23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ ಶ್ರೀ ಸನ್ಯಾಸಿಕಟ್ಟೆ ಪರಶುರಾಮ ದೇವಸ್ಥಾನದ ವಾರ್ಷಿಕ ದೀಪೋತ್ಸವ ಸಂಪನ್ನ

ಬೆಳ್ತಂಗಡಿ: ಮುಂಡಾಜೆಯ ಶ್ರೀ ಸನ್ಯಾಸಿಕಟ್ಟೆ ಪರಶುರಾಮ ದೇವಸ್ಥಾನದ ವಾರ್ಷಿಕ ದೀಪೋತ್ಸವ ಕಾರ್ಯಕ್ರಮ ಡಿ.1 ರಂದು ಜರಗಿತು.

ವೇದಮೂರ್ತಿ ರವಿಕಿರಣ ಮರಾಠೆ ಅವರ ನೇತೃತ್ವದಲ್ಲಿ ಬೆಳಿಗ್ಗೆ ಪರಶುರಾಮ, ಸಿದ್ಧಿ ವಿನಾಯಕ, ಅನ್ನಪೂರ್ಣೇಶ್ವರಿ ಸನ್ನಿಧಿಯಲ್ಲಿ ವಿಶೇಷ ಸೇವೆಗಳು ಜರಗಿದವು. ದೇವರಿಗೆ ಅಡಕೆ, ತೆಂಗು ಹಾಗೂ ಇತರ ಕೃಷಿ ಉತ್ಪನ್ನಗಳ ರಾಶಿ ಪೂಜೆ,ಆಹ್ವಾನಿತ ಭಜನಾ ತಂಡಗಳಿಂದ ಕುಣಿತ ಭಜನೆ ಸಾರ್ವಜನಿಕ ಅನ್ನ ಸಂತರ್ಪಣೆ ನಡೆಯಿತು.


ಸಂಜೆ ಸ್ಯಾಕ್ಸೋಫೋನ್ ವಾದನ, ನೃತ್ಯ ಕಾರ್ಯಕ್ರಮ, ದೇವರ ಉತ್ಸವ, ಅಷ್ಟಸೇವೆ, ಮಹಾಪೂಜೆ ನಡೆಯಿತು.
ರಾಕೇಶ ಫಡಕೆ, ಋತುಪರ್ಣ ಡೋಂಗ್ರೆ, ಪ್ರೇಮಾನಂದ ಫಡಕೆ, ಶಶಾಂಕ ಮರಾಠೆ, ಶ್ರೀಕಾಂತ ಗೋರೆ, ಸುಧೀರ ಪರಾಂಜಪೆ, ರಾಘವೇಂದ್ರ ಪಟವರ್ಧನ್ ಮತ್ತಿತರರು ವೈದಿಕ ಕಾರ್ಯಕ್ರಮಗಳಲ್ಲಿ ಸಹಕಾರ ನೀಡಿದರು.


ಆಡಳಿತ ಮೊಕ್ತೇಸರ ವೆಂಕಟೇಶ್ವರ ಭಟ್, ಗೌರವಾಧ್ಯಕ್ಷ ಜಗದೀಶ್ ಆರ್‌.ಫಡಕೆ,ಅಧ್ಯಕ್ಷ ವಾಸುದೇವ ಗೋಖಲೆ, ಉಪಾಧ್ಯಕ್ಷ ವಿಶ್ವನಾಥ ಶೆಟ್ಟಿ,ಕಾರ್ಯದರ್ಶಿ ಬಾಬು ಪೂಜಾರಿ, ಖಜಾಂಜಿ ಪ್ರಹ್ಲಾದ್ ಫಡಕೆ, ಜಾತ್ರೋತ್ಸವ ಸಮಿತಿಯ ಅಧ್ಯಕ್ಷ ಅಗರಿ ರಾಮಣ್ಣ ಶೆಟ್ಟಿ, ಕಾರ್ಯದರ್ಶಿ ಜಯಚಂದ್ರ ಎಂ.ಪಿ.,ಖಜಾಂಜಿ ರಾಮಚಂದ್ರ ಭಟ್ ಸದಸ್ಯರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

Related posts

ಎಕ್ಸೆಲ್ ಗುರುವಾಯನಕೆರೆಗೆ 15 ಲಕ್ಷ ಲೀಟರ್ ಸಾಮರ್ಥ್ಯದ ಎಸ್ ಟಿ ಪಿ ರಚನೆಗೆ ಭೂಮಿ ಪೂಜೆ

Suddi Udaya

ಕಳೆಂಜ: ಮಾಪಳದಡ್ಡ ಚಂದ್ರಾವತಿರಿಗೆ ಶ್ರೀ ಕ್ಷೇ. ಧ.ಗ್ರಾ. ಯೋಜನೆಯಿಂದ ಮಾಶಾಸನ ಮಂಜೂರು ಪತ್ರ ವಿತರಣೆ

Suddi Udaya

ಮಚ್ಚಿನ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಸಹಾಯ ಧನ ಹಸ್ತಾಂತರ

Suddi Udaya

ಡಾ|| ಡಿ. ವೀರೇಂದ್ರ ಹೆಗ್ಗಡೆಯವರ ಕಾರ್ಯವೈಖರಿಗೆ ಪ್ರಧಾನಿಯವರಿಂದ ಮೆಚ್ಚುಗೆ

Suddi Udaya

ಬೆಳ್ತಂಗಡಿ ಮೂಲದ ಕನ್ನಡದ ಹಿರಿಯ ನಟಿ, ಲೀಲಾವತಿ ನಿಧನ

Suddi Udaya

ಶ್ರೀ ರಾಮ ಪ್ರಾಣ ಪ್ರತಿಷ್ಠಾಪನೆ ಪ್ರಯುಕ್ತ ಅನನ್ಯ ಫೀಡ್ಸ್ ಹುಬ್ಬಳ್ಳಿ ಹಾಗೂ ಫಾರ್ಮ್ ಫುಡ್ ಪಾಂಡವರಕಲ್ಲು ಇವರಿಂದ ಗುಂಡೂರಿ ಕಾವೇರಮ್ಮ ಅಮೃತಧಾರಾ ಗೋಶಾಲೆಗೆ ನವಧ್ಯಾನ ಹಿಂಡಿ, ನಿಸರ್ಗ ಮೇವು ಸಮರ್ಪಣೆ

Suddi Udaya
error: Content is protected !!