ಉಜಿರೆ: ನ.22 ರಂದು ಕಾಶ್ಮೀರದ ರಜೋರಿ ಜಿಲ್ಲೆಯಲ್ಲಿ ನಡೆದ ಕದನದಲ್ಲಿ ಉಗ್ರರ ಗುಂಡೇಟಿಗೆ ಬಲಿಯಾಗಿ ವೀರಮರಣ ಹೊಂದಿದ ಸುರತ್ಕಲ್ ಡೆಲ್ಲಿ ಪಬ್ಲಿಕ್ ಶಾಲೆಯ ‘ರಾಷ್ಟ್ರಪತಿ ಪದಕ’ ಪುರಸ್ಕೃತ ಸ್ಕೌಟ್ ವಿದ್ಯಾರ್ಥಿಯಾಗಿದ್ದ ವೀರಯೋಧ ರಾಷ್ಟ್ರೀಯ ರೈಫಲ್ ಕ್ಯಾಪ್ಟನ್ ಎಂ.ವಿ ಪ್ರಾಂಜಲ್ ರವರಿಗೆ ಶ್ರೀ.ಧ.ಮ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಉಜಿರೆ ಇಲ್ಲಿ ಸ್ಕೌಟ್ಸ್ ಗೈಡ್ಸ್ ವತಿಯಿಂದ ಶ್ರದ್ಧಾಂಜಲಿ ಅರ್ಪಿಸಲಾಯಿತು.
ಕಾರ್ಯಕ್ರಮದಲ್ಲಿ ಗೈಡ್ ಕ್ಯಾಪ್ಟನ್ ಉಷಾ ಇವರು ಪ್ರಾಂಜಲ್ ರವರ ಕಿರುಪರಿಚಯ ಮಾಡಿದರು. ಎಲ್ಲಾ ವಿದ್ಯಾರ್ಥಿಗಳು ಒಂದು ನಿಮಿಷ ಮೌನ ಪ್ರಾರ್ಥನೆ ಮಾಡಿ ವಿದ್ಯಾರ್ಥಿಗಳು ಹಾಗೂ ಶಿಕ್ಷಕ ವೃಂದ ಪ್ರಾಂಜಲ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮೃತರ ಆತ್ಮಕ್ಕೆ ಚಿರಶಾಂತಿ ಕೋರಿದರು.