July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಶ್ರೀ.ಧ.ಮಂ. ಆಂ.ಮಾ. ಶಾಲೆಯ ಸ್ಕೌಟ್ಸ್ ಗೈಡ್ಸ್ ವತಿಯಿಂದ “ರಾಷ್ಟ್ರಪತಿ ಪದಕ” ಪುರಸ್ಕೃತ ವೀರಯೋಧ ಕ್ಯಾಪ್ಟನ್ ಎಂ.ವಿ. ಪ್ರಾಂಜಲ್ ರವರಿಗೆ ಶ್ರದ್ಧಾಂಜಲಿ

ಉಜಿರೆ: ನ.22 ರಂದು ಕಾಶ್ಮೀರದ ರಜೋರಿ ಜಿಲ್ಲೆಯಲ್ಲಿ ನಡೆದ ಕದನದಲ್ಲಿ ಉಗ್ರರ ಗುಂಡೇಟಿಗೆ ಬಲಿಯಾಗಿ ವೀರಮರಣ ಹೊಂದಿದ ಸುರತ್ಕಲ್ ಡೆಲ್ಲಿ ಪಬ್ಲಿಕ್ ಶಾಲೆಯ ‘ರಾಷ್ಟ್ರಪತಿ ಪದಕ’ ಪುರಸ್ಕೃತ ಸ್ಕೌಟ್ ವಿದ್ಯಾರ್ಥಿಯಾಗಿದ್ದ ವೀರಯೋಧ ರಾಷ್ಟ್ರೀಯ ರೈಫಲ್‌ ಕ್ಯಾಪ್ಟನ್ ಎಂ.ವಿ ಪ್ರಾಂಜಲ್ ರವರಿಗೆ ಶ್ರೀ.ಧ.ಮ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಉಜಿರೆ ಇಲ್ಲಿ ಸ್ಕೌಟ್ಸ್ ಗೈಡ್ಸ್ ವತಿಯಿಂದ ಶ್ರದ್ಧಾಂಜಲಿ ಅರ್ಪಿಸಲಾಯಿತು.

ಕಾರ್ಯಕ್ರಮದಲ್ಲಿ ಗೈಡ್ ಕ್ಯಾಪ್ಟನ್ ಉಷಾ ಇವರು ಪ್ರಾಂಜಲ್ ರವರ ಕಿರುಪರಿಚಯ ಮಾಡಿದರು. ಎಲ್ಲಾ ವಿದ್ಯಾರ್ಥಿಗಳು ಒಂದು ನಿಮಿಷ ಮೌನ ಪ್ರಾರ್ಥನೆ ಮಾಡಿ ವಿದ್ಯಾರ್ಥಿಗಳು ಹಾಗೂ ಶಿಕ್ಷಕ ವೃಂದ ಪ್ರಾಂಜಲ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮೃತರ ಆತ್ಮಕ್ಕೆ ಚಿರಶಾಂತಿ ಕೋರಿದರು.

Related posts

ವಾಣಿ ಕಾಲೇಜಿನಲ್ಲಿ ರಾಷ್ಟ್ರೀಯ ಯುವ ದಿನಾಚರಣೆ ಮತ್ತು ಎನ್ ಎಸ್ ಎಸ್ ದೈನಂದಿನ ಚಟುವಟಿಕೆಗಳ ಸಮಾರೋಪ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಗೆ ‘ಕರ್ನಾಟಕ ಪರಿವರ್ತನೆಯ ರೂವಾರಿ’ ಪ್ರಶಸ್ತಿ

Suddi Udaya

ನಾಪತ್ತೆಯಾಗಿದ್ದ ಯುವಕನ ಶವ ಪಲ್ಗುಣಿ ನದಿಯಲ್ಲಿ ಪತ್ತೆ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ, ಮನೋಜ್ ಕುಮಾರ್ ಗಡಿಪಾರು ಪ್ರಕ್ರಿಯೆ ವಿರೋಧಿಸಿ ಖಂಡನಾ ಸಭೆ-ಹೋರಾಟಕ್ಕೆ ನಿರ್ಧಾರ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ ಅಣಬೆ ಬೇಸಾಯ ತರಬೇತಿ ಕಾರ್ಯಾಗಾರ

Suddi Udaya

ಕಳೆಂಜ: ಮಣಿಗೇರಿ, ಕುಲಾಡಿ ಕಾಂಕ್ರೀಟ್ ರಸ್ತೆಯ ಕಾಮಗಾರಿ ಅಂತಿಮ

Suddi Udaya
error: Content is protected !!