22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಡಗಕಾರಂದೂರು ಸ.ಉ.ಹಿ.ಪ್ರಾ. ಶಾಲೆಯಲ್ಲಿ “ಹದಿಹರೆಯ ಮತ್ತು ಆರೋಗ್ಯ” ಕಾರ್ಯಕ್ರಮ

ಅಳದಂಗಡಿ: ಉಜಿರೆ ಎಸ್‌ಡಿಎಂ ಸ್ನಾತಕೋತ್ತರ ಕೇಂದ್ರದ ಸಮಾಜ ಕಾರ್ಯ ವಿಭಾಗದ ವಿದ್ಯಾರ್ಥಿಗಳು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಬಡಗಕಾರಂದೂರು ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ, ಅಳದಂಗಡಿ ಇದರ ಸಹಯೋಗದೊಂದಿಗೆ ಬಡಗಕಾರಂದೂರು ಸ.ಉ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಹದಿಹರೆಯ ಮತ್ತು ಆರೋಗ್ಯ ಎಂಬ ವಿಷಯದ ಕುರಿತು ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.


ಸಂಪನ್ಮೂಲ ವ್ಯಕ್ತಿಗಳಾಗಿ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಕೌನ್ಸಿಲರ್ ಶ್ರೀಮತಿ ರಮ್ಯ ಬಿ., ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಹದಿಹರೆಯದವರು ತಮ್ಮ ಆರೋಗ್ಯ ಯೋಗಕ್ಷೇಮಕ್ಕೆ ಸಂಬಂಧಿಸಿದಂತೆ ತಿಳುವಳಿಕೆಯುಳ್ಳ ಮತ್ತು ಜವಾಬ್ದಾರಿಯುತ ನಿರ್ಧಾರಗಳನ್ನು ತೆಗೆದುಕೊಳ್ಳುವ ಮೂಲಕ ತಮ್ಮ ಸಂಪೂರ್ಣ ಸಾಮರ್ಥ್ಯವನ್ನು ಅರಿತುಕೊಳ್ಳಲು ಸಾಧ್ಯವಾಗುತ್ತದೆ ಎಂದು ಹೇಳಿದರು.
ವೇದಿಕೆಯಲ್ಲಿ ಶ್ರೀಮತಿ ತೃಪ್ತಿ ಉಪಸ್ಥಿತರಿದ್ದರು. ಮುಖ್ಯೋಪಾಧ್ಯಾಯ ಸುರೇಶ್ ಎನ್. ಅಧ್ಯಕ್ಷೀಯ ನುಡಿಗಳನ್ನಾಡಿದರು.


ಸಮಾಜಕಾರ್ಯ ವಿಭಾಗದ ವಿದ್ಯಾರ್ಥಿನಿ ಚೈತ್ರಾ ಸ್ವಾಗತಿಸಿ, ಆದರ್ಶ ಕೆ.ಹೆಚ್. ವಂದಿಸಿದರು. ಪ್ರಿಯಾ ಕಾರ್ಯಕ್ರಮ ನಿರೂಪಿಸಿದರು.

Related posts

ಎಕ್ಸೆಲ್ ಪದವಿಪೂರ್ವ ಕಾಲೇಜಿನಲ್ಲಿ 25ನೇ ವರ್ಷದ ಕಾರ್ಗಿಲ್ ವಿಜಯೋತ್ಸವ ಸಂಭ್ರಮಾಚರಣೆ

Suddi Udaya

ಎಸ್.ಡಿ.ಎಮ್.ಪದವಿ ಪೂರ್ವ ಕಾಲೇಜಿನಲ್ಲಿ ʼಎಮ್ಯುಲೇಶನ್‌ʼ ಕಾರ್ಯಕ್ರಮ

Suddi Udaya

ತೆಕ್ಕಾರು ಬಟ್ರಬೈಲು ದೇವರಗುಡ್ಡೆ ಶೀ ಗೋಪಾಲಕೃಷ್ಣದಲ್ಲಿ ಮಾಡಾವು ವೆಂಕಟ್ರಮಣ ಭಟ್ ನೇತೃತ್ವದಲ್ಲಿ ಪ್ರಶ್ನಾಚಿಂತನೆ

Suddi Udaya

ನಾವೂರು: ತೋಟದ ಮನೆಗೆ ಸೋಲಾರ್ ಸರ್ಕ್ಯೂಟ್‌ನಿಂದ ಬೆಂಕಿ ತಗುಲಿ ಅಪಾರ ನಷ್ಟ

Suddi Udaya

ಬೆಳ್ತಂಗಡಿ ತಾಲೂಕು ಔಷಧಿ ‌ವ್ಯಾಪಾರಸ್ಥರ ಸಂಘ: ಜಾಗತಿಕ ಔಷಧಿ ತಜ್ಞರ ದಿನದ ಆಚರಣೆ

Suddi Udaya

ಆಟಿಡೊಂಜಿ ಕೆಸರ್ದ ಗೊಬ್ಬು ವತಿಯಿಂದ ಎಕ್ಸೆಲ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್‌ರಿಗೆ ಗೌರವಾರ್ಪಣೆ

Suddi Udaya
error: Content is protected !!