30.9 C
ಪುತ್ತೂರು, ಬೆಳ್ತಂಗಡಿ
April 5, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೇರುಕಟ್ಟೆ : ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ ಹಾಗೂ ಜಾನುವಾರು ಆರೋಗ್ಯ ಮಾಹಿತಿ ಶಿಬಿರ

ಗೇರುಕಟ್ಟೆ : ಡಿ.2 ರಂದು ಗೇರುಕಟ್ಟೆ ಹಾಲು ಉತ್ದಾದಕರ ಸಹಕಾರ ಸಂಘ ಹಾಗೂಕೃಷಿ ಇಲಾಖೆ ಮತ್ತು ಜಲಾನಯನ ಇಲಾಖೆ ಬೆಳ್ತಂಗಡಿ ಇದರ ಜಂಟಿ ಆಶ್ರಯದಲ್ಲಿ ಹಾಲು ಉ.ಸ. ಸಂಘದ ವತಿಯಿಂದ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ ಹಾಗೂ ಜಾನುವಾರುಗಳ ಆರೋಗ್ಯ ಮಾಹಿತಿ ಶಿಬಿರ ಕುಳಾಯಿ “ಶುಭೋಧಯ” ನಿವಾಸದಲ್ಲಿ ಜರುಗಿತು.

ಗೇರುಕಟ್ಟೆ ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಜನಾರ್ಧನ ಗೌಡ ಕೆ. ವಹಿಸಿದರು. ಬೆಳ್ತಂಗಡಿ ಪಶು ವೈದ್ಯಅಧಿಕಾರಿ ಮಂಜು ನಾಯ್ಕ ಜಾನುವಾರು ಆರೋಗ್ಯ ಹಾಗೂ ಹೆಚ್ಚು ಹಾಲು ಉತ್ಪಾದನೆ ಮಾಡುವ ಬಗ್ಗೆ ಮಾಹಿತಿ ನೀಡಿದರು. ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ ಉತ್ಪಾದನಾ ಪದ್ಧತಿಯ ವತಿಯಿಂದ ಬೆಳ್ತಂಗಡಿ ಸಹಾಯಕ ನಿರ್ದೇಶಕ ರಂಜಿತ್ ಕುಮಾರ್ ಕೃಷಿ ಘಟಕದಡಿ ಜಾನುವಾರು ಆರೋಗ್ಯ ವೃದ್ಧಿಗೆ 1ಸಾವಿರ ರೂ ಮೌಲ್ಯದ ಜೌಷದ ಕಿಟ್ ರೈತರಿಗೆ ವಿತರಣೆ ಮಾಡಿದರು. ಈ ಸಂದರ್ಭದಲ್ಲಿ ಕಳಿಯ ಸಿ.ಎ.ಬ್ಯಾಂಕ್ ಅಧ್ಯಕ್ಷ ವಸಂತ ಮಜಲು,ನಿರ್ದೇಶಕ ಶೇಖರ ನಾಯ್ಕ,ಕಳಿಯ ಗ್ರಾಮದ ಪಂಚಾಯತು ಸದಸ್ಯ ಹರೀಶ್ ಬಿ, ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಳಿಯ ಗ್ರಾಮ ಪಂಚಾಯತ್ ನಿಕಟಪೂರ್ವ ಅಧ್ಯಕ್ಷೆ ,ಹಾಲಿ ಸದಸ್ಯೆ ಸುಭಾಷಿಣಿ ಜನಾರ್ದನ ಗೌಡ, ಜಲಾನಯನ ಸಿಬ್ಬಂದಿಗಳು, ಗೇರುಕಟ್ಟೆ ಹಾಲು ಉತ್ಪಾದಕರ ಸಂಘದ ಉಪಾಧ್ಯಕ್ಷರು, ನಿರ್ದೇಶಕರು, ಮುಖ್ಯ ಕಾರ್ಯನಿರ್ವಾಹಣಧಿಕಾರಿ,ಸಿಬ್ಬಂದಿಗಳು,ಸಂಘದ ಸದಸ್ಯರು ಭಾಗವಹಿಸಿದರು.

Related posts

ಪುದುವೆಟ್ಟು ಮಿಯ್ಯಾರು ಶ್ರೀ ವನದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಪೂಜೆ

Suddi Udaya

ಧರ್ಮಸ್ಥಳ: ಉಚಿತ ಸಾಮೂಹಿಕ ವಿವಾಹದ ನೋಂದಣಿ ಕಛೇರಿ ಉದ್ಘಾಟನೆ

Suddi Udaya

ಕಲ್ಲೇರಿ: ಕಾರು ಮತ್ತು ಸ್ಕೂಟಿಯ ನಡುವೆ ಭೀಕರ ರಸ್ತೆ ಅಪಘಾತ: ಓರ್ವ ಮೃತ್ಯು

Suddi Udaya

ಕುವೆಟ್ಟು ಸ.ಉ. ಹಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಉಚಿತ ವೈದ್ಯಕೀಯ ದಂತ ಚಿಕಿತ್ಸಾ ಶಿಬಿರ

Suddi Udaya

ಎಸ್ ಡಿ ಎಮ್ ವಸತಿ ಪಿ ಯು ಕಾಲೇಜಿನ ವಿದ್ಯಾರ್ಥಿಗಳಿಂದ ಡ್ರಾಗನ್ ತೋಟಕ್ಕೆ ಶಿಕ್ಷಣ ಪ್ರವಾಸ

Suddi Udaya

ಉಜಿರೆ: ಮಂಗಳೂರು ವಿ.ವಿ. ಅಂತರ ಕಾಲೇಜು ವಾಲಿಬಾಲ್ ಟೂರ್ನಿ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