32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ : ಹೋಲಿ ರಿಡೀಮರ್ ಆಂ.ಮಾ. ಶಾಲಾ ವಾರ್ಷಿಕೋತ್ಸವ

ಬೆಳ್ತಂಗಡಿ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ನ.29ರಂದು ಶಾಲಾ ವಾರ್ಷಿಕೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.

ಶಾಲಾ ಸಂಚಾಲಕರಾದ ಅತೀ ವಂ ಫಾ| ವೊಲ್ಟರ್ ಡಿಮೆಲ್ಲೋರವರು ಕಾರ್ಯಕ್ರಮಕ್ಕೆ ಶುಭ ಹಾರೈಸಿ ಆಶೀರ್ವದಿಸಿದರು.

ಕಾರ್ಯಕ್ರಮದ ಮುಖ್ಯ ಅತಿಥಿ ಲೆಕ್ಸಾ ಲೈಟಿಂಗ್ ಟೆಕ್ನಾಲಜಿ ಇದರ ಸಂಸ್ಥಾಪಕರು ಹಾಗೂ ನಿರ್ದೇಶಕರಾದ ರೊನಾಲ್ಡ್ ಸಿಲ್ವನ್ ಡಿಸೋಜ ರವರು ಪ್ರೋತ್ಸಾಹದ ನುಡಿಗಳಿಂದ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಶಾಲಾ ಮುಖ್ಯೋಪಾಧ್ಯಾಯರಾದ ವಂ ಫಾ| ಕ್ಲಿಫರ್ಡ್ ಪಿಂಟೋರವರು ಅತಿಥಿ ಅಭ್ಯಾಗತರನ್ನು ಸ್ವಾಗತಿಸಿದರು. ಸಹ ಶಿಕ್ಷಕಿ ಶ್ರೀಮತಿ ಬ್ಲೆಂಡಿನ್ ರೊಡ್ರಿಗಸ್ ಶಾಲಾ ವಾರ್ಷಿಕ ಕಾರ್ಯಕ್ರಮಗಳ ವರದಿಯನ್ನು ವಾಚಿಸಿದರು. ಕ್ರೀಡಾ ಕ್ಷೇತ್ರದಲ್ಲಿ ಸಾಧನೆಗೈದ ವಿದ್ಯಾರ್ಥಿಗಳನ್ನು ಮತ್ತು 2022-23 ನೇ ಸಾಲಿನಲ್ಲಿ ಎ‌ಸ್ ಎಸ್ ಎಲ್ ಸಿ ಪಬ್ಲಿಕ್ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ಕಳೆದ ಶೈಕ್ಷಣಿಕ ವರ್ಷದಲ್ಲಿ ತರಗತಿವಾರು ಗರಿಷ್ಟ ಅಂಕ ಪಡೆದ ವಿದ್ಯಾರ್ಥಿಗಳನ್ನು ಗುರುತಿಸಿ ಅಭಿನಂದಿಸಲಾಯಿತು. ಶಾಲಾ ವಾರ್ಷಿಕೋತ್ಸವಕ್ಕೆ ಧನ ಸಹಾಯ ನೀಡಿದ ಮಹನೀಯರನ್ನು ಗೌರವಿಸಲಾಯಿತು.

ವೇದಿಕೆಯಲ್ಲಿ ಚರ್ಚ್ ಪಾಲನಾ ಮಂಡಳಿಯ ಉಪಾಧ್ಯಕ್ಷರಾದ ವಾಲ್ಟರ್ ಮೋನಿಸ್, ಕಾರ್ಯದರ್ಶಿ ಗಿಲ್ಬರ್ಟ್ ಪಿಂಟೋ, ಚರ್ಚ್ ನ 21 ಆಯೋಗಗಳ ಸಂಯೋಜಕಿ ಶ್ರೀಮತಿ ಪೌಲಿನ್ ರೇಗೊ, ಶಾಲಾ ಶಿಕ್ಷಕ ರಕ್ಷಕ ಸಂಘದ ಉಪಾಧ್ಯಕ್ಷೆ ಶ್ರೀಮತಿ ಸುಪ್ರಿಯಾ ಡಿಸೋಜ, ಚರ್ಚ್ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ರೆನ್ನಿ ವಾಸ್ ಉಪಸ್ಥಿತರಿದ್ದರು.


