38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಕಡಿರ ಬನದಲ್ಲಿ ನಾಲ್ಕು ನಾಗನ ಕಲ್ಲುಗಳು ಹಾಗೂ ಎರಡು ಮಣ್ಣಿನ ಮಡಕೆ, ಒಂದು ತಿಬಿಲೆ ಪತ್ತೆ

ಕೊಕ್ಕಡ : ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ನಡೆದ ಅಷ್ಟಮಂಗಳ ಪ್ರಶ್ನೆಯಲ್ಲಿ ದೇವಸ್ಥಾನದ ಹತ್ತಿರ ಕಡಿರ ಬನ ಎಂಬಲ್ಲಿ ನಾಗನ ಸಾನಿಧ್ಯ ಇದ್ದು, ನಾಗನ ಬಗ್ಗೆ ಕಂಡು ಬರಲಿಲ್ಲ. ದೇವಸ್ಥಾನದಲ್ಲಿ 2 ವರ್ಷಗಳ ಹಿಂದೆ ಪ್ರಶ್ನೆ ಚಿಂತನೆಯಲ್ಲಿ ಕಂಡು ಬಂದಂತೆ ನಾಗತಂಬಿಲ ನೆರವೇರಿಸಲಾಯಿತು. ಆ ಜಾಗ ಸರಕಾರ ಎಂದು ತಿಳಿದು ಬಂದ ಕೂಡಲೇ ಜಿಲ್ಲಾಧಿಕಾರಿಗಳಿಗೆ ಜಾಗವನ್ನು ದೇವಸ್ಥಾನಕ್ಕೆ ಮಾಡಿಕೊಡಬೇಕೆಂದು ಬರೆದುಕೊಳ್ಳಲಾಯಿತು. ಅದರಂತೆ 5ಎಕ್ರೆ ಜಾಗವನ್ನು ಜಿಲ್ಲಾಧಿಕಾರಿಯವರು ಧಾರ್ಮಿಕ ದತ್ತಿ ಇಲಾಖೆಗೆ ಮಂಜೂರುಗೊಳಿಸಿ ದೇವಸ್ಥಾನಕ್ಕೆ ಹಸ್ತಾಂತರಿಸಲಾಯಿತು.

ದೇವಸ್ಥಾನದ ವತಿಯಿಂದ 12 ದಿನಗಳ ಹಿಂದೆ ಅನುಜ್ಞ ಕಲಶ ನೆರವೇರಿಸಿ ಡಿ.2ರಂದು ಜೀರ್ಣೋದ್ದಾರ ಕೆಲಸ ಪ್ರಾರಂಭಿಸಲಾಯಿತು. ಈ ಸಂಧರ್ಭ ತಂಬೂರಿ ನಾಗ, ನಾಗ, ಕಾಡ್ಯಾ ನಾಗ ಎನ್ನುವ ನಾಲ್ಕು ನಾಗನ ಕಲ್ಲುಗಳು ಹಾಗೂ ನಾಗನ ಉಬ್ಬು ಚಿತ್ರಗಳನ್ನು ಹೊಂದಿದ ಗಟ್ಟಿಮುಟ್ಟಾದ 2ಮಣ್ಣಿನ ಮಡಕೆ, 1ತಿಬಿಲೆ ದೊರೆತಿದೆ. ಜಗನ್ನಿವಾಸ ರಾವ್ ರವರು ಇದು ಸುಮಾರು 500ವರ್ಷಗಳ ಹಿಂದಿನ ವಸ್ತುಗಳು ಹಾಗೂ ಇದು ಬಹಳ ಅಪರೂಪ ಎಂದು ವಿವರಿಸಿದ್ದಾರೆ.

Related posts

ಅರಸಿನಮಕ್ಕಿ ಬೂಡುಮುಗೇರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ

Suddi Udaya

ಮಾ.8: ಬಳಂಜ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಮಿತಿ ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ಯಿಂದ ಶ್ರೀ ಸತ್ಯನಾರಾಯಣ ಪೂಜೆ, ಶ್ರೀ ಗುರು ಪೂಜೆ, ಶ್ರೀ ಸರ್ವೇಶ್ವರೀ ದೇವಿಯ ಪೂಜೆ ಹಾಗೂ ಧಾರ್ಮಿಕ ಸಭೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನ: ಚಪ್ಪರ ಹಾಗೂ ಭಜನಾ ಕಾರ್ಯಕ್ರಮ ಉದ್ಘಾಟನೆ

Suddi Udaya

ಮೇಲಂತಬೆಟ್ಟು ಗ್ರಾಮ ಪಂಚಾಯತ್ ಗ್ರಂಥಾಲಯದಲ್ಲಿ ಗ್ರಂಥಪಾಲಕರ ದಿನಾಚರಣೆ

Suddi Udaya

ಧರ್ಮಸ್ಥಳದಲ್ಲಿ ನಾಪತ್ತೆಯಾಗಿದ್ದ ವೈದ್ಯಕೀಯ ವಿದ್ಯಾರ್ಥಿನಿ ಅನನ್ಯ ಭಟ್ ಪ್ರಕರಣ ಎಸ್ ಐಟಿಗೆ ಹಸ್ತಾಂತರ

Suddi Udaya

ನಾರಾವಿಯಲ್ಲಿ ಭತ್ತ ನಾಟಿ, ಯಂತ್ರಶ್ರೀ ಕಾರ್ಯಕ್ರಮ

Suddi Udaya
error: Content is protected !!