April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಕಡಿರ ಬನದಲ್ಲಿ ನಾಲ್ಕು ನಾಗನ ಕಲ್ಲುಗಳು ಹಾಗೂ ಎರಡು ಮಣ್ಣಿನ ಮಡಕೆ, ಒಂದು ತಿಬಿಲೆ ಪತ್ತೆ

ಕೊಕ್ಕಡ : ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ನಡೆದ ಅಷ್ಟಮಂಗಳ ಪ್ರಶ್ನೆಯಲ್ಲಿ ದೇವಸ್ಥಾನದ ಹತ್ತಿರ ಕಡಿರ ಬನ ಎಂಬಲ್ಲಿ ನಾಗನ ಸಾನಿಧ್ಯ ಇದ್ದು, ನಾಗನ ಬಗ್ಗೆ ಕಂಡು ಬರಲಿಲ್ಲ. ದೇವಸ್ಥಾನದಲ್ಲಿ 2 ವರ್ಷಗಳ ಹಿಂದೆ ಪ್ರಶ್ನೆ ಚಿಂತನೆಯಲ್ಲಿ ಕಂಡು ಬಂದಂತೆ ನಾಗತಂಬಿಲ ನೆರವೇರಿಸಲಾಯಿತು. ಆ ಜಾಗ ಸರಕಾರ ಎಂದು ತಿಳಿದು ಬಂದ ಕೂಡಲೇ ಜಿಲ್ಲಾಧಿಕಾರಿಗಳಿಗೆ ಜಾಗವನ್ನು ದೇವಸ್ಥಾನಕ್ಕೆ ಮಾಡಿಕೊಡಬೇಕೆಂದು ಬರೆದುಕೊಳ್ಳಲಾಯಿತು. ಅದರಂತೆ 5ಎಕ್ರೆ ಜಾಗವನ್ನು ಜಿಲ್ಲಾಧಿಕಾರಿಯವರು ಧಾರ್ಮಿಕ ದತ್ತಿ ಇಲಾಖೆಗೆ ಮಂಜೂರುಗೊಳಿಸಿ ದೇವಸ್ಥಾನಕ್ಕೆ ಹಸ್ತಾಂತರಿಸಲಾಯಿತು.

ದೇವಸ್ಥಾನದ ವತಿಯಿಂದ 12 ದಿನಗಳ ಹಿಂದೆ ಅನುಜ್ಞ ಕಲಶ ನೆರವೇರಿಸಿ ಡಿ.2ರಂದು ಜೀರ್ಣೋದ್ದಾರ ಕೆಲಸ ಪ್ರಾರಂಭಿಸಲಾಯಿತು. ಈ ಸಂಧರ್ಭ ತಂಬೂರಿ ನಾಗ, ನಾಗ, ಕಾಡ್ಯಾ ನಾಗ ಎನ್ನುವ ನಾಲ್ಕು ನಾಗನ ಕಲ್ಲುಗಳು ಹಾಗೂ ನಾಗನ ಉಬ್ಬು ಚಿತ್ರಗಳನ್ನು ಹೊಂದಿದ ಗಟ್ಟಿಮುಟ್ಟಾದ 2ಮಣ್ಣಿನ ಮಡಕೆ, 1ತಿಬಿಲೆ ದೊರೆತಿದೆ. ಜಗನ್ನಿವಾಸ ರಾವ್ ರವರು ಇದು ಸುಮಾರು 500ವರ್ಷಗಳ ಹಿಂದಿನ ವಸ್ತುಗಳು ಹಾಗೂ ಇದು ಬಹಳ ಅಪರೂಪ ಎಂದು ವಿವರಿಸಿದ್ದಾರೆ.

Related posts

ಕಲ್ಮಂಜ: ನೂತನವಾಗಿ ಸ್ಥಾಪನೆಯಾದ ದೇವರಗುಡ್ಡೆ ಹಾಲು ಉತ್ಪಾದಕರ ಸಹಕಾರ ಸಂಘ: ನೂತನ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ರಮೇಶ್ ಗೌಡ ಗಲ್ಲೋಡಿ ಅವಿರೋಧವಾಗಿ ಆಯ್ಕೆ

Suddi Udaya

ತೆಕ್ಕಾರು ಗ್ರಾ.ಪಂನಲ್ಲಿ ವಿಶೇಷ ಗ್ರಾಮ ಸಭೆ

Suddi Udaya

ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ನಾಮನಿರ್ದೇಶಿತ ಸದಸ್ಯರಿಂದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ, ಅಭಿನಂದನೆ

Suddi Udaya

ಬೆಳ್ತಂಗಡಿ: ವಾಣಿ ಪದವಿಪೂರ್ವ ಕಾಲೇಜಿನಲ್ಲಿ ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮ

Suddi Udaya

ಲಾಯಿಲ ಗುರಿಂಗಾನದಲ್ಲಿ ಗುಡ್ಡದಲ್ಲಿ ಭಾರಿ ಬೆಂಕಿ ಅನಾಹುತ:

Suddi Udaya

ಬೆಳಾಲು ಶ್ರೀ ಅನಂತೇಶ್ವರ ಭಜನಾ ಮಂಡಳಿ ನೇತೃತ್ವದಲ್ಲಿ ಮಕ್ಕಳ ಭಜನಾ ತರಬೇತಿ ತಂಡ ಉದ್ಘಾಟನೆ

Suddi Udaya
error: Content is protected !!