July 23, 2026
Uncategorized

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ರಚನಾ ಸಭೆ

ಪಡಂಗಡಿ : ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಇದರ ಬ್ರಹ್ಮಕಲಶೋತ್ಸವ ಸಮಿತಿ ರಚನಾ ಸಭೆಯು ಡಿ 01 ರಂದು ದೇವಸ್ಥಾನದ ವಠಾರದಲ್ಲಿ ನಡೆಯಿತು.

ಸಭೆಯ ಅಧ್ಯಕ್ಷತೆಯನ್ನು ಉದ್ಯಮಿ ಶಶಿಧರ್ ಶೆಟ್ಟಿ ನವಶಕ್ತಿ ವಹಿಸಿ ಮಾತನಾಡಿ 12 ವರ್ಷಗಳಿಗೊಮ್ಮೆ ನಡೆಯುವ ಬ್ರಹ್ಮಕಲಶೋತ್ಸವ ಇದಕ್ಕೆ ನಾವೆಲ್ಲರೂ ಒಂದೇ ಮನಸ್ಸಿನಿಂದ ಒಂದು ವರ್ಷದಲ್ಲಿ ಉಳಿಯುವ ಲಾಭಾಂಶದ ಒಂದು ಪಾಲನ್ನು ಸಂತೋಷದಿಂದ ಒಪ್ಪಿಸಿದರೆ. ಒಳ್ಳೆಯ ರೀತಿಯಲ್ಲಿ ಮಾದರಿ ವೈಭವದ ಬ್ರಹ್ಮಕಲಶ ನಡೆಯಲು ಯಾವುದೇ ರೀತಿಯಲ್ಲೂ ತೊಂದರೆಯಾಗದು. ಅದ್ದರಿಂದ ಎಲ್ಲರೂ ಈ ಕಾರ್ಯಕ್ಕೆ ಕೈ ಜೋಡಿಸಬೇಕು ಎಂದರು.

ಸಭೆಯಲ್ಲಿ ತಂತ್ರಿಗಳಾದ ಉದಯ ಪಾಂಗಣ್ಣಾಯ, ಮಾಜಿ ಶಾಸಕ ಪ್ರಭಾಕರ ಬಂಗೇರ, ಗೋಪಾಲ ಶೆಟ್ಟಿ ಕೊರ್ಯರ್, ಸುಕೇಶ್ ಕಡಂಬು, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪ್ರಭಾಕರ ಉಪ್ಪಡ್ಕ ಉಪಸ್ಥಿತರಿದ್ದರು.

ಸಭೆಯಲ್ಲಿ ಬ್ರಹ್ಮಕಲಶೋತ್ಸವ ಯಾವ ರೀತಿಯಲ್ಲಿ ವ್ಯವಸ್ಥಿತ ರೀತಿಯಲ್ಲಿ ಮಾಡಬಹುದು ಎಂಬ ಬಗ್ಗೆ ಚರ್ಚಿಸಲಾಯಿತು.

ಚಿದಾನಂದ ಇಡ್ಯಾ ಕಾರ್ಯಕ್ರಮ ನಿರೂಪಿಸಿ, ಶಾಂತಾ ಜೆ ಬಂಗೇರ ಧನ್ಯವಾದವಿತ್ತರು.

Related posts

ಬಾರ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ: ರೂ.229.55 ಕೋಟಿ ವ್ಯವಹಾರ-ರೂ.82.10 ಲಕ್ಷ ಲಾಭ- ಶೇ 10.50 ಡಿವಿಡೆಂಡ್

Suddi Udaya

ಆ.22: ಬೆಳ್ತಂಗಡಿ ಉಪವಿಭಾಗ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಪ್ರೋ. ಕೆ.ಯಸ್ ಭಗವಾನ್ ಅವರ ಹೇಳಿಕೆಗೆ ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಖಂಡನೆ

Suddi Udaya

ಧರ್ಮಸ್ಥಳ: ಪಾಂಗಾಳ ಬಳಿ ರಸ್ತೆ ಅಪಘಾತ

Suddi Udaya

ಆ.4: ಆಟಿ ಅಮಾವಾಸ್ಯೆ ಪ್ರಯುಕ್ತ ಬೆಳ್ತಂಗಡಿ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ವತಿಯಿಂದ ಆಟಿದ ಕಷಾಯ ವಿತರಣೆ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲ ವಿಶೇಷ ಕಾರ್ಯಕಾರಿಣಿ ಸಭೆ ಹಾಗೂ ಸಂಸದ ಕ್ಯಾ. ಬ್ರಿಜೇಶ್ ಚೌಟ ರವರಿಗೆ ಅಭಿನಂದನ ಕಾರ್ಯಕ್ರಮ

Suddi Udaya
error: Content is protected !!