ಸಭಾ ಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳು ಮೊಬೈಲ್ ಮತ್ತು ಪ್ಲಾಸ್ಟಿಕ್ ಬಳಕೆ, ಮಾದಕ ದ್ರವ್ಯ, ಗೆಳೆತನ, ಸಮಾನತೆ ಇತ್ಯಾದಿ ವಿಷಯಗಳನ್ನು ಹೊಂದಿದ ನೃತ್ಯ ರೂಪಕಗಳ ಜೊತೆಗೆ, ಸಿನಿಮಾ ಹಾಡುಗಳಿಗೆ ಹಾಡಿ ಕುಣಿದು ನಲಿದರು. ಮರಳಿನಲ್ಲಿ ಅರಳಿದ ಕಲೆ, ಕರಾಟೆ, ಶಾಸ್ತ್ರೀಯ ಸಂಗೀತವು ವಿಶೇಷ ಆಕರ್ಷಣೆಯಾಗಿತ್ತು. ಅಪಾರ ಸಂಖ್ಯೆಯಲ್ಲಿ ಪೋಷಕರು ವಿದ್ಯಾಭಿಮಾನಿಗಳು ಕಾರ್ಯಕ್ರಮಕ್ಕೆ ಸಾಕ್ಷಿಯಾದರು. ವಿದ್ಯಾರ್ಥಿಗಳಾದ ರೀಶೆಲ್ ಬೆನ್ನಿಸ್, ಮಹಮ್ಮದ್ ರಾಯೀಝ್ ಮತ್ತು ಸಹಶಿಕ್ಷಕಿ ಶ್ರೀಮತಿ ಪ್ರೀತಾ ಕಾರ್ಯಕ್ರಮವನ್ನು ನಿರ್ವಹಿಸಿದರು. ಸಹಶಿಕ್ಷಕಿ ಶ್ರೀಮತಿ ಅನಿತಾ ವಂದಿಸಿದರು.

Related posts

ಪೆರ್ಲ ಬೈಪಾಡಿ ಸಿದ್ಧಿಶ್ರೀ ಲೀಫ್ ಕಪ್ ಇಂಡಸ್ಟ್ರೀಸ್ ನವೀಕೃತ ಯಂತ್ರದ ಉದ್ಘಾಟನೆ

Suddi Udaya

ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಉತ್ಸವ

Suddi Udaya

ಬೆಳ್ತಂಗಡಿ ಪೃಥ್ವಿ ಜುವೆಲ್ಸ್ ನಲ್ಲಿ ಸ್ವಾತಂತ್ರೋತ್ಸವ ಆಚರಣೆ

Suddi Udaya

ಸರ್ವರನ್ನೂ ಹಾಗೂ ಸರ್ವ ಕ್ಷೇತ್ರಗಳನ್ನೂ ಒಳಗೊಂಡ ಸಮಗ್ರ ಅಭಿವೃದ್ಧಿಗೆ ಒತ್ತು ನೀಡಿದ ಬಜೆಟ್ : ರಕ್ಷಿತ್ ಶಿವರಾಂ

Suddi Udaya

ರಾಜ್ಯಮಟ್ಟದ ಭಾಷಣ ಸ್ಪರ್ಧೆ: ಧರ್ಮಸ್ಥಳ ಶ್ರೀ ಮಂ.ಸ್ವಾ.ಅ. ಹಿ.ಪ್ರಾ. ಶಾಲೆಯ ವಿದ್ಯಾರ್ಥಿ ಅಮಿತ್ ಪ್ರಥಮ ಸ್ಥಾನ

Suddi Udaya

ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಸೌತಡ್ಕ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ನಿಂದ ರೂ.2 ಲಕ್ಷ ದೇಣಿಗೆ

Suddi Udaya
error: Content is protected !!