25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ ಶ್ರೀ ಸನ್ಯಾಸಿಕಟ್ಟೆ ಪರಶುರಾಮ ದೇವಸ್ಥಾನದ ವಾರ್ಷಿಕ ದೀಪೋತ್ಸವ ಸಂಪನ್ನ

ಬೆಳ್ತಂಗಡಿ: ಮುಂಡಾಜೆಯ ಶ್ರೀ ಸನ್ಯಾಸಿಕಟ್ಟೆ ಪರಶುರಾಮ ದೇವಸ್ಥಾನದ ವಾರ್ಷಿಕ ದೀಪೋತ್ಸವ ಕಾರ್ಯಕ್ರಮ ಡಿ.1 ರಂದು ಜರಗಿತು.

ವೇದಮೂರ್ತಿ ರವಿಕಿರಣ ಮರಾಠೆ ಅವರ ನೇತೃತ್ವದಲ್ಲಿ ಬೆಳಿಗ್ಗೆ ಪರಶುರಾಮ, ಸಿದ್ಧಿ ವಿನಾಯಕ, ಅನ್ನಪೂರ್ಣೇಶ್ವರಿ ಸನ್ನಿಧಿಯಲ್ಲಿ ವಿಶೇಷ ಸೇವೆಗಳು ಜರಗಿದವು. ದೇವರಿಗೆ ಅಡಕೆ, ತೆಂಗು ಹಾಗೂ ಇತರ ಕೃಷಿ ಉತ್ಪನ್ನಗಳ ರಾಶಿ ಪೂಜೆ,ಆಹ್ವಾನಿತ ಭಜನಾ ತಂಡಗಳಿಂದ ಕುಣಿತ ಭಜನೆ ಸಾರ್ವಜನಿಕ ಅನ್ನ ಸಂತರ್ಪಣೆ ನಡೆಯಿತು.


ಸಂಜೆ ಸ್ಯಾಕ್ಸೋಫೋನ್ ವಾದನ, ನೃತ್ಯ ಕಾರ್ಯಕ್ರಮ, ದೇವರ ಉತ್ಸವ, ಅಷ್ಟಸೇವೆ, ಮಹಾಪೂಜೆ ನಡೆಯಿತು.
ರಾಕೇಶ ಫಡಕೆ, ಋತುಪರ್ಣ ಡೋಂಗ್ರೆ, ಪ್ರೇಮಾನಂದ ಫಡಕೆ, ಶಶಾಂಕ ಮರಾಠೆ, ಶ್ರೀಕಾಂತ ಗೋರೆ, ಸುಧೀರ ಪರಾಂಜಪೆ, ರಾಘವೇಂದ್ರ ಪಟವರ್ಧನ್ ಮತ್ತಿತರರು ವೈದಿಕ ಕಾರ್ಯಕ್ರಮಗಳಲ್ಲಿ ಸಹಕಾರ ನೀಡಿದರು.


ಆಡಳಿತ ಮೊಕ್ತೇಸರ ವೆಂಕಟೇಶ್ವರ ಭಟ್, ಗೌರವಾಧ್ಯಕ್ಷ ಜಗದೀಶ್ ಆರ್‌.ಫಡಕೆ,ಅಧ್ಯಕ್ಷ ವಾಸುದೇವ ಗೋಖಲೆ, ಉಪಾಧ್ಯಕ್ಷ ವಿಶ್ವನಾಥ ಶೆಟ್ಟಿ,ಕಾರ್ಯದರ್ಶಿ ಬಾಬು ಪೂಜಾರಿ, ಖಜಾಂಜಿ ಪ್ರಹ್ಲಾದ್ ಫಡಕೆ, ಜಾತ್ರೋತ್ಸವ ಸಮಿತಿಯ ಅಧ್ಯಕ್ಷ ಅಗರಿ ರಾಮಣ್ಣ ಶೆಟ್ಟಿ, ಕಾರ್ಯದರ್ಶಿ ಜಯಚಂದ್ರ ಎಂ.ಪಿ.,ಖಜಾಂಜಿ ರಾಮಚಂದ್ರ ಭಟ್ ಸದಸ್ಯರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ

Suddi Udaya

ಮೊಗ್ರು ಶ್ರೀರಾಮ ಶಿಶುಮಂದಿರದಲ್ಲಿ ಚಿಣ್ಣರ ಚಿಲಿಪಿಲಿ – 2025 ಬೇಸಿಗೆ ಶಿಬಿರ ಸಮಾರೋಪ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಜ್ಞಾನ ದಿನಾಚರಣೆ

Suddi Udaya

ಬಂದಾರು: ಹಣವನ್ನು ಪಣವಾಗಿಟ್ಟು ಕೋಳಿ ಅಂಕ ನಡೆಸುತ್ತಿದ್ದ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರ ದಾಳಿ: ಆರೋಪಿಗಳ ಸಹಿತ ನಗದು ಹಾಗೂ ಇತರ ಸೊತ್ತುಗಳ ವಶ

Suddi Udaya

ಆಲ್ ಇಂಡಿಯಾ ಕರಾಟೆ ಚಾಂಪಿಯನ್ ಶಿಪ್ 2025: ಸಾನ್ವಿ ಎಸ್ ಕೋಟ್ಯಾನ್ ಬಳಂಜರವರಿಗೆ ಪ್ರಶಸ್ತಿ

Suddi Udaya

ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಂದ ವೀಡಿಯೊ ಹಾಗೂ ಮಾಹಿತಿಪತ್ರ ಅನಾವರಣ

Suddi Udaya
error: Content is protected !!