23.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪರಾಧ ಸುದ್ದಿ

ಪ್ರಾಥಮಿಕ ಶಾಲೆಯ ಬಾಲಕನ ಸೈಕಲನ್ನು ಮಾರಾಟ ಮಾಡಿದ ವಿಚಾರ:ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಿಂದಹಲ್ಲೆ ಆರೋಪ – ಬಾಲಕ ಆಸ್ಪತ್ರೆಗೆ ದಾಖಲು-ಪುಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ: ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾಬ್ಯಾಸ ಮಾಡಿಕೊಂಡಿರುವ
ಬಾಲಕ ಆತನ ಸೈಕಲನ್ನು ಮಾರಾಟ ಮಾಡಿದ ವಿಚಾರಕ್ಕೆ ಸಂಬಂದಿಸಿದಂತೆ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಹಲ್ಲೆ ನಡೆಸಿರುವುದಾಗಿ ಪುಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನ.28 ರಂದು ಬೆಳಿಗ್ಗೆ ಶಾಲೆಯಲ್ಲಿ ಶಾಲಾ ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷ ಪರಮೇಶ ಎಂಬವರು ಬಾಲಕನನ್ನು ವಿಚಾರಿಸಿ ಬಾಲಕನ ತಾಯಿಯ ಸಮಕ್ಷಮದಲ್ಲಿ ಬಾಲಕನಿಗೆ ಸಣ್ಣ ದೊಣ್ಣೆಯಿಂದ ಹಾಗೂ ಕೈಯಿಂದ ಹೊಡೆದಿರುತ್ತಾರೆ. ಈ ವೇಳೆ ಶಾಲಾ ಶಿಕ್ಷಕರಿಬ್ಬರು ಬಾಲಕನಿಗೆ ಹೊಡೆಯಲು ಪ್ರೇರೇಪಿಸಿರುತ್ತಾರೆ. ಹಲ್ಲೆ ನಡೆಸಿದ ಬಳಿಕ ಈ ವಿಚಾರವನ್ನು ಯಾರಿಗಾದರೂ ಹೇಳಿದರೇ ಸೈಕಲ್ ಕದ್ದು ಮಾರಾಟ ಮಾಡಿದ ಬಗ್ಗೆ ಕೇಸು ಹಾಕುವುದಾಗಿ ಬೆದರಿಕೆ ಹಾಕಿರುವುದಾಗಿ ಬಾಲಕ ಪೊಲೀಸರಿಗೆ ನೀಡಿದ ದೂರಿನಲ್ಲಿ ಆರೋಪಿಸಿದ್ದಾರೆ.
‌‌ಶಾಲೆಯಲ್ಲಿ ನಡೆದ ಹಲ್ಲೆಯಿಂದ ನ. 30 ರಂದು ಬೆಳಿಗ್ಗೆ ಬಾಲಕನಿಗೆ ಮನೆಯಲ್ಲಿ ಎದೆನೋವು ಕಾಣಿಸಿಕೊಂಡಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಯಲ್ಲಿ ದಾಖಲು ಮಾಡಿಕೊಂಡಿರುತ್ತಾರೆ ಎಂಬುದಾಗಿ ಸಂತ್ರಸ್ಥ ಬಾಲಕನು ನೀಡಿದ ದೂರಿನ ಮೇರೆಗೆ ಪುಂಜಾಲಕಟ್ಟೆ ಠಾಣೆಯಲ್ಲಿ ಕಲಂ: 323,324,506,114 ಜೊತೆಗೆ 34 ಐಪಿಸಿ ಮತ್ತು ಕಲಂ:75 ಬಾಲನ್ಯಾಯ ಕಾಯಿದೆ. ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಉದ್ಯಮಿ ಎ.ಸಿ.ಕುರಿಯನ್ ರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಜೈನ ಧರ್ಮಕ್ಕೆ ಮತ್ತು ಜೈನ ಧರ್ಮೀಯರ ಭಾವನೆಗಳಿಗೆ ಅವಮಾನ ದೂರು : ಗಿರೀಶ್ ಮಟ್ಟಣ್ಣನವರ್ ಹಾಗೂ ಕುಡ್ಲ ರಾಂಪೇಜ್ ಮಾಲೀಕರು ಮೇಲೆ ಪ್ರಕರಣ ದಾಖಲು

Suddi Udaya

ಅಕ್ರಮ ಕಸ ವಿಲೇವಾರಿ: ದಂಡ ವಿಧಿಸಿದ ಲಾಯಿಲ ಗ್ರಾ.ಪಂ.

Suddi Udaya

ಕುತ್ಯಾರು ದೇವಸ್ಥಾನದಲ್ಲಿ ಕಳ್ಳತನಕ್ಕೆ ಯತ್ನ: ಬೆಳ್ತಂಗಡಿ ಪೊಲೀಸ್ ರಿಂದ ತನಿಖೆ

Suddi Udaya

ಮುಂಡಾಜೆ ಸೀಟು ಬಳಿ ಬೊಲೇರೋ ಬೈಕ್ ಗೆ ಡಿಕ್ಕಿ : ಶಾಲಾ ಬಾಲಕಿ ಆಸ್ಪತ್ರೆಯಲ್ಲಿ ಮೃತ್ಯು

Suddi Udaya

ಬಂಟ್ವಾಳದ ಮಹಮ್ಮದ್ ರಫೀಕ್ ಕೊಲೆ ಪ್ರಕರಣ: ಆರೋಪಿ ಸಿದ್ದಿಕ್ ಗೆ ಜೀವಾವಧಿ ಶಿಕ್ಷೆ

Suddi Udaya
error: Content is protected !!