July 23, 2026
ಅಪರಾಧ ಸುದ್ದಿ

ಪ್ರಾಥಮಿಕ ಶಾಲೆಯ ಬಾಲಕನ ಸೈಕಲನ್ನು ಮಾರಾಟ ಮಾಡಿದ ವಿಚಾರ:ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಿಂದಹಲ್ಲೆ ಆರೋಪ – ಬಾಲಕ ಆಸ್ಪತ್ರೆಗೆ ದಾಖಲು-ಪುಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ: ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾಬ್ಯಾಸ ಮಾಡಿಕೊಂಡಿರುವ
ಬಾಲಕ ಆತನ ಸೈಕಲನ್ನು ಮಾರಾಟ ಮಾಡಿದ ವಿಚಾರಕ್ಕೆ ಸಂಬಂದಿಸಿದಂತೆ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಹಲ್ಲೆ ನಡೆಸಿರುವುದಾಗಿ ಪುಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನ.28 ರಂದು ಬೆಳಿಗ್ಗೆ ಶಾಲೆಯಲ್ಲಿ ಶಾಲಾ ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷ ಪರಮೇಶ ಎಂಬವರು ಬಾಲಕನನ್ನು ವಿಚಾರಿಸಿ ಬಾಲಕನ ತಾಯಿಯ ಸಮಕ್ಷಮದಲ್ಲಿ ಬಾಲಕನಿಗೆ ಸಣ್ಣ ದೊಣ್ಣೆಯಿಂದ ಹಾಗೂ ಕೈಯಿಂದ ಹೊಡೆದಿರುತ್ತಾರೆ. ಈ ವೇಳೆ ಶಾಲಾ ಶಿಕ್ಷಕರಿಬ್ಬರು ಬಾಲಕನಿಗೆ ಹೊಡೆಯಲು ಪ್ರೇರೇಪಿಸಿರುತ್ತಾರೆ. ಹಲ್ಲೆ ನಡೆಸಿದ ಬಳಿಕ ಈ ವಿಚಾರವನ್ನು ಯಾರಿಗಾದರೂ ಹೇಳಿದರೇ ಸೈಕಲ್ ಕದ್ದು ಮಾರಾಟ ಮಾಡಿದ ಬಗ್ಗೆ ಕೇಸು ಹಾಕುವುದಾಗಿ ಬೆದರಿಕೆ ಹಾಕಿರುವುದಾಗಿ ಬಾಲಕ ಪೊಲೀಸರಿಗೆ ನೀಡಿದ ದೂರಿನಲ್ಲಿ ಆರೋಪಿಸಿದ್ದಾರೆ.
‌‌ಶಾಲೆಯಲ್ಲಿ ನಡೆದ ಹಲ್ಲೆಯಿಂದ ನ. 30 ರಂದು ಬೆಳಿಗ್ಗೆ ಬಾಲಕನಿಗೆ ಮನೆಯಲ್ಲಿ ಎದೆನೋವು ಕಾಣಿಸಿಕೊಂಡಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಯಲ್ಲಿ ದಾಖಲು ಮಾಡಿಕೊಂಡಿರುತ್ತಾರೆ ಎಂಬುದಾಗಿ ಸಂತ್ರಸ್ಥ ಬಾಲಕನು ನೀಡಿದ ದೂರಿನ ಮೇರೆಗೆ ಪುಂಜಾಲಕಟ್ಟೆ ಠಾಣೆಯಲ್ಲಿ ಕಲಂ: 323,324,506,114 ಜೊತೆಗೆ 34 ಐಪಿಸಿ ಮತ್ತು ಕಲಂ:75 ಬಾಲನ್ಯಾಯ ಕಾಯಿದೆ. ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಚಾರ್ಮಾಡಿಯಲ್ಲಿ ವಿದ್ಯಾರ್ಥಿಗಳು ಹಾಗೂ ಕೆಲವು ಸಾರ್ವಜನಿಕರಿನಿಂದ ಬಸ್ ತಡೆಹಿಡಿದು ಗಲಾಟೆ

Suddi Udaya

ನಿಯಂತ್ರಣ ತಪ್ಪಿ ಡಿವೈಡರ್ ಮೇಲೆ ಹತ್ತಿದ ಥಾರ್

Suddi Udaya

ಮಂಡ್ಯ ಮದ್ದೂರಿನಲ್ಲಿ ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯ ಕೊಲೆ ಗ್ರಾಮಾಡಳಿತಾಧಿಕಾರಿ ಜಯಚಂದ್ರ ಮೇಲೆ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ: ಜಲಪಾತದಲ್ಲಿ ಯುವತಿಯರಿಗೆ ಲೈಂಗಿಕ ಕಿರುಕುಳ: ಮೂವರು ಕಾಸರಗೋಡು ಮೂಲದ ಯುವಕರನ್ನು ಪೊಲೀಸರಿಗೆ ಒಪ್ಪಿಸಿದ ಸಾರ್ವಜನಿಕರು

Suddi Udaya

ಬಂಗ್ಲೆಗುಡ್ಡೆಯಲ್ಲಿ ಎರಡನೇ ದಿನದ ಕಾಯಾ೯ಚರಣೆ: ಎರಡು ಶವದ ಅವಶೇಷಗಳು ಪತ್ತೆ

Suddi Udaya

ಕೊಟ್ಟ ಹಣವನ್ನು ವಾಪಸ್ ಕೇಳಲು ಹೋದ ವ್ಯಕ್ತಿಗೆ ತಲ್ವಾರ್ ನಿಂದ ದಾಳಿ: ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!