25.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿರಾಜ್ಯ ಸುದ್ದಿವರದಿ

ನ್ಯಾಯಾಲಯದ ವಿಚಾರಣೆ ಹಾಜರಾಗದೆ 56 ವರ್ಷಗಳಿಂದ ವಿವಿಧ ಹೆಸರುಗಳಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿ: ಕುಟುಂಬವನ್ನು ಪತ್ತೆ ಹಚ್ಚಿದ ಬೆಳ್ತಂಗಡಿ ಪೊಲೀಸರು ಮರಣ ಹೊಂದಿದ್ದ ಆರೋಪಿ

ಬೆಳ್ತಂಗಡಿ: ಬೆಳ್ತಂಗಡಿ ಠಾಣೆಯಲ್ಲಿ ದಾಖಲಾದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ಕಳೆದ 56 ವರ್ಷಗಳಿಂದ ವಿವಿಧ ಹೆಸರುಗಳಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಕುಟುಂಬವನ್ನು ಪ್ರಕರಣವನ್ನು ಬೆಳ್ತಂಗಡಿ ಠಾಣಾ ಪೊಲೀಸರು ಪತ್ತೆ ಹಚ್ಚಿದ್ದಾರೆ. ಆದರೆ ಆರೋಪಿ ಮರಣ ಹೊಂದಿರುವುದು ಬೆಳಕಿಗೆ ಬಂದಿದೆ.

ವಿವಿಧ ಹೆಸರುಗಳಿಂದ ತಲೆಮರೆಸಿಕೊಂಡಿದ್ದ ಸಿ.ಎಂ ರಾಮಯ್ಯ @ ಸಿ.ಎಂ ರಾಮು @ ಸಿ.ಎಂ ಮಾಮು @ ಸಿ.ಎಂ ಬಿದ್ಧಪ್ಪ (33 ವ) ಎಂಬವರ ಪತ್ತೆಗಾಗಿ ಬೆಳ್ತಂಗಡಿ ಠಾಣಾ ಪೊಲೀಸ್ ಉಪನಿರೀಕ್ಷಕರಾದ ಪಿಎಸ್‌ಐ ಧನರಾಜ್ ಟಿ.ಎಂ. ಮತ್ತು ಪಿಎಸೈ(ತನಿಖೆ) ಚಂದ್ರಶೇಖರ್ ಎ ಎಮ್ ರವರ ನೇತೃತ್ವದಲ್ಲಿ ಹೆಚ್. ಸಿ. ಗಂಗಾಧರ್ ಬಿ. ಮತ್ತು ಹೆಚ್ .ಸಿ. ಆಶೋಕ್ ರವರು ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ವಿವಿಧ ಕಡೆಗಳಲ್ಲಿ ಸಂಚರಿಸಿದ್ದರು. ಈ ವೇಳೆಯಲ್ಲಿ ಆರೋಪಿಯ ಮಗ ಮತ್ತು ಪತ್ನಿ ವಾಸ್ತವ್ಯವಿದ್ದ ಮನೆಯನ್ನು ಪತ್ತೆ ಹಚ್ಚಿ ಕೂಲಂಕುಷವಾಗಿ ವಿಚಾರಿಸಲಾಗಿತ್ತು.

ವಿಚಾರಣೆಯ ವೇಳೆಗೆ ಸದ್ರಿ ಸುದೀರ್ಘ ಕಾಲದಿಂದ ತಲೆಮರೆಸಿಕೊಂಡಿದ್ದ ಆರೋಪಿ 2019 ನ. 26 ರಂದು ಮರಣ ಹೊಂದಿರುವುದಾಗಿ ತಿಳಿದು ಬಂದಿರುತ್ತು.

ಸದ್ರಿ ವ್ಯಕ್ತಿಯ ಮರಣದ ಬಗ್ಗೆ ಸೂಕ್ತ ದಾಖಲಾತಿಗಳನ್ನು ಪಡೆದು, 56 ವರ್ಷಗಳಷ್ಟು ಹಳೆಯದಾದ ಪ್ರಕರಣವನ್ನು ಪತ್ತೆ ಹಚ್ಚಿ ಸಾರ್ವಜನಿಕ ವಲಯದಲ್ಲಿ ಪ್ರಶಂಸೆಗೆ ಪಾತ್ರರಾಗಿರುತ್ತಾರೆ.

Related posts

ಮಗನ ಮದುವೆ ಸಂಭ್ರಮದಲ್ಲಿ ಇದ್ದ ತಂದೆ ಹೃದಯಾಘಾತದಿಂದ ಸಾವು

Suddi Udaya

ಶ್ರೀಮತಿ ಉಮಾವತಿ ರುಕ್ಮಯ ಗೌಡ ರವರಿಗೆ ರಾಜ್ಯಪಾಲರಿಂದ ಘಟಿಕೋತ್ಸವದಲ್ಲಿ ರ್‍ಯಾಂಕ್ ಪದವಿ ಪ್ರಶಸ್ತಿ ಪ್ರದಾನ

Suddi Udaya

ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಮೆಸ್ಕಾಂ ಅಧ್ಯಕ್ಷ ಕೆ. ಹರೀಶ್ ಕುಮಾರ್ ಭೇಟಿ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ಬೇಸಿಗೆ ಶಿಬಿರ ಸಮ್ಮರ್ ಪ್ಯಾರಡೈಸ್ ಉದ್ಘಾಟನಾ ಸಮಾರಂಭ

Suddi Udaya

ಲಾಯಿಲ ಶ್ರೀ ರಾಘವೇಂದ್ರ ಸ್ವಾಮಿಗಳ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆಯ ಎಸ್‌ಡಿಎಂ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಕಾಲೇಜಿಗೆ ಮತ್ತೊಮ್ಮೆ ಶ್ರೇಷ್ಠತೆ ಸಾಬೀತು

Suddi Udaya
error: Content is protected !!