24.7 C
ಪುತ್ತೂರು, ಬೆಳ್ತಂಗಡಿ
May 17, 2025
Uncategorized

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ರಚನಾ ಸಭೆ

ಪಡಂಗಡಿ : ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಇದರ ಬ್ರಹ್ಮಕಲಶೋತ್ಸವ ಸಮಿತಿ ರಚನಾ ಸಭೆಯು ಡಿ 01 ರಂದು ದೇವಸ್ಥಾನದ ವಠಾರದಲ್ಲಿ ನಡೆಯಿತು.

ಸಭೆಯ ಅಧ್ಯಕ್ಷತೆಯನ್ನು ಉದ್ಯಮಿ ಶಶಿಧರ್ ಶೆಟ್ಟಿ ನವಶಕ್ತಿ ವಹಿಸಿ ಮಾತನಾಡಿ 12 ವರ್ಷಗಳಿಗೊಮ್ಮೆ ನಡೆಯುವ ಬ್ರಹ್ಮಕಲಶೋತ್ಸವ ಇದಕ್ಕೆ ನಾವೆಲ್ಲರೂ ಒಂದೇ ಮನಸ್ಸಿನಿಂದ ಒಂದು ವರ್ಷದಲ್ಲಿ ಉಳಿಯುವ ಲಾಭಾಂಶದ ಒಂದು ಪಾಲನ್ನು ಸಂತೋಷದಿಂದ ಒಪ್ಪಿಸಿದರೆ. ಒಳ್ಳೆಯ ರೀತಿಯಲ್ಲಿ ಮಾದರಿ ವೈಭವದ ಬ್ರಹ್ಮಕಲಶ ನಡೆಯಲು ಯಾವುದೇ ರೀತಿಯಲ್ಲೂ ತೊಂದರೆಯಾಗದು. ಅದ್ದರಿಂದ ಎಲ್ಲರೂ ಈ ಕಾರ್ಯಕ್ಕೆ ಕೈ ಜೋಡಿಸಬೇಕು ಎಂದರು.

ಸಭೆಯಲ್ಲಿ ತಂತ್ರಿಗಳಾದ ಉದಯ ಪಾಂಗಣ್ಣಾಯ, ಮಾಜಿ ಶಾಸಕ ಪ್ರಭಾಕರ ಬಂಗೇರ, ಗೋಪಾಲ ಶೆಟ್ಟಿ ಕೊರ್ಯರ್, ಸುಕೇಶ್ ಕಡಂಬು, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪ್ರಭಾಕರ ಉಪ್ಪಡ್ಕ ಉಪಸ್ಥಿತರಿದ್ದರು.

ಸಭೆಯಲ್ಲಿ ಬ್ರಹ್ಮಕಲಶೋತ್ಸವ ಯಾವ ರೀತಿಯಲ್ಲಿ ವ್ಯವಸ್ಥಿತ ರೀತಿಯಲ್ಲಿ ಮಾಡಬಹುದು ಎಂಬ ಬಗ್ಗೆ ಚರ್ಚಿಸಲಾಯಿತು.

ಚಿದಾನಂದ ಇಡ್ಯಾ ಕಾರ್ಯಕ್ರಮ ನಿರೂಪಿಸಿ, ಶಾಂತಾ ಜೆ ಬಂಗೇರ ಧನ್ಯವಾದವಿತ್ತರು.

Related posts

ಧರ್ಮಸ್ಥಳ: ಅಪರಿಚಿತ ಮಹಿಳೆ ಸಾವು: ವಾರೀಸುದಾರರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಕಿಲ್ಲೂರಿನಲ್ಲಿ ರಾಸಾಯನಿಕ ಇಂದ್ರಜಾಲ ವಿಶೇಷ ಕಾರ್ಯಕ್ರಮ

Suddi Udaya

ಮರೋಡಿಯ ಯುವಕ ನಿತಿನ್ ಪೂಜಾರಿ ನಿಧನ

Suddi Udaya

ಶಿಶಿಲ ಗ್ರಾ.ಪಂ. ಪ್ರಭಾರ ಪಂ.ಅ. ಅಧಿಕಾರಿಯಾಗಿ ದಿನೇಶ್ ಅಧಿಕಾರ ಸ್ವೀಕಾರ

Suddi Udaya

ರೆಖ್ಯ ಅಂಗನವಾಡಿಯಲ್ಲಿ ಹಾಳಾದ ಮೊಟ್ಟೆ ವಿತರಣೆ: ಗ್ರಾಮಸ್ಥರ ಅಕ್ರೋಶ

Suddi Udaya

ಕೆಪಿಸಿಸಿ ಕಾರ್ಮಿಕ ಘಟಕದ ರಾಜ್ಯ ಪದಾಧಿಕಾರಿಗಳ ಹಾಗೂ ಜಿಲ್ಲಾ ಅಧ್ಯಕ್ಷರುಗಳ ತರಬೇತಿ ಶಿಬಿರ

Suddi Udaya
error: Content is protected !!