July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿರಾಜ್ಯ ಸುದ್ದಿವರದಿ

ನ್ಯಾಯಾಲಯದ ವಿಚಾರಣೆ ಹಾಜರಾಗದೆ 56 ವರ್ಷಗಳಿಂದ ವಿವಿಧ ಹೆಸರುಗಳಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿ: ಕುಟುಂಬವನ್ನು ಪತ್ತೆ ಹಚ್ಚಿದ ಬೆಳ್ತಂಗಡಿ ಪೊಲೀಸರು ಮರಣ ಹೊಂದಿದ್ದ ಆರೋಪಿ

ಬೆಳ್ತಂಗಡಿ: ಬೆಳ್ತಂಗಡಿ ಠಾಣೆಯಲ್ಲಿ ದಾಖಲಾದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ಕಳೆದ 56 ವರ್ಷಗಳಿಂದ ವಿವಿಧ ಹೆಸರುಗಳಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಕುಟುಂಬವನ್ನು ಪ್ರಕರಣವನ್ನು ಬೆಳ್ತಂಗಡಿ ಠಾಣಾ ಪೊಲೀಸರು ಪತ್ತೆ ಹಚ್ಚಿದ್ದಾರೆ. ಆದರೆ ಆರೋಪಿ ಮರಣ ಹೊಂದಿರುವುದು ಬೆಳಕಿಗೆ ಬಂದಿದೆ.

ವಿವಿಧ ಹೆಸರುಗಳಿಂದ ತಲೆಮರೆಸಿಕೊಂಡಿದ್ದ ಸಿ.ಎಂ ರಾಮಯ್ಯ @ ಸಿ.ಎಂ ರಾಮು @ ಸಿ.ಎಂ ಮಾಮು @ ಸಿ.ಎಂ ಬಿದ್ಧಪ್ಪ (33 ವ) ಎಂಬವರ ಪತ್ತೆಗಾಗಿ ಬೆಳ್ತಂಗಡಿ ಠಾಣಾ ಪೊಲೀಸ್ ಉಪನಿರೀಕ್ಷಕರಾದ ಪಿಎಸ್‌ಐ ಧನರಾಜ್ ಟಿ.ಎಂ. ಮತ್ತು ಪಿಎಸೈ(ತನಿಖೆ) ಚಂದ್ರಶೇಖರ್ ಎ ಎಮ್ ರವರ ನೇತೃತ್ವದಲ್ಲಿ ಹೆಚ್. ಸಿ. ಗಂಗಾಧರ್ ಬಿ. ಮತ್ತು ಹೆಚ್ .ಸಿ. ಆಶೋಕ್ ರವರು ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ವಿವಿಧ ಕಡೆಗಳಲ್ಲಿ ಸಂಚರಿಸಿದ್ದರು. ಈ ವೇಳೆಯಲ್ಲಿ ಆರೋಪಿಯ ಮಗ ಮತ್ತು ಪತ್ನಿ ವಾಸ್ತವ್ಯವಿದ್ದ ಮನೆಯನ್ನು ಪತ್ತೆ ಹಚ್ಚಿ ಕೂಲಂಕುಷವಾಗಿ ವಿಚಾರಿಸಲಾಗಿತ್ತು.

ವಿಚಾರಣೆಯ ವೇಳೆಗೆ ಸದ್ರಿ ಸುದೀರ್ಘ ಕಾಲದಿಂದ ತಲೆಮರೆಸಿಕೊಂಡಿದ್ದ ಆರೋಪಿ 2019 ನ. 26 ರಂದು ಮರಣ ಹೊಂದಿರುವುದಾಗಿ ತಿಳಿದು ಬಂದಿರುತ್ತು.

ಸದ್ರಿ ವ್ಯಕ್ತಿಯ ಮರಣದ ಬಗ್ಗೆ ಸೂಕ್ತ ದಾಖಲಾತಿಗಳನ್ನು ಪಡೆದು, 56 ವರ್ಷಗಳಷ್ಟು ಹಳೆಯದಾದ ಪ್ರಕರಣವನ್ನು ಪತ್ತೆ ಹಚ್ಚಿ ಸಾರ್ವಜನಿಕ ವಲಯದಲ್ಲಿ ಪ್ರಶಂಸೆಗೆ ಪಾತ್ರರಾಗಿರುತ್ತಾರೆ.

Related posts

ಪೆರ್ಲ-ಬೈಪಾಡಿ ಸ.ಹಿ.ಪ್ರಾ. ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya

ಬಳಂಜ: ನಿಧನರಾದ ಮಾಜಿ ಶಾಸಕ ಕೆ.ವಸಂತ ಬಂಗೇರರವರಿಗೆ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ನುಡಿ ನಮನ ಅರ್ಪಣೆ

Suddi Udaya

ಓಡಿಲ್ನಾಳ ಸ.ಉ.ಪ್ರಾ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ವಾಣಿ ಕಾಲೇಜು: ಸಮಾನ ನಾಗರಿಕ ಸಂಹಿತೆ ಮಾಹಿತಿ ಉಪನ್ಯಾಸ

Suddi Udaya

ಶಿಶಿಲ ಸ.ಹಿ.ಪ್ರಾ. ಶಾಲಾ ಕಟ್ಟಡಕ್ಕೆ ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ವತಿಯಿಂದ ರೂ.1.50ಲಕ್ಷ ಸಹಾಯಧನ

Suddi Udaya

ಕಿಲ್ಲೂರು ಮುಖ್ಯ ರಸ್ತೆಯ ಸೇತುವೆ ಸುರಕ್ಷಿತಗೊಳಿಸಲು ಪ್ರತಿಭಟನೆ : ಕಿಲ್ಲೂರು ಮುಖ್ಯ ರಸ್ತೆಯ ಸೇತುವೆ ಸುರಕ್ಷಿತಗೊಳಿಸಲು ಪ್ರತಿಭಟನೆ : ಲೋಕೋಪಯೋಗಿ ಇಲಾಖೆಯ ಎಇಇ ಹಾಗೂ ಸಹಾಯಕ ಇಂಜಿನಿಯರ್ ರವರಿಗೆ ಮನವಿ

Suddi Udaya
error: Content is protected !!