July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿರಾಜ್ಯ ಸುದ್ದಿವರದಿ

ನ್ಯಾಯಾಲಯದ ವಿಚಾರಣೆ ಹಾಜರಾಗದೆ 56 ವರ್ಷಗಳಿಂದ ವಿವಿಧ ಹೆಸರುಗಳಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿ: ಕುಟುಂಬವನ್ನು ಪತ್ತೆ ಹಚ್ಚಿದ ಬೆಳ್ತಂಗಡಿ ಪೊಲೀಸರು ಮರಣ ಹೊಂದಿದ್ದ ಆರೋಪಿ

ಬೆಳ್ತಂಗಡಿ: ಬೆಳ್ತಂಗಡಿ ಠಾಣೆಯಲ್ಲಿ ದಾಖಲಾದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ಕಳೆದ 56 ವರ್ಷಗಳಿಂದ ವಿವಿಧ ಹೆಸರುಗಳಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಕುಟುಂಬವನ್ನು ಪ್ರಕರಣವನ್ನು ಬೆಳ್ತಂಗಡಿ ಠಾಣಾ ಪೊಲೀಸರು ಪತ್ತೆ ಹಚ್ಚಿದ್ದಾರೆ. ಆದರೆ ಆರೋಪಿ ಮರಣ ಹೊಂದಿರುವುದು ಬೆಳಕಿಗೆ ಬಂದಿದೆ.

ವಿವಿಧ ಹೆಸರುಗಳಿಂದ ತಲೆಮರೆಸಿಕೊಂಡಿದ್ದ ಸಿ.ಎಂ ರಾಮಯ್ಯ @ ಸಿ.ಎಂ ರಾಮು @ ಸಿ.ಎಂ ಮಾಮು @ ಸಿ.ಎಂ ಬಿದ್ಧಪ್ಪ (33 ವ) ಎಂಬವರ ಪತ್ತೆಗಾಗಿ ಬೆಳ್ತಂಗಡಿ ಠಾಣಾ ಪೊಲೀಸ್ ಉಪನಿರೀಕ್ಷಕರಾದ ಪಿಎಸ್‌ಐ ಧನರಾಜ್ ಟಿ.ಎಂ. ಮತ್ತು ಪಿಎಸೈ(ತನಿಖೆ) ಚಂದ್ರಶೇಖರ್ ಎ ಎಮ್ ರವರ ನೇತೃತ್ವದಲ್ಲಿ ಹೆಚ್. ಸಿ. ಗಂಗಾಧರ್ ಬಿ. ಮತ್ತು ಹೆಚ್ .ಸಿ. ಆಶೋಕ್ ರವರು ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ವಿವಿಧ ಕಡೆಗಳಲ್ಲಿ ಸಂಚರಿಸಿದ್ದರು. ಈ ವೇಳೆಯಲ್ಲಿ ಆರೋಪಿಯ ಮಗ ಮತ್ತು ಪತ್ನಿ ವಾಸ್ತವ್ಯವಿದ್ದ ಮನೆಯನ್ನು ಪತ್ತೆ ಹಚ್ಚಿ ಕೂಲಂಕುಷವಾಗಿ ವಿಚಾರಿಸಲಾಗಿತ್ತು.

ವಿಚಾರಣೆಯ ವೇಳೆಗೆ ಸದ್ರಿ ಸುದೀರ್ಘ ಕಾಲದಿಂದ ತಲೆಮರೆಸಿಕೊಂಡಿದ್ದ ಆರೋಪಿ 2019 ನ. 26 ರಂದು ಮರಣ ಹೊಂದಿರುವುದಾಗಿ ತಿಳಿದು ಬಂದಿರುತ್ತು.

ಸದ್ರಿ ವ್ಯಕ್ತಿಯ ಮರಣದ ಬಗ್ಗೆ ಸೂಕ್ತ ದಾಖಲಾತಿಗಳನ್ನು ಪಡೆದು, 56 ವರ್ಷಗಳಷ್ಟು ಹಳೆಯದಾದ ಪ್ರಕರಣವನ್ನು ಪತ್ತೆ ಹಚ್ಚಿ ಸಾರ್ವಜನಿಕ ವಲಯದಲ್ಲಿ ಪ್ರಶಂಸೆಗೆ ಪಾತ್ರರಾಗಿರುತ್ತಾರೆ.

Related posts

ಗ್ರಾಮಗಳಲ್ಲಿ ಕಿರು ಉದ್ದಿಮೆಗಳ ಮೂಲಕ ಲಕ್ಷಾಂತರ ಸ್ವ ಉದ್ಯೋಗಗಳನ್ನು ಸೃಷ್ಟಿಸಿದ ಗ್ರಾಮಾಭಿವೃದ್ಧಿ ಯೋಜನೆಗೆ ‘ಬಿ.ಸಿ. ಮಾದರಿಯ ಶ್ರೇಷ್ಠ ಎಂ.ಎಸ್.ಎಂ.ಇ. ಪೋಷಕ ಸಂಸ್ಥೆ’ ಪ್ರಶಸ್ತಿ

Suddi Udaya

ಆಮಂತ್ರಣ ಪರಿವಾರ ಮತ್ತು ಆಮಂತ್ರಣ ಸಾಂಸ್ಕೃತಿಕ ವೇದಿಕೆ ಕರ್ನಾಟಕ ಆಯೋಜಿಸಿರುವ ರಾಜ್ಯಮಟ್ಟದ ಮುದ್ದುಕೃಷ್ಣ ಸ್ಪರ್ಧೆಯ ಫಲಿತಾಂಶ

Suddi Udaya

ಎ.ಕೃಷ್ಣಪ್ಪ ಪೂಜಾರಿಯವರಿಗೆ ’ಶ್ರೇಷ್ಠ ಶಿಕ್ಷಕ ಸೌರಭ ಪ್ರಶಸ್ತಿ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ನಡೆದ 74 ಅಸಹಜ ಸಾವಿನ ಪ್ರಕರಣ: ವರದಿ ನೀಡಲು ಹೈಕೋರ್ಟ್ ಆದೇಶ

Suddi Udaya

ಬೆಳ್ತಂಗಡಿ: ತಾಲೂಕು ಮಟ್ಟದ ಶಾಲಾ ಪ್ರಾರಂಭೋತ್ಸವ ಹಾಗೂ ಮೆಗಾ ಪೋಷಕರ ಸಭೆ

Suddi Udaya

ಕರಾಯ ಮೂರ್ತೆದಾರ ಸೇವಾ ಸಹಕಾರಿ ಸಂಘದ ನೂತನ ಕಟ್ಟಡದ ಶಿಲಾನ್ಯಾಸ

Suddi Udaya
error: Content is protected !!