25.4 C
ಪುತ್ತೂರು, ಬೆಳ್ತಂಗಡಿ
May 18, 2025
ಅಪರಾಧ ಸುದ್ದಿ

ಪ್ರಾಥಮಿಕ ಶಾಲೆಯ ಬಾಲಕನ ಸೈಕಲನ್ನು ಮಾರಾಟ ಮಾಡಿದ ವಿಚಾರ:ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಿಂದಹಲ್ಲೆ ಆರೋಪ – ಬಾಲಕ ಆಸ್ಪತ್ರೆಗೆ ದಾಖಲು-ಪುಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ: ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾಬ್ಯಾಸ ಮಾಡಿಕೊಂಡಿರುವ
ಬಾಲಕ ಆತನ ಸೈಕಲನ್ನು ಮಾರಾಟ ಮಾಡಿದ ವಿಚಾರಕ್ಕೆ ಸಂಬಂದಿಸಿದಂತೆ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಹಲ್ಲೆ ನಡೆಸಿರುವುದಾಗಿ ಪುಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನ.28 ರಂದು ಬೆಳಿಗ್ಗೆ ಶಾಲೆಯಲ್ಲಿ ಶಾಲಾ ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷ ಪರಮೇಶ ಎಂಬವರು ಬಾಲಕನನ್ನು ವಿಚಾರಿಸಿ ಬಾಲಕನ ತಾಯಿಯ ಸಮಕ್ಷಮದಲ್ಲಿ ಬಾಲಕನಿಗೆ ಸಣ್ಣ ದೊಣ್ಣೆಯಿಂದ ಹಾಗೂ ಕೈಯಿಂದ ಹೊಡೆದಿರುತ್ತಾರೆ. ಈ ವೇಳೆ ಶಾಲಾ ಶಿಕ್ಷಕರಿಬ್ಬರು ಬಾಲಕನಿಗೆ ಹೊಡೆಯಲು ಪ್ರೇರೇಪಿಸಿರುತ್ತಾರೆ. ಹಲ್ಲೆ ನಡೆಸಿದ ಬಳಿಕ ಈ ವಿಚಾರವನ್ನು ಯಾರಿಗಾದರೂ ಹೇಳಿದರೇ ಸೈಕಲ್ ಕದ್ದು ಮಾರಾಟ ಮಾಡಿದ ಬಗ್ಗೆ ಕೇಸು ಹಾಕುವುದಾಗಿ ಬೆದರಿಕೆ ಹಾಕಿರುವುದಾಗಿ ಬಾಲಕ ಪೊಲೀಸರಿಗೆ ನೀಡಿದ ದೂರಿನಲ್ಲಿ ಆರೋಪಿಸಿದ್ದಾರೆ.
‌‌ಶಾಲೆಯಲ್ಲಿ ನಡೆದ ಹಲ್ಲೆಯಿಂದ ನ. 30 ರಂದು ಬೆಳಿಗ್ಗೆ ಬಾಲಕನಿಗೆ ಮನೆಯಲ್ಲಿ ಎದೆನೋವು ಕಾಣಿಸಿಕೊಂಡಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಯಲ್ಲಿ ದಾಖಲು ಮಾಡಿಕೊಂಡಿರುತ್ತಾರೆ ಎಂಬುದಾಗಿ ಸಂತ್ರಸ್ಥ ಬಾಲಕನು ನೀಡಿದ ದೂರಿನ ಮೇರೆಗೆ ಪುಂಜಾಲಕಟ್ಟೆ ಠಾಣೆಯಲ್ಲಿ ಕಲಂ: 323,324,506,114 ಜೊತೆಗೆ 34 ಐಪಿಸಿ ಮತ್ತು ಕಲಂ:75 ಬಾಲನ್ಯಾಯ ಕಾಯಿದೆ. ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಕುತ್ಯಾರು ದೇವಸ್ಥಾನದಲ್ಲಿ ಕಳ್ಳತನಕ್ಕೆ ಯತ್ನ: ಬೆಳ್ತಂಗಡಿ ಪೊಲೀಸ್ ರಿಂದ ತನಿಖೆ

Suddi Udaya

ಬೆಳಾಲು ನಿವೃತ್ತ ಮುಖ್ಯೋಪಾಧ್ಯಾಯ ಬಾಲಕೃಷ್ಣ ಬಡೆಕ್ಕಿಲ್ಲಾ ಬರ್ಬರ ಹತ್ಯೆ ಪ್ರಕರಣ: ಆಸ್ತಿ ಪಾಲಿನ ವಿಚಾರದಲ್ಲಿ ಆಳಿಯ ಮತ್ತು ಮೊಮ್ಮಗನಿಂದ ಕೊಲೆ ಪ್ರಕರಣ ಬೆಳಕಿಗೆ- ಪೊಲೀಸರ ಯಶಸ್ವಿ ಕಾರ್ಯಾಚರಣೆ- ಕಾಸರಗೋಡಿನ ಮನೆಯಿಂದ ಆರೋಪಿಗಳಿಬ್ಬರ ಬಂಧನ

Suddi Udaya

ಸವಣಾಲು ಶ್ರೀ ದುರ್ಗಾ ಕಾಳಿಕಾಂಬ ದೇವಸ್ಥಾನದ ಅರ್ಚಕ ವಿಜಯ ಭಟ್ ನೇಣು ಬಿಗಿದು ಆತ್ಮಹತ್ಯೆ

Suddi Udaya

ಜೈನ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಹಾಗೂ ಜೈನ ಜಾತಿ ಮತ್ತು ಧರ್ಮಕ್ಕೆ ಅಪಮಾನ ಆರೋಪ ಮಹೇಶ್ ಶೆಟ್ಟಿ ತಿಮರೋಡಿ ಹಾಗೂರಾಜು ಶೆಟ್ಟಿ ಎಂಬವರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

Suddi Udaya

ಕಳಿಯ ಪರಪ್ಪು ಬಸ್ಸು ನಿಲ್ದಾಣದ ರಸ್ತೆ ಬದಿಯಲ್ಲಿ ಸತ್ತ ದನವನ್ನು ಎಸೆದು ಹೋದ ಅಕ್ರಮ ದನ ಕಳ್ಳ ಸಾಗಾಟಗಾರರು

Suddi Udaya

ವೈದ್ಯಕೀಯ ದಾಖಲೆ ವಿಷಯದಲ್ಲಿ ತಂದೆ-ಮಗನ ನಡುವೆ ಜಗಳ: ಚೂರಿಯಿಂದ ಇರಿದು ಮಗನನ್ನು ಕೊಲೆ ಗೈದ ತಂದೆ

Suddi Udaya
error: Content is protected !!