23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಕಡಿರ ಬನದಲ್ಲಿ ನಾಲ್ಕು ನಾಗನ ಕಲ್ಲುಗಳು ಹಾಗೂ ಎರಡು ಮಣ್ಣಿನ ಮಡಕೆ, ಒಂದು ತಿಬಿಲೆ ಪತ್ತೆ

ಕೊಕ್ಕಡ : ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ನಡೆದ ಅಷ್ಟಮಂಗಳ ಪ್ರಶ್ನೆಯಲ್ಲಿ ದೇವಸ್ಥಾನದ ಹತ್ತಿರ ಕಡಿರ ಬನ ಎಂಬಲ್ಲಿ ನಾಗನ ಸಾನಿಧ್ಯ ಇದ್ದು, ನಾಗನ ಬಗ್ಗೆ ಕಂಡು ಬರಲಿಲ್ಲ. ದೇವಸ್ಥಾನದಲ್ಲಿ 2 ವರ್ಷಗಳ ಹಿಂದೆ ಪ್ರಶ್ನೆ ಚಿಂತನೆಯಲ್ಲಿ ಕಂಡು ಬಂದಂತೆ ನಾಗತಂಬಿಲ ನೆರವೇರಿಸಲಾಯಿತು. ಆ ಜಾಗ ಸರಕಾರ ಎಂದು ತಿಳಿದು ಬಂದ ಕೂಡಲೇ ಜಿಲ್ಲಾಧಿಕಾರಿಗಳಿಗೆ ಜಾಗವನ್ನು ದೇವಸ್ಥಾನಕ್ಕೆ ಮಾಡಿಕೊಡಬೇಕೆಂದು ಬರೆದುಕೊಳ್ಳಲಾಯಿತು. ಅದರಂತೆ 5ಎಕ್ರೆ ಜಾಗವನ್ನು ಜಿಲ್ಲಾಧಿಕಾರಿಯವರು ಧಾರ್ಮಿಕ ದತ್ತಿ ಇಲಾಖೆಗೆ ಮಂಜೂರುಗೊಳಿಸಿ ದೇವಸ್ಥಾನಕ್ಕೆ ಹಸ್ತಾಂತರಿಸಲಾಯಿತು.

ದೇವಸ್ಥಾನದ ವತಿಯಿಂದ 12 ದಿನಗಳ ಹಿಂದೆ ಅನುಜ್ಞ ಕಲಶ ನೆರವೇರಿಸಿ ಡಿ.2ರಂದು ಜೀರ್ಣೋದ್ದಾರ ಕೆಲಸ ಪ್ರಾರಂಭಿಸಲಾಯಿತು. ಈ ಸಂಧರ್ಭ ತಂಬೂರಿ ನಾಗ, ನಾಗ, ಕಾಡ್ಯಾ ನಾಗ ಎನ್ನುವ ನಾಲ್ಕು ನಾಗನ ಕಲ್ಲುಗಳು ಹಾಗೂ ನಾಗನ ಉಬ್ಬು ಚಿತ್ರಗಳನ್ನು ಹೊಂದಿದ ಗಟ್ಟಿಮುಟ್ಟಾದ 2ಮಣ್ಣಿನ ಮಡಕೆ, 1ತಿಬಿಲೆ ದೊರೆತಿದೆ. ಜಗನ್ನಿವಾಸ ರಾವ್ ರವರು ಇದು ಸುಮಾರು 500ವರ್ಷಗಳ ಹಿಂದಿನ ವಸ್ತುಗಳು ಹಾಗೂ ಇದು ಬಹಳ ಅಪರೂಪ ಎಂದು ವಿವರಿಸಿದ್ದಾರೆ.

Related posts

ಗುರಿಪಳ್ಳ ಬಿಜೆಪಿಯ 30 ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ

Suddi Udaya

ಕೆಸರು ಗದ್ದೆಯಾದ ನ್ಯಾಯತರ್ಪು ಹಾಕೋಟೆ ರಸ್ತೆ

Suddi Udaya

ಕೆದ್ದುವಿನಲ್ಲಿ ಅನಾಥವಾಗಿದ್ದ ಬಾಡಜ್ಜನಿಗೆ ಆಶ್ರಯ ಕಲ್ಪಿಸಿದ ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜ ಸೇವಾ ಸಂಘಟನೆ

Suddi Udaya

ಬೆಳ್ತಂಗಡಿ: ಎಂ.ಆರ್ ಡ್ರೆಸ್ಸಸ್ ನಲ್ಲಿ ಕ್ಲಿಯರೆನ್ಸ್ ಸೇಲ್: ಪ್ರತಿ ಖರೀದಿಯ ಮೇಲೆ ಶೇ. 30 ರಷ್ಟು ರಿಯಾಯಿತಿ

Suddi Udaya

ಮಡಂತ್ಯಾರು: ಆನೆಗುಂದಿ ಗುರುಸೇವಾ ಪರಿಷತ್ ಇದರ ಆಶ್ರಯದಲ್ಲಿ ಚಿಂತನ – ಮಂಥನ ಸಮಾವೇಶದ ಉದ್ಘಾಟನೆ

Suddi Udaya

ಅಳದಂಗಡಿ: ತಾಲೂಕು ಮಟ್ಟದ ಪ್ರಾಥಮಿಕ ಶಾಲೆಗಳ ಬಾಲಕ -ಬಾಲಕಿಯರ ಖೋ -ಖೋ ಪಂದ್ಯಾಟ ಉದ್ಘಾಟನೆ

Suddi Udaya
error: Content is protected !!