23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ ಶ್ರೀ ಸನ್ಯಾಸಿಕಟ್ಟೆ ಪರಶುರಾಮ ದೇವಸ್ಥಾನದ ವಾರ್ಷಿಕ ದೀಪೋತ್ಸವ ಸಂಪನ್ನ

ಬೆಳ್ತಂಗಡಿ: ಮುಂಡಾಜೆಯ ಶ್ರೀ ಸನ್ಯಾಸಿಕಟ್ಟೆ ಪರಶುರಾಮ ದೇವಸ್ಥಾನದ ವಾರ್ಷಿಕ ದೀಪೋತ್ಸವ ಕಾರ್ಯಕ್ರಮ ಡಿ.1 ರಂದು ಜರಗಿತು.

ವೇದಮೂರ್ತಿ ರವಿಕಿರಣ ಮರಾಠೆ ಅವರ ನೇತೃತ್ವದಲ್ಲಿ ಬೆಳಿಗ್ಗೆ ಪರಶುರಾಮ, ಸಿದ್ಧಿ ವಿನಾಯಕ, ಅನ್ನಪೂರ್ಣೇಶ್ವರಿ ಸನ್ನಿಧಿಯಲ್ಲಿ ವಿಶೇಷ ಸೇವೆಗಳು ಜರಗಿದವು. ದೇವರಿಗೆ ಅಡಕೆ, ತೆಂಗು ಹಾಗೂ ಇತರ ಕೃಷಿ ಉತ್ಪನ್ನಗಳ ರಾಶಿ ಪೂಜೆ,ಆಹ್ವಾನಿತ ಭಜನಾ ತಂಡಗಳಿಂದ ಕುಣಿತ ಭಜನೆ ಸಾರ್ವಜನಿಕ ಅನ್ನ ಸಂತರ್ಪಣೆ ನಡೆಯಿತು.


ಸಂಜೆ ಸ್ಯಾಕ್ಸೋಫೋನ್ ವಾದನ, ನೃತ್ಯ ಕಾರ್ಯಕ್ರಮ, ದೇವರ ಉತ್ಸವ, ಅಷ್ಟಸೇವೆ, ಮಹಾಪೂಜೆ ನಡೆಯಿತು.
ರಾಕೇಶ ಫಡಕೆ, ಋತುಪರ್ಣ ಡೋಂಗ್ರೆ, ಪ್ರೇಮಾನಂದ ಫಡಕೆ, ಶಶಾಂಕ ಮರಾಠೆ, ಶ್ರೀಕಾಂತ ಗೋರೆ, ಸುಧೀರ ಪರಾಂಜಪೆ, ರಾಘವೇಂದ್ರ ಪಟವರ್ಧನ್ ಮತ್ತಿತರರು ವೈದಿಕ ಕಾರ್ಯಕ್ರಮಗಳಲ್ಲಿ ಸಹಕಾರ ನೀಡಿದರು.


ಆಡಳಿತ ಮೊಕ್ತೇಸರ ವೆಂಕಟೇಶ್ವರ ಭಟ್, ಗೌರವಾಧ್ಯಕ್ಷ ಜಗದೀಶ್ ಆರ್‌.ಫಡಕೆ,ಅಧ್ಯಕ್ಷ ವಾಸುದೇವ ಗೋಖಲೆ, ಉಪಾಧ್ಯಕ್ಷ ವಿಶ್ವನಾಥ ಶೆಟ್ಟಿ,ಕಾರ್ಯದರ್ಶಿ ಬಾಬು ಪೂಜಾರಿ, ಖಜಾಂಜಿ ಪ್ರಹ್ಲಾದ್ ಫಡಕೆ, ಜಾತ್ರೋತ್ಸವ ಸಮಿತಿಯ ಅಧ್ಯಕ್ಷ ಅಗರಿ ರಾಮಣ್ಣ ಶೆಟ್ಟಿ, ಕಾರ್ಯದರ್ಶಿ ಜಯಚಂದ್ರ ಎಂ.ಪಿ.,ಖಜಾಂಜಿ ರಾಮಚಂದ್ರ ಭಟ್ ಸದಸ್ಯರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

Related posts

ಅ.20 : ಬೆಳಾಲಿನಲ್ಲಿ ಯುವಸಿರಿ- ರೈತ ಭಾರತದ ಐಸಿರಿ: 5೦೦ಕ್ಕೂ ಮಿಕ್ಕಿ ಕಾಲೇಜು ವಿದ್ಯಾರ್ಥಿಗಳಿಂದ ನೇಜಿನಾಟಿ

Suddi Udaya

ಜೀವಜಲಕ್ಕಾಗಿ ಕೆರೆಗಳ ಪುನಶ್ಚೇತನ : ಧರ್ಮಸ್ಥಳ ಯೋಜನೆಯಿಂದ ಒಂದೇ ವರ್ಷದಲ್ಲಿ ರಾಜ್ಯದ 160 ಕೆರೆಗಳಿಗೆ ಕಾಯಕಲ್ಪ

Suddi Udaya

ಕಾಜೂರು ಮಖಾಂ ಉರೂಸ್ ; ತಾಜುಲ್ ಉಲಮಾ ಸನ್ನಿಧಿಯಿಂದ ಪ್ರಚಾರಕ್ಕೆ ಚಾಲನೆ

Suddi Udaya

ವೇಣೂರು ಮಹಾಮಸ್ತಕಾಭಿಷೇಕ: ಡಿ. 17 ರಂದು ಬೃಹತ್ ವೈದ್ಯಕೀಯ ಶಿಬಿರ

Suddi Udaya

ಉಜಿರೆ: ಎಸ್.ಡಿ.ಎಂ ಪ ಪೂ ಕಾಲೇಜಿನಲ್ಲಿ ಆಟಿದ ಗೌಜಿ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶರನ್ನವರಾತ್ರಿ ಪ್ರಯುಕ್ತ ಚಂಡಿಕಾ ಹೋಮ, ದುರ್ಗಾಪೂಜೆ

Suddi Udaya
error: Content is protected !!