23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಕಡಿರ ಬನದಲ್ಲಿ ನಾಲ್ಕು ನಾಗನ ಕಲ್ಲುಗಳು ಹಾಗೂ ಎರಡು ಮಣ್ಣಿನ ಮಡಕೆ, ಒಂದು ತಿಬಿಲೆ ಪತ್ತೆ

ಕೊಕ್ಕಡ : ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ನಡೆದ ಅಷ್ಟಮಂಗಳ ಪ್ರಶ್ನೆಯಲ್ಲಿ ದೇವಸ್ಥಾನದ ಹತ್ತಿರ ಕಡಿರ ಬನ ಎಂಬಲ್ಲಿ ನಾಗನ ಸಾನಿಧ್ಯ ಇದ್ದು, ನಾಗನ ಬಗ್ಗೆ ಕಂಡು ಬರಲಿಲ್ಲ. ದೇವಸ್ಥಾನದಲ್ಲಿ 2 ವರ್ಷಗಳ ಹಿಂದೆ ಪ್ರಶ್ನೆ ಚಿಂತನೆಯಲ್ಲಿ ಕಂಡು ಬಂದಂತೆ ನಾಗತಂಬಿಲ ನೆರವೇರಿಸಲಾಯಿತು. ಆ ಜಾಗ ಸರಕಾರ ಎಂದು ತಿಳಿದು ಬಂದ ಕೂಡಲೇ ಜಿಲ್ಲಾಧಿಕಾರಿಗಳಿಗೆ ಜಾಗವನ್ನು ದೇವಸ್ಥಾನಕ್ಕೆ ಮಾಡಿಕೊಡಬೇಕೆಂದು ಬರೆದುಕೊಳ್ಳಲಾಯಿತು. ಅದರಂತೆ 5ಎಕ್ರೆ ಜಾಗವನ್ನು ಜಿಲ್ಲಾಧಿಕಾರಿಯವರು ಧಾರ್ಮಿಕ ದತ್ತಿ ಇಲಾಖೆಗೆ ಮಂಜೂರುಗೊಳಿಸಿ ದೇವಸ್ಥಾನಕ್ಕೆ ಹಸ್ತಾಂತರಿಸಲಾಯಿತು.

ದೇವಸ್ಥಾನದ ವತಿಯಿಂದ 12 ದಿನಗಳ ಹಿಂದೆ ಅನುಜ್ಞ ಕಲಶ ನೆರವೇರಿಸಿ ಡಿ.2ರಂದು ಜೀರ್ಣೋದ್ದಾರ ಕೆಲಸ ಪ್ರಾರಂಭಿಸಲಾಯಿತು. ಈ ಸಂಧರ್ಭ ತಂಬೂರಿ ನಾಗ, ನಾಗ, ಕಾಡ್ಯಾ ನಾಗ ಎನ್ನುವ ನಾಲ್ಕು ನಾಗನ ಕಲ್ಲುಗಳು ಹಾಗೂ ನಾಗನ ಉಬ್ಬು ಚಿತ್ರಗಳನ್ನು ಹೊಂದಿದ ಗಟ್ಟಿಮುಟ್ಟಾದ 2ಮಣ್ಣಿನ ಮಡಕೆ, 1ತಿಬಿಲೆ ದೊರೆತಿದೆ. ಜಗನ್ನಿವಾಸ ರಾವ್ ರವರು ಇದು ಸುಮಾರು 500ವರ್ಷಗಳ ಹಿಂದಿನ ವಸ್ತುಗಳು ಹಾಗೂ ಇದು ಬಹಳ ಅಪರೂಪ ಎಂದು ವಿವರಿಸಿದ್ದಾರೆ.

Related posts

ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘದ ವಾರ್ಷಿಕ ಮಹಾಸಭೆ, ಹಿರಿಯ ನಾಗರಿಕರಿಗೆ ಸನ್ಮಾನ

Suddi Udaya

ಕುಂಟಿನಿಯ ಕಾಂಗ್ರೆಸ್ ಬೂತ್ ಸಮಿತಿಯ ಮನವಿಗೆ ಸ್ಪಂದನೆ: ಹಳೆಪೇಟೆಯಿಂದ ಕುತ್ರೋಟ್ಟು ರಸ್ತೆ ದುರಸ್ತಿ ಆರಂಭ

Suddi Udaya

ಕೊಯ್ಯೂರು ಸ.ಉ.ಹಿ.ಪ್ರಾ. ಶಾಲೆಯಲ್ಲಿ ಸ್ಮಾರ್ಟ್ ಟಿ. ವಿ. ಉದ್ಘಾಟನೆ ಮತ್ತು ಪೋಷಕರ ಮಹಾಸಭೆ

Suddi Udaya

ವಾಣಿ ಕಾಲೇಜು: ರೋವರ್‍ಸ್-ರೇಂಜರ್‍ಸ್ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ಪುರಸ್ಕಾರ

Suddi Udaya

ಕಡಿರುದ್ಯಾವರ : ಶಿರಿಬೈಲು ಪರಿಸರದಲ್ಲಿ ತೋಟಕ್ಕೆ ನುಗ್ಗಿದ್ದ ಕಾಡಾನೆ : ಅಪಾರ ಕೃಷಿ ಹಾನಿ

Suddi Udaya

ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ಉದ್ಯಮಿ ವಾಸುದೇವ ಗೌಡ ರಿಗೆ ಸನ್ಮಾನ

Suddi Udaya
error: Content is protected !!