25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಕಡಿರ ಬನದಲ್ಲಿ ನಾಲ್ಕು ನಾಗನ ಕಲ್ಲುಗಳು ಹಾಗೂ ಎರಡು ಮಣ್ಣಿನ ಮಡಕೆ, ಒಂದು ತಿಬಿಲೆ ಪತ್ತೆ

ಕೊಕ್ಕಡ : ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ನಡೆದ ಅಷ್ಟಮಂಗಳ ಪ್ರಶ್ನೆಯಲ್ಲಿ ದೇವಸ್ಥಾನದ ಹತ್ತಿರ ಕಡಿರ ಬನ ಎಂಬಲ್ಲಿ ನಾಗನ ಸಾನಿಧ್ಯ ಇದ್ದು, ನಾಗನ ಬಗ್ಗೆ ಕಂಡು ಬರಲಿಲ್ಲ. ದೇವಸ್ಥಾನದಲ್ಲಿ 2 ವರ್ಷಗಳ ಹಿಂದೆ ಪ್ರಶ್ನೆ ಚಿಂತನೆಯಲ್ಲಿ ಕಂಡು ಬಂದಂತೆ ನಾಗತಂಬಿಲ ನೆರವೇರಿಸಲಾಯಿತು. ಆ ಜಾಗ ಸರಕಾರ ಎಂದು ತಿಳಿದು ಬಂದ ಕೂಡಲೇ ಜಿಲ್ಲಾಧಿಕಾರಿಗಳಿಗೆ ಜಾಗವನ್ನು ದೇವಸ್ಥಾನಕ್ಕೆ ಮಾಡಿಕೊಡಬೇಕೆಂದು ಬರೆದುಕೊಳ್ಳಲಾಯಿತು. ಅದರಂತೆ 5ಎಕ್ರೆ ಜಾಗವನ್ನು ಜಿಲ್ಲಾಧಿಕಾರಿಯವರು ಧಾರ್ಮಿಕ ದತ್ತಿ ಇಲಾಖೆಗೆ ಮಂಜೂರುಗೊಳಿಸಿ ದೇವಸ್ಥಾನಕ್ಕೆ ಹಸ್ತಾಂತರಿಸಲಾಯಿತು.

ದೇವಸ್ಥಾನದ ವತಿಯಿಂದ 12 ದಿನಗಳ ಹಿಂದೆ ಅನುಜ್ಞ ಕಲಶ ನೆರವೇರಿಸಿ ಡಿ.2ರಂದು ಜೀರ್ಣೋದ್ದಾರ ಕೆಲಸ ಪ್ರಾರಂಭಿಸಲಾಯಿತು. ಈ ಸಂಧರ್ಭ ತಂಬೂರಿ ನಾಗ, ನಾಗ, ಕಾಡ್ಯಾ ನಾಗ ಎನ್ನುವ ನಾಲ್ಕು ನಾಗನ ಕಲ್ಲುಗಳು ಹಾಗೂ ನಾಗನ ಉಬ್ಬು ಚಿತ್ರಗಳನ್ನು ಹೊಂದಿದ ಗಟ್ಟಿಮುಟ್ಟಾದ 2ಮಣ್ಣಿನ ಮಡಕೆ, 1ತಿಬಿಲೆ ದೊರೆತಿದೆ. ಜಗನ್ನಿವಾಸ ರಾವ್ ರವರು ಇದು ಸುಮಾರು 500ವರ್ಷಗಳ ಹಿಂದಿನ ವಸ್ತುಗಳು ಹಾಗೂ ಇದು ಬಹಳ ಅಪರೂಪ ಎಂದು ವಿವರಿಸಿದ್ದಾರೆ.

Related posts

ಬೆಳ್ತಂಗಡಿ: ಕೃಷಿ ಅಧಿಕಾರಿ ಹಾಗೂ ಸಹಾಯಕ ಕೃಷಿ ನಿರ್ದೇಶಕರಾಗಿ ಸೇವೆ ಸಲ್ಲಿಸಿ ಸ್ವಯಂ ನಿವೃತ್ತಿ ಪಡೆದ ಶ್ರೀಮತಿ ಶೈಲಜಾ ಎ.ಎನ್. ರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ನೆರಿಯದಲ್ಲಿ ಹಿಂದೂ ರುದ್ರಭೂಮಿಗಾಗಿ ಗ್ರಾಮಸ್ಥರ ಪ್ರತಿಭಟನೆ: ಮೃತದೇಹವನ್ನು ಪಂಚಾಯತ್ ಎದುರಿನಲ್ಲಿಟ್ಟು ಪ್ರತಿಭಟನೆಗೆ ಸಿದ್ದತೆ: ಸ್ಥಳಕ್ಕೆ ತಹಶೀಲ್ದಾರರು ಬರಬೇಕು,ಇಂದೇ ಹಿಂದೂ ರುದ್ರಭೂಮಿಗೆ ಸ್ಥಳ ಮಂಜೂರುಗೊಳಿಸಬೇಕೆಂದು ಒತ್ತಾಯ

Suddi Udaya

ನೀಟ್ ಪರೀಕ್ಷೆ ಅಕ್ರಮ, ರಾಷ್ಟ್ರೀಯ ಯುವ ಕಾಂಗ್ರೆಸ್ ನಿಂದ ದೆಹಲಿಯಲ್ಲಿ ಸಂಸತ್ ಮುತ್ತಿಗೆ : ದೆಹಲಿ ಪ್ರತಿಭಟನೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

Suddi Udaya

ರೋಟರಿ ಕ್ಲಬ್ ನಿಂದ ಬೆಳ್ತಂಗಡಿ ತಾಲೂಕು ಆಸ್ಪತ್ರೆಗೆ ರೂ.42 ಲಕ್ಷ ವೆಚ್ಚದ 4 ಡಯಾಲಿಸಿಸ್ ಯಂತ್ರಗಳು: 7 ಸಾವಿರ ಲೀಟರ್ ಸಾಮರ್ಥ್ಯದ ಆರ್.ಒ ಪ್ಲಾಂಟ್ ಹಸ್ತಾಂತರ

Suddi Udaya

ಶ್ರೀ ಧ.ಮ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಮಡಂತ್ಯಾರು: ಪಾರೆಂಕಿ ನಿವಾಸಿ ರೋಬರ್ಟ್ ಡಿಸೋಜಾ ನಿಧನ

Suddi Udaya
error: Content is protected !!