September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ ಶ್ರೀ ಸನ್ಯಾಸಿಕಟ್ಟೆ ಪರಶುರಾಮ ದೇವಸ್ಥಾನದ ವಾರ್ಷಿಕ ದೀಪೋತ್ಸವ ಸಂಪನ್ನ

ಬೆಳ್ತಂಗಡಿ: ಮುಂಡಾಜೆಯ ಶ್ರೀ ಸನ್ಯಾಸಿಕಟ್ಟೆ ಪರಶುರಾಮ ದೇವಸ್ಥಾನದ ವಾರ್ಷಿಕ ದೀಪೋತ್ಸವ ಕಾರ್ಯಕ್ರಮ ಡಿ.1 ರಂದು ಜರಗಿತು.

ವೇದಮೂರ್ತಿ ರವಿಕಿರಣ ಮರಾಠೆ ಅವರ ನೇತೃತ್ವದಲ್ಲಿ ಬೆಳಿಗ್ಗೆ ಪರಶುರಾಮ, ಸಿದ್ಧಿ ವಿನಾಯಕ, ಅನ್ನಪೂರ್ಣೇಶ್ವರಿ ಸನ್ನಿಧಿಯಲ್ಲಿ ವಿಶೇಷ ಸೇವೆಗಳು ಜರಗಿದವು. ದೇವರಿಗೆ ಅಡಕೆ, ತೆಂಗು ಹಾಗೂ ಇತರ ಕೃಷಿ ಉತ್ಪನ್ನಗಳ ರಾಶಿ ಪೂಜೆ,ಆಹ್ವಾನಿತ ಭಜನಾ ತಂಡಗಳಿಂದ ಕುಣಿತ ಭಜನೆ ಸಾರ್ವಜನಿಕ ಅನ್ನ ಸಂತರ್ಪಣೆ ನಡೆಯಿತು.


ಸಂಜೆ ಸ್ಯಾಕ್ಸೋಫೋನ್ ವಾದನ, ನೃತ್ಯ ಕಾರ್ಯಕ್ರಮ, ದೇವರ ಉತ್ಸವ, ಅಷ್ಟಸೇವೆ, ಮಹಾಪೂಜೆ ನಡೆಯಿತು.
ರಾಕೇಶ ಫಡಕೆ, ಋತುಪರ್ಣ ಡೋಂಗ್ರೆ, ಪ್ರೇಮಾನಂದ ಫಡಕೆ, ಶಶಾಂಕ ಮರಾಠೆ, ಶ್ರೀಕಾಂತ ಗೋರೆ, ಸುಧೀರ ಪರಾಂಜಪೆ, ರಾಘವೇಂದ್ರ ಪಟವರ್ಧನ್ ಮತ್ತಿತರರು ವೈದಿಕ ಕಾರ್ಯಕ್ರಮಗಳಲ್ಲಿ ಸಹಕಾರ ನೀಡಿದರು.


ಆಡಳಿತ ಮೊಕ್ತೇಸರ ವೆಂಕಟೇಶ್ವರ ಭಟ್, ಗೌರವಾಧ್ಯಕ್ಷ ಜಗದೀಶ್ ಆರ್‌.ಫಡಕೆ,ಅಧ್ಯಕ್ಷ ವಾಸುದೇವ ಗೋಖಲೆ, ಉಪಾಧ್ಯಕ್ಷ ವಿಶ್ವನಾಥ ಶೆಟ್ಟಿ,ಕಾರ್ಯದರ್ಶಿ ಬಾಬು ಪೂಜಾರಿ, ಖಜಾಂಜಿ ಪ್ರಹ್ಲಾದ್ ಫಡಕೆ, ಜಾತ್ರೋತ್ಸವ ಸಮಿತಿಯ ಅಧ್ಯಕ್ಷ ಅಗರಿ ರಾಮಣ್ಣ ಶೆಟ್ಟಿ, ಕಾರ್ಯದರ್ಶಿ ಜಯಚಂದ್ರ ಎಂ.ಪಿ.,ಖಜಾಂಜಿ ರಾಮಚಂದ್ರ ಭಟ್ ಸದಸ್ಯರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

Related posts

ಮೇ 3 -12: ಕಾಜೂರು ಉರೂಸ್ ಮಹಾಸಂಭ್ರಮ: ಮೇ 12 ರಂದು ಸರ್ವಧರ್ಮೀಯರ ಸೌಹಾರ್ದ ಸಂಗಮ- ಉರೂಸ್ ಸಮಾರೋಪ

Suddi Udaya

ಆಳ್ವಾಸ್ ಆಯುರ್ವೇದ ವೈದ್ಯಕೀಯ ಕಾಲೇಜಿನಲ್ಲಿ ‘ಸಂಪನ್ನಮ್–2026’ ಬೀಳ್ಕೊಡುಗೆ ಸಮಾರಂಭ

Suddi Udaya

ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಬೆಳ್ತಂಗಡಿ : ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ : ಬೆಳ್ತಂಗಡಿ ಪೊಲೀಸರಿಂದ ಆರೋಪಿ ಬಂಧನ

Suddi Udaya

ಉಜಿರೆ ಶ್ರೀ ಧ.ಮಂ.ಅ. ಸೆಕೆಂಡರಿ ಶಾಲೆಯ ಮುಖ್ಯ ಶಿಕ್ಷಕ ಸುರೇಶ್ ಕೆ. ಸೇವಾ ನಿವೃತ್ತಿ

Suddi Udaya

ಯುವವಾಹಿನಿ ಉಪ್ಪಿನಂಗಡಿ ಘಟಕದ ಅಧ್ಯಕ್ಷರಾಗಿ ಮನೋಜ್ ಎನ್ ಸಾಲ್ಯಾನ್ ಆಯ್ಕೆ

Suddi Udaya
error: Content is protected !!