September 6, 2026
ಗ್ರಾಮಾಂತರ ಸುದ್ದಿಚುನಾವಣೆತಾಲೂಕು ಸುದ್ದಿ

ನಾರಾವಿ ಮಾಂಡೋವಿ ಮೋಟಾರ್ಸ್ ನಲ್ಲಿ 100 ನೇ ಕಾರಿನ ಕೀ ಹಸ್ತಾಂತರ ಕಾರ್ಯಕ್ರಮ

ನಾರಾವಿ: ದ.ಕ ಜಿಲ್ಲೆಯ ಪ್ರತಿಷ್ಠಿತ ಮಾರುತಿ ಸುಝುಕಿ ಕಾರುಗಳ ಅಧಿಕೃತ ಮಾರಾಟಗಾರರಾದ ಮಾಂಡೋವಿ ಮೋಟಾರ್ಸ್ ಪ್ರೈ. ಲಿ. ಮಂಗಳೂರು ಇವರ ನೂತನ ಶಾಖೆ ನಾರಾವಿಯಲ್ಲಿ ನೂರನೇ ಕಾರಿನ ಕೀಲಿ ಹಸ್ತಾಂತರ ಕಾರ್ಯಕ್ರಮ ನ.24 ರಂದು ನಡೆಯಿತು.

ಈ ಸಂದರ್ಭದಲ್ಲಿ ನೂತನ ಕಾರಿನ ಕೀಲಿಯನ್ನು ಗ್ರಾಹಕರಾದ ಕರುಣಾಕರ ಜೈನ್ ನಾರಾವಿ,ಪದ್ಮಪ್ರಸಾದ್ ಜೈನ್ ನಾರಾವಿ, ಸುಬ್ರಹ್ಮಣ್ಯ ಭಟ್ ಪಣಕಾಜೆ, ಹಬೀಬ್ ಮುತ್ರಿಮಜಲು ರವರಿಗೆ ಹಸ್ತಾಂತರಿಸಲಾಯಿತು.

ಕಾರ್ಯಕ್ರಮದಲ್ಲಿ ನಾರಾವಿ ಗ್ರಾಮ ಪಂಚಾಯತ್ ಅಧ್ಯಕ್ಷ ರಾಜವರ್ಮ ಜೈನ್, ಉದ್ಯಮಿಗಳಾದ ರೋಶನ್ ಹೆಗ್ಡೆ, ಸುರೇಂದ್ರ ಕುಮಾರ್ ಹಾಗೂ ರವಿಕುಮಾರ್ ಅರಸಿಕಟ್ಟೆಉಪಸ್ಥಿತರಿದ್ದರು.

ಮಾಂಡೋವಿ ಮೋಟಾರ್ಸ್ ಮಂಗಳೂರು ರೂರಲ್ ಸೇಲ್ಸ್ ಮ್ಯಾನೇಜರ್ ಸುಜಿತ್ ಕಾರ್ಯಕ್ರಮ ನಿರೂಪಿಸಿ, ಎಜಿಎಂ Nexa ಸೇಲ್ಸ್ ಅಕ್ಷಯ್ ಕುಮಾರ್ ವಂದಿಸಿದರು.

ಈ ಸಂದರ್ಭದಲ್ಲಿ ಗಣೇಶ್ ಕುಲಾಲ್ (Works Manager)ನಾರಾವಿ, ಮಾಂಡೋವಿ ಮೋಟಾರ್ಸ್ ಕ್ಯಾಲಿಟಿ ಕೇರ್ ಮ್ಯಾನೇಜರ್ ಗಿರೀಶ್ ಎಲ್.ಪಿ, ಸೇಲ್ಸ್ ಆಫೀಸರ್ ಗಳಾದ ಕಿಶೋರ್ ಕುಮಾರ್, ಸುಹಾಸ್ ಜೈನ್, ಸುಮಂತ್ ರಾಜ್, ಲೋಕೇಶ್ ಉಪಸ್ಥಿತರಿದ್ದರು.

ಅತೀ ಕಡಿಮೆ ಸಮಯದಲ್ಲಿ ನಾರಾವಿ ಗ್ರಾಮೀಣ ಪ್ರದೇಶದಲ್ಲಿ ನೂರು ಕಾರುಗಳ ಮಾರಾಟಕ್ಕೆ ಸಹಕರಿಸಿದ ಎಲ್ಲಾ ನಾರಾವಿ ಪರಿಸರದ ಗ್ರಾಹಕರಿಗೆ ಮಾಂಡೋವಿ ಮೋಟಾರ್ಸ್ ಆಡಳಿತ ಮಂಡಳಿ ಕೃತಜ್ಞತೆ ಸಲ್ಲಿಸಿದೆ.

ಟೀಮ್ ಸೇಲ್ಸ್ ಮ್ಯಾನೇಜರ್ ಚರಣ್ ಕುಮಾರ್ ಆಗಮಿಸಿದ ಅತಿಥಿ ಗಣ್ಯರನ್ನು ಸ್ವಾಗತಿಸಿ , ಮಾಂಡೋವಿ ಮೋಟಾರ್ಸ್ಸ್ ಬಗ್ಗೆ ತಿಳಿಸಿದರು.

Related posts

ತೋಟತ್ತಾಡಿ: ಹಾಡು ಹಗಲೇ ಮನೆಯ ಬಾಗಿಲ ಬೀಗವನ್ನು ಮುರಿದು ಗಾದ್ರೇಜ್‌ನ ಲಾಕರ್ ನಲ್ಲಿಟ್ಟಿದ್ದ ರೂ. 1.30 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

Suddi Udaya

ಸಿ.ಎ ಪರೀಕ್ಷೆಯಲ್ಲಿ ನಾರಾವಿಯ ಕು.ಸಂಗೀತಾ ಜಿ. ಹೆಗ್ಡೆ ತೇರ್ಗಡೆ

Suddi Udaya

ಪಡ್ಡಂದಡ್ಕ ನಿವೃತ್ತ ಮುಖ್ಯೋಪಾಧ್ಯಾಯ ತಿರುಮಲೇಶ್ವರ ಭಟ್ಟರಿಗೆ ‘ಹವ್ಯಕ ಶಿಕ್ಷಕ ರತ್ನ’ ಪ್ರಶಸ್ತಿ

Suddi Udaya

ಸೋಣoದೂರು: ಗಾಣದಕೊಟ್ಯ ನಿವಾಸಿ ಅಪ್ಪಿ ನಿಧನ

Suddi Udaya

ಸುಹಾಸ್ ಶೆಟ್ಟಿ ಮನೆಗೆ ಹೋಗಿ ಪೋಷಕರಿಗೆ ಸಾಂತ್ವನ ಹೇಳಿದ ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘ

Suddi Udaya

ಗುಡ್ಡ ಕುಸಿತದಂಥ ಪ್ರಕರಣ ಮತ್ತು ತಜ್ಞರ ಅಧ್ಯಯನ ವರದಿಗಳು ಭೂಕುಸಿತದ ಘೋರ ಪರಿಣಾಮಗಳನ್ನು ಜನರ ಮುಂದಿಟ್ಟಿದ್ದು ಯೋಜನೆಯನ್ನು ಮತ್ತೊಮ್ಮೆ ಪರಿಶೀಲಿಸುವಂತೆ ವಿ.ಪ.ಸದಸ್ಯ ಪ್ರತಾಪಸಿಂಹ ನಾಯಕ್ ರವರಿಂದ ಸಭಾಪತಿಗಳಿಗೆ ಮನವಿ

Suddi Udaya
error: Content is protected !!