮಂಗಳೂರು ರೂರಲ್ ಸೇಲ್ಸ್ ಮ್ಯಾನೇಜರ್ ಸುಜಿತ್ ಕಾರ್ಯಕ್ರಮ ನಿರೂಪಿಸಿ, ಎಜಿಎಂ Nexa ಸೇಲ್ಸ್ ಅಕ್ಷಯ್ ಕುಮಾರ್ ವಂದಿಸಿದರು.

ಈ ಸಂದರ್ಭದಲ್ಲಿ ಗಣೇಶ್ ಕುಲಾಲ್ (Works Manager)ನಾರಾವಿ, ಮಾಂಡೋವಿ ಮೋಟಾರ್ಸ್ ಕ್ಯಾಲಿಟಿ ಕೇರ್ ಮ್ಯಾನೇಜರ್ ಗಿರೀಶ್ ಎಲ್.ಪಿ, ಸೇಲ್ಸ್ ಆಫೀಸರ್ ಗಳಾದ ಕಿಶೋರ್ ಕುಮಾರ್, ಸುಹಾಸ್ ಜೈನ್, ಸುಮಂತ್ ರಾಜ್, ಲೋಕೇಶ್ ಉಪಸ್ಥಿತರಿದ್ದರು.

ಅತೀ ಕಡಿಮೆ ಸಮಯದಲ್ಲಿ ನಾರಾವಿ ಗ್ರಾಮೀಣ ಪ್ರದೇಶದಲ್ಲಿ ನೂರು ಕಾರುಗಳ ಮಾರಾಟಕ್ಕೆ ಸಹಕರಿಸಿದ ಎಲ್ಲಾ ನಾರಾವಿ ಪರಿಸರದ ಗ್ರಾಹಕರಿಗೆ ಮಾಂಡೋವಿ ಮೋಟಾರ್ಸ್ ಆಡಳಿತ ಮಂಡಳಿ ಕೃತಜ್ಞತೆ ಸಲ್ಲಿಸಿದೆ.

ಟೀಮ್ ಸೇಲ್ಸ್ ಮ್ಯಾನೇಜರ್ ಚರಣ್ ಕುಮಾರ್ ಆಗಮಿಸಿದ ಅತಿಥಿ ಗಣ್ಯರನ್ನು ಸ್ವಾಗತಿಸಿ , ಮಾಂಡೋವಿ ಮೋಟಾರ್ಸ್ಸ್ ಬಗ್ಗೆ ತಿಳಿಸಿದರು.

Related posts

ಬೆಳ್ತಂಗಡಿ ಲಯನ್ಸ್ ಕ್ಲಬ್ ನ ಸುವರ್ಣ ಸಂಭ್ರಮ ವರ್ಷದ ಪ್ರಥಮ ಯೋಗಾಸನ ಶಿಬಿರ ಉದ್ಘಾಟನೆ

Suddi Udaya

ಮಲೆಂಗಲ್ಲು ಬ್ರಹ್ಮಕಲಶೋತ್ಸವ-ಧಾರ್ಮಿಕ ಸಭಾ ಕಾರ್ಯಕ್ರಮ: ಶ್ರದ್ಧಾ ಭಕ್ತಿಯಿಂದ ಭಗವಂತನನ್ನು ಆರಾಧಿಸಿ – ಶ್ರೀ ಡಾ.ವಿದ್ಯಾಪ್ರಸನ್ನ ತೀರ್ಥ ಶ್ರೀಪಾದರು

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಕುಟುಂಬೋತ್ಸವ: ಜೆಸಿಐ ಮಧ್ಯಂತರ ಸಮ್ಮೇಳನದಲ್ಲಿ ಪ್ರಶಸ್ತಿ ವಿಜೇತರಿಗೆ ಅಭಿನಂದನೆ ಸಲ್ಲಿಕೆ

Suddi Udaya

ಬೆಳ್ತಂಗಡಿ ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಹಾಗೂ ಟ್ರಸ್ಟಿಗಳ ಬಗ್ಗೆ ಅವಹೇಳನಕಾರಿ ಪೋಸ್ಟ್ ಆರೋಪ: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

Suddi Udaya

ಮಾಯಿಲ ಕೋಟೆ ಸೀಮೆ ದೈವಸ್ಥಾನದಲ್ಲಿ ಸಂಕ್ರಮಣ ಪೂಜೆ ಹಾಗೂ ಕಲ್ಲುರ್ಟಿ ಅಗೇಲು ಸೇವೆ

Suddi Udaya

ಬಳ್ಳಮಂಜ: ಶ್ರೀ ಸಿದ್ದಿವಿನಾಯಕ ಭಜನಾ ಮಂದಿರ ದಲ್ಲಿ ಸಾರ್ವಜನಿಕ ತೆನೆ ಹಬ್ಬ ಹಾಗೂ ಆಯುಧ ಪೂಜೆ

Suddi Udaya
error: Content is protected !!