26 C
ಪುತ್ತೂರು, ಬೆಳ್ತಂಗಡಿ
April 3, 2025
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿರಾಜ್ಯ ಸುದ್ದಿವರದಿ

ನ್ಯಾಯಾಲಯದ ವಿಚಾರಣೆ ಹಾಜರಾಗದೆ 56 ವರ್ಷಗಳಿಂದ ವಿವಿಧ ಹೆಸರುಗಳಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿ: ಕುಟುಂಬವನ್ನು ಪತ್ತೆ ಹಚ್ಚಿದ ಬೆಳ್ತಂಗಡಿ ಪೊಲೀಸರು ಮರಣ ಹೊಂದಿದ್ದ ಆರೋಪಿ

ಬೆಳ್ತಂಗಡಿ: ಬೆಳ್ತಂಗಡಿ ಠಾಣೆಯಲ್ಲಿ ದಾಖಲಾದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ಕಳೆದ 56 ವರ್ಷಗಳಿಂದ ವಿವಿಧ ಹೆಸರುಗಳಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಕುಟುಂಬವನ್ನು ಪ್ರಕರಣವನ್ನು ಬೆಳ್ತಂಗಡಿ ಠಾಣಾ ಪೊಲೀಸರು ಪತ್ತೆ ಹಚ್ಚಿದ್ದಾರೆ. ಆದರೆ ಆರೋಪಿ ಮರಣ ಹೊಂದಿರುವುದು ಬೆಳಕಿಗೆ ಬಂದಿದೆ.

ವಿವಿಧ ಹೆಸರುಗಳಿಂದ ತಲೆಮರೆಸಿಕೊಂಡಿದ್ದ ಸಿ.ಎಂ ರಾಮಯ್ಯ @ ಸಿ.ಎಂ ರಾಮು @ ಸಿ.ಎಂ ಮಾಮು @ ಸಿ.ಎಂ ಬಿದ್ಧಪ್ಪ (33 ವ) ಎಂಬವರ ಪತ್ತೆಗಾಗಿ ಬೆಳ್ತಂಗಡಿ ಠಾಣಾ ಪೊಲೀಸ್ ಉಪನಿರೀಕ್ಷಕರಾದ ಪಿಎಸ್‌ಐ ಧನರಾಜ್ ಟಿ.ಎಂ. ಮತ್ತು ಪಿಎಸೈ(ತನಿಖೆ) ಚಂದ್ರಶೇಖರ್ ಎ ಎಮ್ ರವರ ನೇತೃತ್ವದಲ್ಲಿ ಹೆಚ್. ಸಿ. ಗಂಗಾಧರ್ ಬಿ. ಮತ್ತು ಹೆಚ್ .ಸಿ. ಆಶೋಕ್ ರವರು ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ವಿವಿಧ ಕಡೆಗಳಲ್ಲಿ ಸಂಚರಿಸಿದ್ದರು. ಈ ವೇಳೆಯಲ್ಲಿ ಆರೋಪಿಯ ಮಗ ಮತ್ತು ಪತ್ನಿ ವಾಸ್ತವ್ಯವಿದ್ದ ಮನೆಯನ್ನು ಪತ್ತೆ ಹಚ್ಚಿ ಕೂಲಂಕುಷವಾಗಿ ವಿಚಾರಿಸಲಾಗಿತ್ತು.

ವಿಚಾರಣೆಯ ವೇಳೆಗೆ ಸದ್ರಿ ಸುದೀರ್ಘ ಕಾಲದಿಂದ ತಲೆಮರೆಸಿಕೊಂಡಿದ್ದ ಆರೋಪಿ 2019 ನ. 26 ರಂದು ಮರಣ ಹೊಂದಿರುವುದಾಗಿ ತಿಳಿದು ಬಂದಿರುತ್ತು.

ಸದ್ರಿ ವ್ಯಕ್ತಿಯ ಮರಣದ ಬಗ್ಗೆ ಸೂಕ್ತ ದಾಖಲಾತಿಗಳನ್ನು ಪಡೆದು, 56 ವರ್ಷಗಳಷ್ಟು ಹಳೆಯದಾದ ಪ್ರಕರಣವನ್ನು ಪತ್ತೆ ಹಚ್ಚಿ ಸಾರ್ವಜನಿಕ ವಲಯದಲ್ಲಿ ಪ್ರಶಂಸೆಗೆ ಪಾತ್ರರಾಗಿರುತ್ತಾರೆ.

Related posts

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಆರ್ಥಿಕ ಸಾಕ್ಷರತೆ ಕಾರ್ಯಕ್ರಮ

Suddi Udaya

ಧರ್ಮಸ್ಥಳ: ನೀರಚಿಲುಮೆ ಬಸ್ ಸ್ಟ್ಯಾಂಡಿನ ಬಳಿ ಹೆದ್ದಾರಿ ಬದಿಯಲ್ಲಿ ಕುಸಿದ ರಸ್ತೆ

Suddi Udaya

ಡೆಂಗ್ಯೂ ವಿರೋಧ ಮಾಸಾಚಾರಣೆ ಅಂಗವಾಗಿ ತಾಲೂಕಿನ ಗ್ರಾ.ಪಂ. ಗಳ ಪಿಡಿಒ, ಕಾರ್ಯದರ್ಶಿ ಮತ್ತು ಸಿಬ್ಬಂದಿಗಳಿಗೆ ಮಾಹಿತಿ

Suddi Udaya

ಬೆಳ್ತಂಗಡಿ ಡಿ.ಕೆ.ಆರ್. ಡಿ.ಎಸ್ ನೇತೃತ್ವದಲ್ಲಿ ವಿಶ್ವ ಕ್ಯಾನ್ಸರ್ ದಿನಾಚರಣೆ ಹಾಗೂ ಕ್ಯಾನ್ಸರ್ ರೋಗಿಗಳಿಗಾಗಿ ಧನ ಸಹಾಯ ಸಂಗ್ರಹಣಾ ಅಭಿಯಾನ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಗೋ ಪೂಜೆ

Suddi Udaya

ಬಳಂಜ, ನಿಟ್ಟಡ್ಕ ಶಾಲೆಯಲ್ಲಿ ಬಿರುಸಿನ ಮತದಾನ

Suddi Udaya
error: Content is protected !!