22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ ಶ್ರೀ ಸನ್ಯಾಸಿಕಟ್ಟೆ ಪರಶುರಾಮ ದೇವಸ್ಥಾನದ ವಾರ್ಷಿಕ ದೀಪೋತ್ಸವ ಸಂಪನ್ನ

ಬೆಳ್ತಂಗಡಿ: ಮುಂಡಾಜೆಯ ಶ್ರೀ ಸನ್ಯಾಸಿಕಟ್ಟೆ ಪರಶುರಾಮ ದೇವಸ್ಥಾನದ ವಾರ್ಷಿಕ ದೀಪೋತ್ಸವ ಕಾರ್ಯಕ್ರಮ ಡಿ.1 ರಂದು ಜರಗಿತು.

ವೇದಮೂರ್ತಿ ರವಿಕಿರಣ ಮರಾಠೆ ಅವರ ನೇತೃತ್ವದಲ್ಲಿ ಬೆಳಿಗ್ಗೆ ಪರಶುರಾಮ, ಸಿದ್ಧಿ ವಿನಾಯಕ, ಅನ್ನಪೂರ್ಣೇಶ್ವರಿ ಸನ್ನಿಧಿಯಲ್ಲಿ ವಿಶೇಷ ಸೇವೆಗಳು ಜರಗಿದವು. ದೇವರಿಗೆ ಅಡಕೆ, ತೆಂಗು ಹಾಗೂ ಇತರ ಕೃಷಿ ಉತ್ಪನ್ನಗಳ ರಾಶಿ ಪೂಜೆ,ಆಹ್ವಾನಿತ ಭಜನಾ ತಂಡಗಳಿಂದ ಕುಣಿತ ಭಜನೆ ಸಾರ್ವಜನಿಕ ಅನ್ನ ಸಂತರ್ಪಣೆ ನಡೆಯಿತು.


ಸಂಜೆ ಸ್ಯಾಕ್ಸೋಫೋನ್ ವಾದನ, ನೃತ್ಯ ಕಾರ್ಯಕ್ರಮ, ದೇವರ ಉತ್ಸವ, ಅಷ್ಟಸೇವೆ, ಮಹಾಪೂಜೆ ನಡೆಯಿತು.
ರಾಕೇಶ ಫಡಕೆ, ಋತುಪರ್ಣ ಡೋಂಗ್ರೆ, ಪ್ರೇಮಾನಂದ ಫಡಕೆ, ಶಶಾಂಕ ಮರಾಠೆ, ಶ್ರೀಕಾಂತ ಗೋರೆ, ಸುಧೀರ ಪರಾಂಜಪೆ, ರಾಘವೇಂದ್ರ ಪಟವರ್ಧನ್ ಮತ್ತಿತರರು ವೈದಿಕ ಕಾರ್ಯಕ್ರಮಗಳಲ್ಲಿ ಸಹಕಾರ ನೀಡಿದರು.


ಆಡಳಿತ ಮೊಕ್ತೇಸರ ವೆಂಕಟೇಶ್ವರ ಭಟ್, ಗೌರವಾಧ್ಯಕ್ಷ ಜಗದೀಶ್ ಆರ್‌.ಫಡಕೆ,ಅಧ್ಯಕ್ಷ ವಾಸುದೇವ ಗೋಖಲೆ, ಉಪಾಧ್ಯಕ್ಷ ವಿಶ್ವನಾಥ ಶೆಟ್ಟಿ,ಕಾರ್ಯದರ್ಶಿ ಬಾಬು ಪೂಜಾರಿ, ಖಜಾಂಜಿ ಪ್ರಹ್ಲಾದ್ ಫಡಕೆ, ಜಾತ್ರೋತ್ಸವ ಸಮಿತಿಯ ಅಧ್ಯಕ್ಷ ಅಗರಿ ರಾಮಣ್ಣ ಶೆಟ್ಟಿ, ಕಾರ್ಯದರ್ಶಿ ಜಯಚಂದ್ರ ಎಂ.ಪಿ.,ಖಜಾಂಜಿ ರಾಮಚಂದ್ರ ಭಟ್ ಸದಸ್ಯರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

Related posts

ಸಚಿವ ಹೆಚ್.ಡಿ ಕುಮಾರಸ್ವಾಮಿಯನ್ನು ಭೇಟಿ ಮಾಡಿದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ: ಅಭಿವೃದ್ಧಿಗೆ ಇರುವ ಸಾಧ್ಯತೆ ಮತ್ತು ಅವಕಾಶಗಳ ಕುರಿತು ಮಾತುಕತೆ

Suddi Udaya

ಸೌಜನ್ಯ ಕೊಲೆ ಪ್ರಕರಣ: ಕಾನತ್ತೂರು ಕ್ಷೇತ್ರದಲ್ಲಿ ಪ್ರಮಾಣ ಪೂರೈಸಿದ ಧೀರಜ್ ಜೈನ್, ಮಲ್ಲಿಕ್ ಜೈನ್, ಉದಯ್ ಜೈನ್

Suddi Udaya

ನೆರಿಯ: ಕೋಲೋಡಿ ನಿವಾಸಿ ಜಯಂತ್ ಅಸೌಖ್ಯದಿಂದ ನಿಧನ

Suddi Udaya

ಕುಂಟಿನಿ ಬೂತ್ ಸಮಿತಿ ಎಸ್.ಡಿ.ಪಿ.ಐ ವತಿಯಿಂದ ಪಕ್ಷದ ಸಂಸ್ಥಾಪನ ದಿನಾಚರಣೆ

Suddi Udaya

ಸದಸ್ಯರು ತಂದ ಅವಿಶ್ವಾಸ ನಿರ್ಣಯ ಮಂಡನೆ ಯಶಸ್ವಿ: ಅಧ್ಯಕ್ಷ ಗಾದಿ ಕಳೆದುಕೊಂಡ ಪುದುವೆಟ್ಟು ಗ್ರಾಪಂ ಅಧ್ಯಕ್ಷೆ ಅನಿತಾ ಕುಮಾರಿ – ಉಪಾಧ್ಯಕ್ಷ ಪೂರ್ಣಾಕ್ಷ ಪ್ರಭಾರ ಅಧ್ಯಕ್ಷರಾಗಿ ಕಾರ್ಯನಿರ್ವಹಣೆ

Suddi Udaya

ದುಬೈಯಲ್ಲಿ ನಡೆದ ಇಫ್ತಾರ್ ಕೂಟದಲ್ಲಿ ಕಾಶಿಪಟ್ಣ ದಾರುನ್ನೂರ್ ಎಜ್ಯುಕೇಶನ್ ಸೆಂಟರ್ ಅಧ್ಯಕ್ಷ ತ್ವಾಕಾ ಅಹ್ಮದ್ ಮುಸ್ಲಿಯಾರ್ ರಿಗೆ ಸನ್ಮಾನ

Suddi Udaya
error: Content is protected !!