23.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪರಾಧ ಸುದ್ದಿ

ಪ್ರಾಥಮಿಕ ಶಾಲೆಯ ಬಾಲಕನ ಸೈಕಲನ್ನು ಮಾರಾಟ ಮಾಡಿದ ವಿಚಾರ:ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಿಂದಹಲ್ಲೆ ಆರೋಪ – ಬಾಲಕ ಆಸ್ಪತ್ರೆಗೆ ದಾಖಲು-ಪುಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ: ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾಬ್ಯಾಸ ಮಾಡಿಕೊಂಡಿರುವ
ಬಾಲಕ ಆತನ ಸೈಕಲನ್ನು ಮಾರಾಟ ಮಾಡಿದ ವಿಚಾರಕ್ಕೆ ಸಂಬಂದಿಸಿದಂತೆ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಹಲ್ಲೆ ನಡೆಸಿರುವುದಾಗಿ ಪುಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನ.28 ರಂದು ಬೆಳಿಗ್ಗೆ ಶಾಲೆಯಲ್ಲಿ ಶಾಲಾ ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷ ಪರಮೇಶ ಎಂಬವರು ಬಾಲಕನನ್ನು ವಿಚಾರಿಸಿ ಬಾಲಕನ ತಾಯಿಯ ಸಮಕ್ಷಮದಲ್ಲಿ ಬಾಲಕನಿಗೆ ಸಣ್ಣ ದೊಣ್ಣೆಯಿಂದ ಹಾಗೂ ಕೈಯಿಂದ ಹೊಡೆದಿರುತ್ತಾರೆ. ಈ ವೇಳೆ ಶಾಲಾ ಶಿಕ್ಷಕರಿಬ್ಬರು ಬಾಲಕನಿಗೆ ಹೊಡೆಯಲು ಪ್ರೇರೇಪಿಸಿರುತ್ತಾರೆ. ಹಲ್ಲೆ ನಡೆಸಿದ ಬಳಿಕ ಈ ವಿಚಾರವನ್ನು ಯಾರಿಗಾದರೂ ಹೇಳಿದರೇ ಸೈಕಲ್ ಕದ್ದು ಮಾರಾಟ ಮಾಡಿದ ಬಗ್ಗೆ ಕೇಸು ಹಾಕುವುದಾಗಿ ಬೆದರಿಕೆ ಹಾಕಿರುವುದಾಗಿ ಬಾಲಕ ಪೊಲೀಸರಿಗೆ ನೀಡಿದ ದೂರಿನಲ್ಲಿ ಆರೋಪಿಸಿದ್ದಾರೆ.
‌‌ಶಾಲೆಯಲ್ಲಿ ನಡೆದ ಹಲ್ಲೆಯಿಂದ ನ. 30 ರಂದು ಬೆಳಿಗ್ಗೆ ಬಾಲಕನಿಗೆ ಮನೆಯಲ್ಲಿ ಎದೆನೋವು ಕಾಣಿಸಿಕೊಂಡಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಯಲ್ಲಿ ದಾಖಲು ಮಾಡಿಕೊಂಡಿರುತ್ತಾರೆ ಎಂಬುದಾಗಿ ಸಂತ್ರಸ್ಥ ಬಾಲಕನು ನೀಡಿದ ದೂರಿನ ಮೇರೆಗೆ ಪುಂಜಾಲಕಟ್ಟೆ ಠಾಣೆಯಲ್ಲಿ ಕಲಂ: 323,324,506,114 ಜೊತೆಗೆ 34 ಐಪಿಸಿ ಮತ್ತು ಕಲಂ:75 ಬಾಲನ್ಯಾಯ ಕಾಯಿದೆ. ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ ಅತ್ಯಾಚಾರ ಪ್ರಕರಣ: ತನಿಖೆ ಆರಂಭಿಸಿದ ಸಿಐಡಿ ತಂಡ

Suddi Udaya

ಬೆಳ್ತಂಗಡಿ: ನೇಣು ಬಿಗಿದು ಮಹಿಳೆ ಆತ್ಮಹತ್ಯೆ

Suddi Udaya

ಮಹಿಳೆಯ ಮೊಬೈಲನ್ನು ಕದ್ದು, ಫೋನ್ ಪೇ ಮೂಲಕ ಹಣ ವಂಚನೆ: ತನ್ನ ಸ್ನೇಹಿತರಿಗೆ ಹಣ ಕಳುಸಿದ್ದ ಆರೋಪಿ ವಿರುದ್ಧ ಕೇಸ್ ದಾಖಲು

Suddi Udaya

ಧರ್ಮಸ್ಥಳ ಅಜೆಕುರಿ ಅಕ್ರಮ ಮರಳು ಅಡ್ಡೆಗೆ ಗಣಿ ಇಲಾಖೆ ದಾಳಿ: ಸ್ಥಳದಲ್ಲಿದ್ದ ನಾಲ್ಕು ಬೋಟ್ ಮತ್ತು ಮರಳು ವಶಕ್ಕೆ

Suddi Udaya

ತೋಟದಲ್ಲಿ ಅಡಿಕೆ ಸಂಗ್ರಹಣೆ ಮಾಡುತ್ತಿರುವಾಗ ಹಲ್ಲೆ ಮಾಡಿ ಅಡಿಕೆ- ಕಾಂಕ್ರೀಟ್ ಬೇಲಿ ದರೋಡೆ ಆರೋಪ: ಇಪ್ಪತ್ತು ಮಂದಿಯ ಮೇಲೆ ಪ್ರಕರಣ ದಾಖಲು

Suddi Udaya

ನಿಟ್ಟಡೆ: ಯಾವುದೇ ಪರವಾನಿಗೆ ಇಲ್ಲದೇ ಅಕ್ರಮ ಮರಳು ಸಾಗಟ: ವೇಣೂರು ಪೊಲೀಸರಿಂದ ದಾಳಿ: ಪಿಕಪ್‌ ವಾಹನ ವಶ

Suddi Udaya
error: Content is protected !!