25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಧಾರ್ಮಿಕ

ಧರ್ಮಸ್ಥಳ ಮೇಳದ ತಿರುಗಾಟ ಪ್ರಾರಂಭ

ಧರ್ಮಸ್ಥಳ : ಧರ್ಮಸ್ಥಳದ ಯಕ್ಷಗಾನ ಮಂಡಳಿಯ ಸೇವಾ ಹರಿಕೆ ಬಯಲಾಟ ಪ್ರದರ್ಶಕ್ಕಾಗಿ ಶನಿವಾರ ತಿರುಗಾಟ ಪ್ರಾರಂಭಗೊಂಡಿದೆ.
ಧರ್ಮಸ್ಥಳದಲ್ಲಿ ಶನಿವಾರ ಪೂರ್ವಾಹ್ನ ಗಂಟೆ 8.30ಕ್ಕೆ ಛತ್ರ  ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಬಳಿಕ ಯಕ್ಷಗಾನ ಮೇಳದ ಶ್ರೀ ಗಣಪತಿ ದೇವರ ಮೂರ್ತಿಯನ್ನು ಭವ್ಯ ಮೆರವಣಿಗೆಯಲ್ಲಿ ಮಂಜುಕೃಪಾ ನಿವಾಸಕ್ಕೆ ಕೊಂಡು ಹೋಗಿ ಅಲ್ಲಿ ಗಣಹೋಮ ಮತ್ತು ಮಹಾಪೂಜೆ ನೆರವೇರಿಸಲಾಯಿತು.


ಈ ಸಂದರ್ಭದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು , ಹೇಮಾವತಿ ವಿ. ಹೆಗ್ಗಡೆಯವರು, ಡಿ. ಹರ್ಷೇಂದ್ರ ಕುಮಾರ್, ಸುಪ್ರಿಯಾ ಹರ್ಷೇಂದ್ರ ಕುಮಾರ್ ಹಾಗೂ ಯಕ್ಷಗಾನ ಕಲಾವಿದರು, ಮೇಳದಲ್ಲಿ  ವ್ಯವಸ್ಥಾಪಕರಾದ ಗಿರೀಶ್ ಹೆಗ್ಡೆ ಮತ್ತು ಪುಷ್ಪರಾಜ ಶೆಟ್ಟಿ ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.
2024ರ ಮೇ 23ರ ವರೆಗೆ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಕ್ತಾದಿಗಳಿಂದ ಹರಿಕೆ ಸೇವಾ ಬಯಲಾಟ ಪ್ರದರ್ಶನ ಆಯೋಜಿಸಲಾಗಿದೆ.


ಪ್ರತಿದಿನ ಸಂಜೆ 7 ಗಂಟೆಯಿಂದ 12 ಗಂಟೆವರೆಗೆ ಕಾಲಮಿತಿ ಯಕ್ಷಗಾನ ಪ್ರದರ್ಶನದಲ್ಲಿ ಪೌರಾಣಿಕ ಪ್ರಸಂಗಗಳನ್ನು ಮಾತ್ರ ಸಾದರಪಡಿಸಲಾಗುತ್ತದೆ.

Related posts

ಮದ್ದಡ್ಕದಲ್ಲಿ ಸ್ಕೂಟಿ ಹಾಗೂ ಆಪೆ ರಿಕ್ಷಾ ಡಿಕ್ಕಿ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ.ಶಾಲೆಯಲ್ಲಿ ಮಕ್ಕಳ ದಿನಾಚರಣೆ: ಹೆತ್ತವರ ಪೋಷಕರ/ಮಹಾಸಭೆ

Suddi Udaya

ಬೆಳ್ತಂಗಡಿ : ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ‘ಅಭಿನಂದನಂ’ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

Suddi Udaya

ಅ.13-19: ಕನ್ಯಾಡಿ | ಸ.ಉ.ಹಿ.ಪ್ರಾ. ಶಾಲೆಯಲ್ಲಿ ವಾಣಿ ಪ.ಪೂ. ಕಾಲೇಜು ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರ

Suddi Udaya

ಕಾಯರ್ತಡ್ಕದಲ್ಲಿ ಶ್ರೀ ಕೃಷ್ಣ ಹೆಲ್ತ್ ಸೆಂಟರ್ ಪ್ರಾರಂಭ

Suddi Udaya

ಉಜಿರೆ ಕಕ್ಕರೆಬೆಟ್ಟು ಮನೆ ಕೆಡವಿ, ಸೊತ್ತುಗಳನ್ನು ಹೊರಗೆ ಎಸೆದ ಪ್ರಕರಣ: ಆರೋಪಿ ವಿರುದ್ಧ ಕೇಸು ದಾಖಲು

Suddi Udaya
error: Content is protected !!