23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೇರುಕಟ್ಟೆ : ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ ಹಾಗೂ ಜಾನುವಾರು ಆರೋಗ್ಯ ಮಾಹಿತಿ ಶಿಬಿರ

ಗೇರುಕಟ್ಟೆ : ಡಿ.2 ರಂದು ಗೇರುಕಟ್ಟೆ ಹಾಲು ಉತ್ದಾದಕರ ಸಹಕಾರ ಸಂಘ ಹಾಗೂಕೃಷಿ ಇಲಾಖೆ ಮತ್ತು ಜಲಾನಯನ ಇಲಾಖೆ ಬೆಳ್ತಂಗಡಿ ಇದರ ಜಂಟಿ ಆಶ್ರಯದಲ್ಲಿ ಹಾಲು ಉ.ಸ. ಸಂಘದ ವತಿಯಿಂದ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ ಹಾಗೂ ಜಾನುವಾರುಗಳ ಆರೋಗ್ಯ ಮಾಹಿತಿ ಶಿಬಿರ ಕುಳಾಯಿ “ಶುಭೋಧಯ” ನಿವಾಸದಲ್ಲಿ ಜರುಗಿತು.

ಗೇರುಕಟ್ಟೆ ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಜನಾರ್ಧನ ಗೌಡ ಕೆ. ವಹಿಸಿದರು. ಬೆಳ್ತಂಗಡಿ ಪಶು ವೈದ್ಯಅಧಿಕಾರಿ ಮಂಜು ನಾಯ್ಕ ಜಾನುವಾರು ಆರೋಗ್ಯ ಹಾಗೂ ಹೆಚ್ಚು ಹಾಲು ಉತ್ಪಾದನೆ ಮಾಡುವ ಬಗ್ಗೆ ಮಾಹಿತಿ ನೀಡಿದರು. ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ ಉತ್ಪಾದನಾ ಪದ್ಧತಿಯ ವತಿಯಿಂದ ಬೆಳ್ತಂಗಡಿ ಸಹಾಯಕ ನಿರ್ದೇಶಕ ರಂಜಿತ್ ಕುಮಾರ್ ಕೃಷಿ ಘಟಕದಡಿ ಜಾನುವಾರು ಆರೋಗ್ಯ ವೃದ್ಧಿಗೆ 1ಸಾವಿರ ರೂ ಮೌಲ್ಯದ ಜೌಷದ ಕಿಟ್ ರೈತರಿಗೆ ವಿತರಣೆ ಮಾಡಿದರು. ಈ ಸಂದರ್ಭದಲ್ಲಿ ಕಳಿಯ ಸಿ.ಎ.ಬ್ಯಾಂಕ್ ಅಧ್ಯಕ್ಷ ವಸಂತ ಮಜಲು,ನಿರ್ದೇಶಕ ಶೇಖರ ನಾಯ್ಕ,ಕಳಿಯ ಗ್ರಾಮದ ಪಂಚಾಯತು ಸದಸ್ಯ ಹರೀಶ್ ಬಿ, ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಳಿಯ ಗ್ರಾಮ ಪಂಚಾಯತ್ ನಿಕಟಪೂರ್ವ ಅಧ್ಯಕ್ಷೆ ,ಹಾಲಿ ಸದಸ್ಯೆ ಸುಭಾಷಿಣಿ ಜನಾರ್ದನ ಗೌಡ, ಜಲಾನಯನ ಸಿಬ್ಬಂದಿಗಳು, ಗೇರುಕಟ್ಟೆ ಹಾಲು ಉತ್ಪಾದಕರ ಸಂಘದ ಉಪಾಧ್ಯಕ್ಷರು, ನಿರ್ದೇಶಕರು, ಮುಖ್ಯ ಕಾರ್ಯನಿರ್ವಾಹಣಧಿಕಾರಿ,ಸಿಬ್ಬಂದಿಗಳು,ಸಂಘದ ಸದಸ್ಯರು ಭಾಗವಹಿಸಿದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಪೆರ್ಲ-ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಸಿದ್ಧಿಶ್ರೀ ಸಭಾಭವನಕ್ಕೆ ಸಹಾಯಧನ ಚೆಕ್ ಹಸ್ತಾಂತರ

Suddi Udaya

ಜ. 19: ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವಸ್ಥಾನ ಜಾತ್ರೋತ್ಸವದ ಪ್ರಯುಕ್ತ ಕುಲದೈವೋ ಬ್ರಹ್ಮ ಯಕ್ಷಗಾನ ಬಯಲಾಟ

Suddi Udaya

ಕೊಯ್ಯೂರು ಸ.ಪ.ಪೂ. ಕಾಲೇಜಿನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಕೊಯ್ಯೂರು ಸ.ಪ.ಪೂ. ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ

Suddi Udaya

ಬೆಳ್ತಂಗಡಿ: ಮೇ 30 ರಂದು 11ಕೆವಿ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya

ಬೆಳಾಲು ಪ್ಯಾಕ್ಸ್: ಆರ್ಥಿಕ ಅವ್ಯವಹಾರ ಪ್ರಕರಣಎರಡನೇ ಆರೋಪಿ ಪ್ರಶಾಂತ್ ಬಂಧನ

Suddi Udaya
error: Content is protected !!