September 6, 2026
ಅಪರಾಧ ಸುದ್ದಿ

ಪ್ರಾಥಮಿಕ ಶಾಲೆಯ ಬಾಲಕನ ಸೈಕಲನ್ನು ಮಾರಾಟ ಮಾಡಿದ ವಿಚಾರ:ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಿಂದಹಲ್ಲೆ ಆರೋಪ – ಬಾಲಕ ಆಸ್ಪತ್ರೆಗೆ ದಾಖಲು-ಪುಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ: ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾಬ್ಯಾಸ ಮಾಡಿಕೊಂಡಿರುವ
ಬಾಲಕ ಆತನ ಸೈಕಲನ್ನು ಮಾರಾಟ ಮಾಡಿದ ವಿಚಾರಕ್ಕೆ ಸಂಬಂದಿಸಿದಂತೆ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಹಲ್ಲೆ ನಡೆಸಿರುವುದಾಗಿ ಪುಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನ.28 ರಂದು ಬೆಳಿಗ್ಗೆ ಶಾಲೆಯಲ್ಲಿ ಶಾಲಾ ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷ ಪರಮೇಶ ಎಂಬವರು ಬಾಲಕನನ್ನು ವಿಚಾರಿಸಿ ಬಾಲಕನ ತಾಯಿಯ ಸಮಕ್ಷಮದಲ್ಲಿ ಬಾಲಕನಿಗೆ ಸಣ್ಣ ದೊಣ್ಣೆಯಿಂದ ಹಾಗೂ ಕೈಯಿಂದ ಹೊಡೆದಿರುತ್ತಾರೆ. ಈ ವೇಳೆ ಶಾಲಾ ಶಿಕ್ಷಕರಿಬ್ಬರು ಬಾಲಕನಿಗೆ ಹೊಡೆಯಲು ಪ್ರೇರೇಪಿಸಿರುತ್ತಾರೆ. ಹಲ್ಲೆ ನಡೆಸಿದ ಬಳಿಕ ಈ ವಿಚಾರವನ್ನು ಯಾರಿಗಾದರೂ ಹೇಳಿದರೇ ಸೈಕಲ್ ಕದ್ದು ಮಾರಾಟ ಮಾಡಿದ ಬಗ್ಗೆ ಕೇಸು ಹಾಕುವುದಾಗಿ ಬೆದರಿಕೆ ಹಾಕಿರುವುದಾಗಿ ಬಾಲಕ ಪೊಲೀಸರಿಗೆ ನೀಡಿದ ದೂರಿನಲ್ಲಿ ಆರೋಪಿಸಿದ್ದಾರೆ.
‌‌ಶಾಲೆಯಲ್ಲಿ ನಡೆದ ಹಲ್ಲೆಯಿಂದ ನ. 30 ರಂದು ಬೆಳಿಗ್ಗೆ ಬಾಲಕನಿಗೆ ಮನೆಯಲ್ಲಿ ಎದೆನೋವು ಕಾಣಿಸಿಕೊಂಡಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಯಲ್ಲಿ ದಾಖಲು ಮಾಡಿಕೊಂಡಿರುತ್ತಾರೆ ಎಂಬುದಾಗಿ ಸಂತ್ರಸ್ಥ ಬಾಲಕನು ನೀಡಿದ ದೂರಿನ ಮೇರೆಗೆ ಪುಂಜಾಲಕಟ್ಟೆ ಠಾಣೆಯಲ್ಲಿ ಕಲಂ: 323,324,506,114 ಜೊತೆಗೆ 34 ಐಪಿಸಿ ಮತ್ತು ಕಲಂ:75 ಬಾಲನ್ಯಾಯ ಕಾಯಿದೆ. ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಬಿಜೆಪಿಯಿಂದ ಹಣ ಹಂಚಿಕೆ ಆರೋಪ : ಮಾಜಿ ಶಾಸಕರಿಂದ ಠಾಣೆಗೆ ದೂರು: ಫ್ಲೈಯಿಂಗ್ ಸ್ಕ್ಯಾಡ್‌ನಿಂದ ಕಾರಿನ ಪರಿಶೀಲನೆ : ಮುಂದುವರಿದ ತನಿಖೆ

Suddi Udaya

ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯ ಬಂಧನ

Suddi Udaya

ಸುಜಾತಾ ಭಟ್ ನೀಡಿದ ನಾಪತ್ತೆ ಪ್ರಕರಣ: ಎಸ್ಐಟಿ ಕಚೇರಿಗೆ ಹಾಜರಾದ ವಸಂತಿ ಸಹೋದರ ವಿಜಯ್

Suddi Udaya

ಬೆಳ್ತಂಗಡಿ : ಚೆಕ್ ಅಮಾನ್ಯ ಪ್ರಕರಣ ಆರೋಪಿ ಲಾಯಿಲ ನಿವಾಸಿ ಸಾಜಿಲ್ ಗೆ ಶಿಕ್ಷೆ

Suddi Udaya

ಹಾಸನದ ಆಟೋಚಾಲಕನ ಕೊಲೆ ಮಾಡಿ ಶಿರಾಡಿ ಘಾಟ್ ನಲ್ಲಿ ಶವ ಬಿಸಾಕಿದ ಹಂತಕರು: ಧರ್ಮಸ್ಥಳ ನೇತ್ರಾವತಿ‌ ನದಿಯಲ್ಲಿ ಬಟ್ಟೆಗಳನ್ನು ಎಸೆದು ಪರಾರಿ

Suddi Udaya

ವಿಶ್ವ ಹಿಂದೂ ಪರಿಷತ್ ಬಜರಂಗದಳದ ಪ್ರಮುಖರು ಆಸ್ಪತ್ರೆಗೆ ಬೇಟಿ

Suddi Udaya
error: Content is protected !!