September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಕಡಿರ ಬನದಲ್ಲಿ ನಾಲ್ಕು ನಾಗನ ಕಲ್ಲುಗಳು ಹಾಗೂ ಎರಡು ಮಣ್ಣಿನ ಮಡಕೆ, ಒಂದು ತಿಬಿಲೆ ಪತ್ತೆ

ಕೊಕ್ಕಡ : ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ನಡೆದ ಅಷ್ಟಮಂಗಳ ಪ್ರಶ್ನೆಯಲ್ಲಿ ದೇವಸ್ಥಾನದ ಹತ್ತಿರ ಕಡಿರ ಬನ ಎಂಬಲ್ಲಿ ನಾಗನ ಸಾನಿಧ್ಯ ಇದ್ದು, ನಾಗನ ಬಗ್ಗೆ ಕಂಡು ಬರಲಿಲ್ಲ. ದೇವಸ್ಥಾನದಲ್ಲಿ 2 ವರ್ಷಗಳ ಹಿಂದೆ ಪ್ರಶ್ನೆ ಚಿಂತನೆಯಲ್ಲಿ ಕಂಡು ಬಂದಂತೆ ನಾಗತಂಬಿಲ ನೆರವೇರಿಸಲಾಯಿತು. ಆ ಜಾಗ ಸರಕಾರ ಎಂದು ತಿಳಿದು ಬಂದ ಕೂಡಲೇ ಜಿಲ್ಲಾಧಿಕಾರಿಗಳಿಗೆ ಜಾಗವನ್ನು ದೇವಸ್ಥಾನಕ್ಕೆ ಮಾಡಿಕೊಡಬೇಕೆಂದು ಬರೆದುಕೊಳ್ಳಲಾಯಿತು. ಅದರಂತೆ 5ಎಕ್ರೆ ಜಾಗವನ್ನು ಜಿಲ್ಲಾಧಿಕಾರಿಯವರು ಧಾರ್ಮಿಕ ದತ್ತಿ ಇಲಾಖೆಗೆ ಮಂಜೂರುಗೊಳಿಸಿ ದೇವಸ್ಥಾನಕ್ಕೆ ಹಸ್ತಾಂತರಿಸಲಾಯಿತು.

ದೇವಸ್ಥಾನದ ವತಿಯಿಂದ 12 ದಿನಗಳ ಹಿಂದೆ ಅನುಜ್ಞ ಕಲಶ ನೆರವೇರಿಸಿ ಡಿ.2ರಂದು ಜೀರ್ಣೋದ್ದಾರ ಕೆಲಸ ಪ್ರಾರಂಭಿಸಲಾಯಿತು. ಈ ಸಂಧರ್ಭ ತಂಬೂರಿ ನಾಗ, ನಾಗ, ಕಾಡ್ಯಾ ನಾಗ ಎನ್ನುವ ನಾಲ್ಕು ನಾಗನ ಕಲ್ಲುಗಳು ಹಾಗೂ ನಾಗನ ಉಬ್ಬು ಚಿತ್ರಗಳನ್ನು ಹೊಂದಿದ ಗಟ್ಟಿಮುಟ್ಟಾದ 2ಮಣ್ಣಿನ ಮಡಕೆ, 1ತಿಬಿಲೆ ದೊರೆತಿದೆ. ಜಗನ್ನಿವಾಸ ರಾವ್ ರವರು ಇದು ಸುಮಾರು 500ವರ್ಷಗಳ ಹಿಂದಿನ ವಸ್ತುಗಳು ಹಾಗೂ ಇದು ಬಹಳ ಅಪರೂಪ ಎಂದು ವಿವರಿಸಿದ್ದಾರೆ.

Related posts

ಮೂಡುಕೋಡಿ: ನಡ್ತಿಕಲ್ಲು ಶ್ರೀ ರಾಮ ಮಹಿಳಾ ಸಮಿತಿಯಿಂದ ವರಮಹಾಲಕ್ಷ್ಮೀ ಪೂಜೆ

Suddi Udaya

ಕಣಿಯೂರು ಶ್ರೀ ಚಾಮುಂಡೇಶ್ವರಿ ದೇವಸ್ಥಾನದಲ್ಲಿ 101 ಎಳನೀರು ಅಭಿಷೇಕ, ನವಕ ಕಲಶ ಅಭಿಷೇಕದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ 35 ನೇ ವರ್ಷದ ಮೊಸರು ಕುಡಿಕೆ ಉತ್ಸವ ; ಸರ್ವಧರ್ಮ ಸಮನ್ವಯ ಸಭೆ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದಿಂದ ಇತ್ತೀಚೆಗೆ ನಿಧನರಾದ ಗಣೇಶ್ ಕಾಯರ್ತಡ್ಕ ರವರಿಗೆ ನುಡಿನಮನ

Suddi Udaya

ಮರೋಡಿ: ಯುವಕನ ಧ್ವನಿ ಪೆಟ್ಟಿಗೆಯ ಶಸ್ತ್ರಚಿಕಿತ್ಸೆಗೆ ಯುವವಾಹಿನಿ ವೇಣೂರು ಘಟಕ ಹಾಗೂ ಯುವವಾಹಿನಿ ಮರೋಡಿ ಸಂಚಲನಾ ಸಮಿತಿ ಸದಸ್ಯರಿಂದ ಆರ್ಥಿಕ ನೆರವು

Suddi Udaya

ಯಕ್ಷಗಾನ ಕಲಾವಿದನ ತಾಯಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಪ್ರಕರಣ: ಮಹೇಶ್‌ ಶೆಟ್ಟಿ ತಿಮರೋಡಿಗೆ ಷರತ್ತು ಬದ್ಧ ನಿರೀಕ್ಷಣಾ ಜಾಮೀನು

Suddi Udaya
error: Content is protected !!