July 23, 2026
ಅಪರಾಧ ಸುದ್ದಿ

ಪ್ರಾಥಮಿಕ ಶಾಲೆಯ ಬಾಲಕನ ಸೈಕಲನ್ನು ಮಾರಾಟ ಮಾಡಿದ ವಿಚಾರ:ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಿಂದಹಲ್ಲೆ ಆರೋಪ – ಬಾಲಕ ಆಸ್ಪತ್ರೆಗೆ ದಾಖಲು-ಪುಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ: ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾಬ್ಯಾಸ ಮಾಡಿಕೊಂಡಿರುವ
ಬಾಲಕ ಆತನ ಸೈಕಲನ್ನು ಮಾರಾಟ ಮಾಡಿದ ವಿಚಾರಕ್ಕೆ ಸಂಬಂದಿಸಿದಂತೆ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಹಲ್ಲೆ ನಡೆಸಿರುವುದಾಗಿ ಪುಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನ.28 ರಂದು ಬೆಳಿಗ್ಗೆ ಶಾಲೆಯಲ್ಲಿ ಶಾಲಾ ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷ ಪರಮೇಶ ಎಂಬವರು ಬಾಲಕನನ್ನು ವಿಚಾರಿಸಿ ಬಾಲಕನ ತಾಯಿಯ ಸಮಕ್ಷಮದಲ್ಲಿ ಬಾಲಕನಿಗೆ ಸಣ್ಣ ದೊಣ್ಣೆಯಿಂದ ಹಾಗೂ ಕೈಯಿಂದ ಹೊಡೆದಿರುತ್ತಾರೆ. ಈ ವೇಳೆ ಶಾಲಾ ಶಿಕ್ಷಕರಿಬ್ಬರು ಬಾಲಕನಿಗೆ ಹೊಡೆಯಲು ಪ್ರೇರೇಪಿಸಿರುತ್ತಾರೆ. ಹಲ್ಲೆ ನಡೆಸಿದ ಬಳಿಕ ಈ ವಿಚಾರವನ್ನು ಯಾರಿಗಾದರೂ ಹೇಳಿದರೇ ಸೈಕಲ್ ಕದ್ದು ಮಾರಾಟ ಮಾಡಿದ ಬಗ್ಗೆ ಕೇಸು ಹಾಕುವುದಾಗಿ ಬೆದರಿಕೆ ಹಾಕಿರುವುದಾಗಿ ಬಾಲಕ ಪೊಲೀಸರಿಗೆ ನೀಡಿದ ದೂರಿನಲ್ಲಿ ಆರೋಪಿಸಿದ್ದಾರೆ.
‌‌ಶಾಲೆಯಲ್ಲಿ ನಡೆದ ಹಲ್ಲೆಯಿಂದ ನ. 30 ರಂದು ಬೆಳಿಗ್ಗೆ ಬಾಲಕನಿಗೆ ಮನೆಯಲ್ಲಿ ಎದೆನೋವು ಕಾಣಿಸಿಕೊಂಡಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಯಲ್ಲಿ ದಾಖಲು ಮಾಡಿಕೊಂಡಿರುತ್ತಾರೆ ಎಂಬುದಾಗಿ ಸಂತ್ರಸ್ಥ ಬಾಲಕನು ನೀಡಿದ ದೂರಿನ ಮೇರೆಗೆ ಪುಂಜಾಲಕಟ್ಟೆ ಠಾಣೆಯಲ್ಲಿ ಕಲಂ: 323,324,506,114 ಜೊತೆಗೆ 34 ಐಪಿಸಿ ಮತ್ತು ಕಲಂ:75 ಬಾಲನ್ಯಾಯ ಕಾಯಿದೆ. ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಬೆಳ್ತಂಗಡಿ ತಾಲೂಕು ಪಂಚಾಯತ್ ಕ್ವಾಟ್ರಸ್ ನಲ್ಲಿ ಬಾಲಕ ಆತ್ಮಹತ್ಯೆ

Suddi Udaya

ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ: ಆರೋಪಿ ನಾರಾವಿಯ ಯುವಕನಿಗೆ ನ್ಯಾಯಾಂಗ ಬಂಧನ

Suddi Udaya

ಹೊಸಂಗಡಿ ತೊರ್ಪೆ ಡ್ಯಾಂ ಬಳಿ ನದಿಯಲ್ಲಿ ಕಾರ್ಕಳ ಮಿಯಾರು ನಿವಾಸಿ ಯತೀಶ್ ಪೂಜಾರಿ ಶವ ಪತ್ತೆ : ಸಾವಿನ ಬಗ್ಗೆ ಸಂಶಯ ವ್ಯಕ್ತಪಡಿಸಿ ಕುಟುಂಬಸ್ಥರಿಂದ ಪೊಲೀಸರಿಗೆ ದೂರು

Suddi Udaya

ಉಜಿರೆ : ಅಕ್ರಮ ಮದ್ಯ ಮಾರಾಟ: ವಾಹನ ಸಹಿತ ರೂ. 1.53 ಲಕ್ಷದ ಮದ್ಯ ವಶ

Suddi Udaya

ತೋಟಾತ್ತಾಡಿ:ಜುಗಾರಿ ಅಡ್ಡೆಗೆ ಪೊಲೀಸರ ದಾಳಿ

Suddi Udaya

ಕಡಿರುದ್ಯಾವರ: ಅಕ್ರಮ ಮರಳು ಸಾಗಾಟಕ್ಕೆ ಯತ್ನ: ಬೆಳ್ತಂಗಡಿ ಪೊಲೀಸರಿಂದ ಇಬ್ಬರ ವಿರುದ್ಧ ಪ್ರಕರಣ ದಾಖಲು

Suddi Udaya
error: Content is protected !!