24.4 C
ಪುತ್ತೂರು, ಬೆಳ್ತಂಗಡಿ
May 19, 2025
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿರಾಜ್ಯ ಸುದ್ದಿವರದಿ

ನ್ಯಾಯಾಲಯದ ವಿಚಾರಣೆ ಹಾಜರಾಗದೆ 56 ವರ್ಷಗಳಿಂದ ವಿವಿಧ ಹೆಸರುಗಳಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿ: ಕುಟುಂಬವನ್ನು ಪತ್ತೆ ಹಚ್ಚಿದ ಬೆಳ್ತಂಗಡಿ ಪೊಲೀಸರು ಮರಣ ಹೊಂದಿದ್ದ ಆರೋಪಿ

ಬೆಳ್ತಂಗಡಿ: ಬೆಳ್ತಂಗಡಿ ಠಾಣೆಯಲ್ಲಿ ದಾಖಲಾದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ಕಳೆದ 56 ವರ್ಷಗಳಿಂದ ವಿವಿಧ ಹೆಸರುಗಳಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಕುಟುಂಬವನ್ನು ಪ್ರಕರಣವನ್ನು ಬೆಳ್ತಂಗಡಿ ಠಾಣಾ ಪೊಲೀಸರು ಪತ್ತೆ ಹಚ್ಚಿದ್ದಾರೆ. ಆದರೆ ಆರೋಪಿ ಮರಣ ಹೊಂದಿರುವುದು ಬೆಳಕಿಗೆ ಬಂದಿದೆ.

ವಿವಿಧ ಹೆಸರುಗಳಿಂದ ತಲೆಮರೆಸಿಕೊಂಡಿದ್ದ ಸಿ.ಎಂ ರಾಮಯ್ಯ @ ಸಿ.ಎಂ ರಾಮು @ ಸಿ.ಎಂ ಮಾಮು @ ಸಿ.ಎಂ ಬಿದ್ಧಪ್ಪ (33 ವ) ಎಂಬವರ ಪತ್ತೆಗಾಗಿ ಬೆಳ್ತಂಗಡಿ ಠಾಣಾ ಪೊಲೀಸ್ ಉಪನಿರೀಕ್ಷಕರಾದ ಪಿಎಸ್‌ಐ ಧನರಾಜ್ ಟಿ.ಎಂ. ಮತ್ತು ಪಿಎಸೈ(ತನಿಖೆ) ಚಂದ್ರಶೇಖರ್ ಎ ಎಮ್ ರವರ ನೇತೃತ್ವದಲ್ಲಿ ಹೆಚ್. ಸಿ. ಗಂಗಾಧರ್ ಬಿ. ಮತ್ತು ಹೆಚ್ .ಸಿ. ಆಶೋಕ್ ರವರು ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ವಿವಿಧ ಕಡೆಗಳಲ್ಲಿ ಸಂಚರಿಸಿದ್ದರು. ಈ ವೇಳೆಯಲ್ಲಿ ಆರೋಪಿಯ ಮಗ ಮತ್ತು ಪತ್ನಿ ವಾಸ್ತವ್ಯವಿದ್ದ ಮನೆಯನ್ನು ಪತ್ತೆ ಹಚ್ಚಿ ಕೂಲಂಕುಷವಾಗಿ ವಿಚಾರಿಸಲಾಗಿತ್ತು.

ವಿಚಾರಣೆಯ ವೇಳೆಗೆ ಸದ್ರಿ ಸುದೀರ್ಘ ಕಾಲದಿಂದ ತಲೆಮರೆಸಿಕೊಂಡಿದ್ದ ಆರೋಪಿ 2019 ನ. 26 ರಂದು ಮರಣ ಹೊಂದಿರುವುದಾಗಿ ತಿಳಿದು ಬಂದಿರುತ್ತು.

ಸದ್ರಿ ವ್ಯಕ್ತಿಯ ಮರಣದ ಬಗ್ಗೆ ಸೂಕ್ತ ದಾಖಲಾತಿಗಳನ್ನು ಪಡೆದು, 56 ವರ್ಷಗಳಷ್ಟು ಹಳೆಯದಾದ ಪ್ರಕರಣವನ್ನು ಪತ್ತೆ ಹಚ್ಚಿ ಸಾರ್ವಜನಿಕ ವಲಯದಲ್ಲಿ ಪ್ರಶಂಸೆಗೆ ಪಾತ್ರರಾಗಿರುತ್ತಾರೆ.

Related posts

ಧರ್ಮಸ್ಥಳ : ನೇರ್ತನೆಯಲ್ಲಿ ದನದ ಕರುವಿನ ಮೇಲೆ ಚಿರತೆ ದಾಳಿ

Suddi Udaya

ಉಜಿರೆ ಪೇಟೆಯಲ್ಲಿ ಪಾರ್ಕಿಂಗ್ ಸುವ್ಯವಸ್ಥೆ ಕುರಿತು ಸಭೆ

Suddi Udaya

ಓಡೀಲು ಶ್ರೀ ಕ್ಷೇತ್ರ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಉಡುಪಿ ಪೇಜಾವರ ಸ್ವಾಮೀಜಿ ಬೇಟಿ

Suddi Udaya

ಕುತ್ಲೂರು: ಪುನರ್ವಸತಿ ಹೊಂದಿರುವ ಫಲಾನುಭವಿಗಳಿಗೆ ಉಚಿತ ಕೃಷಿ ಉಪಕರಣಗಳ ವಿತರಣೆ

Suddi Udaya

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಇದರ ನೇತೃತ್ವ ರೂ. 6 ಕೋಟಿ ವೆಚ್ಚದ ನೂತನವಾಗಿ ನಿರ್ಮಿಸಲಾದ ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಹಾಗೂ ವಾಣಿ ವಿದ್ಯಾಸಂಸ್ಥೆಗಳ ನೂತನ ಕಟ್ಟಡ ಎ.20 ರಂದು ಶೃಂಗೇರಿ ಮಠದ ಶ್ರೀಮಜ್ಜದ್ಗುರು ಶ್ರೀ ವಿಧುಶೇಖರಭಾರತೀ ಸ್ವಾಮೀಜಿಯವರಿಂದ ಲೋಕಾರ್ಪಣೆ

Suddi Udaya

ಕೊಕ್ಕಡ ಸ.ಪ. ಪೂ. ಕಾಲೇಜಿನಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

Suddi Udaya
error: Content is protected !!